ದೆಹಲಿ:ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ಹಿಂಪಡೆಗೆ ಆಗ್ರಹಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ರಾಷ್ಟ್ರ ರಾಜಧಾನಿ ದೆಹಲಿ ಅಕ್ಷರಶಃ ರಣರಂಗವಾಗಿದೆ. ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದ ರೈತ ಮುಖಂಡರು ಸರ್ಕಾರದ ಮಾರ್ಗ ಸೂಚಿಯನ್ನ ಬ್ರೇಕ್​ ಮಾಡಿದ್ದಾರೆ. ಪೊಲೀಸ್​ ಸರ್ಪಗಾವಲನ್ನೇ ದಾಟಿಕೊಂಡು ಕೆಂಪುಕೋಟೆಗೆ ಮುತ್ತಿಗೆ ಹಾಕಿದ ರೈತರು, ಧ್ವಜಸ್ತಂಭವೇರಿ ಕಿಸಾನ್​ ಯೂನಿಯನ್​ ಧ್ವಜ ಹಾರಿಸಿದ್ದಾರೆ.
ಕೆಂಪುಕೋಟೆ ಮೇಲೆ ಜಮಾವಣೆಗೊಂಡ ರೈತರ ಗುಂಪನ್ನು ಚದುರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಇತಿಹಾಸದಲ್ಲಿ ಇದೇ ಮೊದಲಬಾರಿಗೆ ಕೆಂಪುಕೋಟೆಗೆ ಮುತ್ತಿಗೆ ಹಾಕಲಾಗಿದ್ದು, ಗಣರಾಜ್ಯೋತ್ಸವ ದಿನದಂದೇ ಇಂತಹ ಘಟನೆ ನಡೆದಿರುವುದು ವಿಪರ್ಯಾಸ.ಇದನ್ನೂ ಓದಿರಿVIDEO| ಹಿಂಸಾಚಾರಕ್ಕೆ ತಿರುಗಿದ ‘ಟ್ರ್ಯಾಕ್ಟರ್​ ಪರೇಡ್​’, ತಲ್ವಾರ್​ ಹಿಡಿದು ಬಂದ ರೈತರು!
ಪ್ರಾರಂಭದಿಂದ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಇಂದು ಸರ್ಕಾರದ ಗೈಡ್​ಲೈನ್ಸ್​ ಅನ್ನೇ ಉಲ್ಲಂಘಿಸಿ, ಕೆಂಪುಕೋಟೆಗೆ ಮುತ್ತಿಗೆ ಹಾಕಿದ್ದಕ್ಕೆ ಸಾರ್ವಜನಿಕ ವಲಯದಲ್ಲೂ ಆಕ್ರೋಶ ವ್ಯಕ್ತವಾಗುತ್ತಿದೆ. ಅಲ್ಲದೆ, 11 ಸುತ್ತಿನ ಮಾತುಕತೆ ನಡೆಸಿದರೂ ಕೇಂದ್ರ ಸರ್ಕಾರದಿಂದ ರೈತರ ಬೇಡಿಕೆ ಈಡೇರಿಲ್ಲ. ಇನ್ನೆಷ್ಟು ದಿನ ರೈತರು ಕಾಯಬೇಕು? ಎಂಬ ಮಾತು ಕೂಡ ಕೇಳಿ ಬರುತ್ತಿದೆ.
VIDEO| ಹಿಂಸಾಚಾರಕ್ಕೆ ತಿರುಗಿದ ‘ಟ್ರ್ಯಾಕ್ಟರ್​ ಪರೇಡ್​’, ತಲ್ವಾರ್​ ಹಿಡಿದು ಬಂದ ರೈತರು!

ಸ್ವಂತ ಹೆಣ್ಣುಮಕ್ಕಳನ್ನು ಬೆತ್ತಲೆಗೊಳಿಸಿ ಪೂಜೆ ಮಾಡಿದ್ರು, ಬಳಿಕ ತಲೆ ಒಡೆದು ಕೊಂದೇಬಿಟ್ರು! ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಿ

ಕೊನೆಗೂ ಸಾವಿನ ಮನೆಯ ಕದ ತಟ್ಟಿದ ನಟಿ ಜಯಶ್ರೀ! ಕಳೆದ 7 ತಿಂಗಳಲ್ಲಿ ಆಕೆ ಅನುಭವಿಸಿದ್ದ ನರಕಯಾತನೆ ಇಲ್ಲಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
