ರಾಯಚೋಟಿ (ಆಂಧ್ರಪ್ರದೇಶ):ರಾಯಚೋಟಿ ಕ್ಷೇತ್ರದ ಶ್ರೀವೀರಭದ್ರ ದೇವರ ಹಾಗೂ ಭದ್ರಕಾಳಿ ಅಮ್ಮನವರ 10 ದಿನಗಳ ಜಾತ್ರಾ ಮಹೋತ್ಸವದ ಅಂಗವಾಗಿ ಶಿವರಾತ್ರಿ ಅಮಾವಾಸ್ಯೆಯ ಸಂದರ್ಭದಲ್ಲಿ ಸೋಮವಾರ ದೇವಾಲಯದ ಪ್ರಾಂಗಣದಲ್ಲಿ ಬೃಹತ್ ಚಂಡಿಹೋಮ ಜರುಗಿತು.
ವಿಶೇಷವಾಗಿ ನಿರ್ಮಿಸಲಾಗಿದ್ದ ಹೋಮಕುಂಡದಲ್ಲಿ ಸತತ 5 ತಾಸುಗಳ ವರೆಗೆ ಕೊ;ಲನು ಭಾರತಿ ಪಂಚಾಂಗಕರ್ತರು ಹಾಗೂ ನಂದ್ಯಾಲ ಬ್ರಹ್ಮಶ್ರೀ ನಂದುಲಮಠದ ಶ್ರೀಶಶಿಭೂಷಣ ಸಿದ್ಧಾಂತಿ ಸ್ವಾಮೀಜಿ ನೇತೃತ್ವದಲ್ಲಿ ಜರುಗಿದ ಈ ಚಂಡಿ ಹೋಮದಲ್ಲಿ ಶಿವಶ್ರೀ ಎಂ. ರಾಚಯೋಗೀಶ ಶಾಸ್ತ್ರಿ ಸೇರಿದಂತೆ ಹಲವಾರು ವೈದಿಕರು ಪಾಲ್ಗೊಂಡರು.
ಚಿಕ್ಕಮಗಳೂರು ಜಿಲ್ಲೆ ಬೇರುಗಂಡಿ ಬೃಹನ್ಮಠದ ಶ್ರೀರೇಣುಕ ಮಹಾಂತ ಶಿವಾಚಾರ್ಯ ಸ್ವಾಮೀಜಿ ಹಾಗೂ ಬೆಳಗಾವಿ ಜಿಲ್ಲೆ ಸಂಪಗಾಂವ ಕಟಾಪುರಿ ಹಿರೇಮಠದ ಶ್ರೀಚೆನ್ನವೀರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯವಹಿಸಿ ಆಶೀರ್ವದಿಸಿದರು.
ರಾಯಚೋಟಿ ಶ್ರೀವೀರಭದ್ರೇಶ್ವರ ದೇವಾಲಯ ಟ್ರಸ್ಟ್ ಅಧ್ಯಕ್ಷೆ ಪೋಲಂರೆಡ್ಡಿ ವಿಜಯಮ್ಮ, ಕಾರ್ಯನಿರ್ವಾಹಕ ಅಧಿಕಾರಿ ಡಿ.ವ್ಹಿ.ರಮಣರೆಡ್ಡಿ, ಧರ್ಮದರ್ಶಿ ಸಿ.ಎಂ. ಶಿವಶರಣ ಕಲಬುರ್ಗಿ, ಹುಬ್ಬಳ್ಳಿಯ ರಾಯಚೋಟಿ ಶ್ರೀವೀರಭದ್ರೇಶ್ವರಸ್ವಾಮಿ ರಥೋತ್ಸವ ಸೇವಾ ಸಮಿತಿಯ ಗಿರೀಶಕುಮಾರ ಬುಡರಕಟ್ಟಿಮಠ, ಪಿ.ಎಂ. ಚಿಕ್ಕಮಠ, ಶಂಕರ ಕುರ್ತಕೋಟಿ, ರಮೇಶಕುಮಾರ ಬುಡರಕಟ್ಟಿಮಠ, ಗೋವಾದ ಶಂಕರ ಹಿರೇಮಠ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಭಕ್ತಗಣ ಪಾಲ್ಗೊಂಡು ಶ್ರೀವೀರಭದ್ರ ದೇವರ ಹಾಗೂ ಭದ್ರಕಾಳಿ ಅಮ್ಮನವರ ಆಶೀರ್ವಾದ ಪಡೆದರು.
ಹಠಾತ್ ಹೃದಯಾಘಾತಕ್ಕೆ ಮತ್ತೆರಡು ಬಲಿ; ಕ್ರಿಕೆಟ್​ ಆಡುತ್ತಲೇ ಕುಸಿದು ಬಿದ್ದ ಆಟಗಾರರ ಸಾವು

ಅಳಿಯನನ್ನೇ ಅಪಹರಿಸಿ ಮಾನಸಿಕ ಅಸ್ವಸ್ಥ ಎಂದು ಬಿಂಬಿಸಿದ ಅತ್ತೆ; ಕಾಂಗ್ರೆಸ್ ನಾಯಕಿ ದಿವ್ಯಪ್ರಭಾ ಮತ್ತು ಕುಟುಂಬಸ್ಥರ ವಿರುದ್ಧ ಕೇಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 1 =
Remember me
