ಗುರುದಾಸ್‌ಪುರ:ಪಂಜಾಬ್‌ನ ಗುರುದಾಸ್‌ಪುರದಲ್ಲಿ ಮಹಿಳೆಯೊಬ್ಬರ ಮೇಲೆ ದೌರ್ಜನ್ಯವೆಸಗಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಪತಿಯೊಬ್ಬ ತನ್ನ ಹೆಂಡತಿಯನ್ನು ರಸ್ತೆಯಲ್ಲಿ ಥಳಿಸಿ, ಕೂದಲನ್ನು ಹಿಡಿದು ಎಳೆದುಕೊಂಡು ಹೋಗಿರುವ ಘಟನೆ ಬೆಳಕಿಗೆ ಬಂದಿದೆ.
ಹಲ್ಲೆಯಿಂದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಪ್ರಸ್ತುತ ಧಾರಿವಾಲ್ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚೋಧ್ಯಾನ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವರದಕ್ಷಿಣೆ ಬೇಡಿಕೆಯ ಮೇರೆಗೆ ಪತಿ ತನಗೆ ಪದೇ ಪದೇ ಹೊಡೆದು ಹಿಂಸೆ ನೀಡುತ್ತಿದ್ದ ಎಂದು ಮಹಿಳೆಯ ತಾಯಿ ಭೈನಿ ಮಿಯಾನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ವರದಕ್ಷಿಣೆ ವಿಚಾರವಾಗಿ ಅತ್ತೆಯಂದಿರಿಂದ ಹಲ್ಲೆಗೊಳಗಾಗಿ ಗಂಡನ ಮನೆಯಿಂದ ಚಿಕ್ಕಮ್ಮನೊಂದಿಗೆ ಮಹಿಳೆ ವಾಸವಾಗಿದ್ದಳು. ಆಕೆಯ ನಿರ್ಧಾರದಿಂದ ಕುಪಿತನಾದ ಪತಿ ಮನೆಗೆ ಬಂದು ಆಕೆಯನ್ನು ಥಳಿಸಿ ಆಕೆಯ ಕೂದಲಿಂದ ಎಳೆದೊಯ್ದು ತನ್ನ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಮಹಿಳೆ ತನ್ನ ಪತಿಯಿಂದ ಕ್ರೌರ್ಯಕ್ಕೆ ಒಳಗಾದಾಗ ಗ್ರಾಮದ ಜನರು ನೋಡುತ್ತಾ ನಿಂತಿದ್ದರು. ವರದಕ್ಷಿಣೆಯ ಬೇಡಿಕೆಯ ಮೇಲೆ ತನ್ನ ಮಗಳು ಆಕೆ ಪತಿ ಮತ್ತು ಅತ್ತೆ ನಿರಂತರವಾಗಿ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ಆರೋಪಿಸಿದ್ದಾರೆ.
ಈ ಸಂಬಂಧ ಪೊಲೀಸರು ದೂರು ಸ್ವೀಕರಿಸಿದ್ದು, ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಂಡ ನಂತರ ಆರೋಪಿಗಳ ವಿರುದ್ಧ ತನಿಖೆ ಆರಂಭಿಸುವುದಾಗಿ ಸಬ್ ಇನ್ಸ್‌ಪೆಕ್ಟರ್ ಮೋಹನ್ ಲಾಲ್ ತಿಳಿಸಿದ್ದಾರೆ.
ಈ ನಟನ ಜತೆ ಬಿಕಿನಿಯಲ್ಲಿ ನಟಿಸಲು ನಾನು ರೆಡಿ! ನಟಿ ಗಾಯತ್ರಿ ಜಯರಾಮನ್​ ಓಪನ್​ ಟಾಕ್​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × three =
Remember me
