ಗುರುಗ್ರಾಮ:ತಂದೆಯೊಬ್ಬ 9 ವರ್ಷದ ಮಗಳಿಗೆ ಹಿಗ್ಗಾಮುಗ್ಗ ಥಳಿಸಿ ಕುದಿಯುವ ಹಾಲನ್ನು ಆಕೆಯ ಮೇಲೆ ಸುರಿದಿದ್ದಾನೆ. ಈ ಘಟನೆ ಗುರುಗ್ರಾಮದಲ್ಲಿ ನಡೆದಿದೆ.
ಭೋಂಡ್ಸಿ ಪ್ರದೇಶದಲ್ಲಿನ ಬಾಡಿಗೆ ಮನೆಯಲ್ಲಿ ವಾಸವಾಗಿರುವ ವ್ಯಕ್ತಿಯೊಬ್ಬ ತನ್ನ ಹೆಂಡತಿ ಮತ್ತು ಮಗಳನ್ನು ಥಳಿಸಿದ್ದಾನೆ. ಬಾಲಕಿಯ ತಾಯಿಯ ದೂರಿನ ಆಧಾರದ ಮೇಲೆ ಆಕೆಯ ಪತಿ ವಿರುದ್ಧ ಬುಧವಾರ ಭೋಂಡ್ಸಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಪತ್ನಿಯೊಂದಿಗೆ ಜಗಳವಾಡಿದ ನಂತರ ತಮ್ಮ ಒಂಬತ್ತು ವರ್ಷದ ಮಗಳ ಮೇಲೆ ಕುದಿಯುವ ಹಾಲನ್ನು ಸುರಿದು ಹಾಲಿನ ಪಾತ್ರೆಯಿಂದ ಹೊಡೆದು ಆಕೆಯ ತಲೆಬುರುಡೆಗೆ ಹೊಡೆದಿದ್ದಾನೆ. ಬಾಲಕಿ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿ ಸಾವು ಬದುಕಿನ ಮಧ್ಯೆ ಹೊರಾಟ ನಡೆಸುತ್ತಿದ್ದಾಳೆ. ಏಪ್ರಿಲ್ 19 ರಂದು ಈ ಘಟನೆ ನಡೆದಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸದೆ ಪ್ರಕರಣವನ್ನು ಇತ್ಯರ್ಥಪಡಿಸಿದ್ದಾರೆ.
ಇದನ್ನೂ ಓದಿ: ಮಕ್ಕಳ ಪರೀಕ್ಷೆ ಬಗ್ಗೆ ಮೋದಿಗೆ ಕಾಳಜಿ, ಅವರ ಸೂಚನೆಯಂತೆ ರೋಡ್ ಶೋನಲ್ಲಿ‌ ಬದಲಾವಣೆ: ಶೋಭಾ ಕರಂದ್ಲಾಜೆ
ನನ್ನ ಪತಿ ನನಗೆ ಮತ್ತು ನನ್ನ ಮಗಳಿಗೆ ಥಳಿಸಿದರು. ನನ್ನ ಮಗಳ ಮೇಲೆ ಬಿಸಿ ಹಾಲನ್ನು ಎಸೆದರು. ನನ್ನ ಮಗಳಿಗೆ ಗಂಭೀರವಾದ ಸುಟ್ಟಗಾಯಗಳು ಮತ್ತು ತಲೆಗೆ ಗಾಯಗಳಾಗಿವೆ. ನನ್ನ ತಂದೆ ಪೊಲೀಸ್ ಸಹಾಯಕ್ಕಾಗಿ 112 ಗೆ ಡಯಲ್ ಮಾಡಿದ್ದರು. ಆದರೆ ಪೊಲೀಸರು ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ. ದೂರು ದಾಖಲಿಸಿದ ನನ್ನ ತಂದೆಯ ಒಪ್ಪಿಗೆ ಪಡೆಯದೆ ನನ್ನ ಪತಿಯೊಂದಿಗೆ ಕೆಲವರು ವ್ಯವಹಾರ ನಡೆಸಿ ಪ್ರಕರಣವನ್ನು ಮುಕ್ತಾಯಗೊಳಿಸಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಬಾಲಕಿಯ ಸಿಟಿ ಸ್ಕ್ಯಾನ್ ವರದಿಯಲ್ಲಿ ಆಕೆಗೆ ಮೂಳೆ ಮುರಿತ ಕಂಡುಬಂದಿದೆ. ಮೂಳೆಯು ತಲೆಬುರುಡೆಯ ಹಿಂಭಾಗ ಮತ್ತು ಬೆನ್ನುಹುರಿಯ ಸಂಪರ್ಕಿಸುವ ಮೂಳೆಯಾಗಿದೆ. ಬಾಲಕಿಯ ತಾಯಿಯ ದೂರಿನ ಆಧಾರದ ಮೇಲೆ ತಂದೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಆರೋಪಿ ತಂದೆಗಾಗಿ ಹುಡುಕಾಟ ಮಾಡುತ್ತಿದ್ದೇವೆಂದು ಪೊಲೀಸರು ಹೇಳಿದ್ದಾರೆ.
‌ಮೋದಿ ಕಾಲದಲ್ಲಿ ಒಂದೂ ಹಗರಣವಾಗಿಲ್ಲ…ಕಾಂಗ್ರೆಸ್ ಸರ್ಕಾರದಲ್ಲಿ ಹಗರಣ ಬಿಟ್ಟು ಬೇರೇನು ಆಗಿಲ್ಲ : ವಿಜಯ ಸಂಕೇಶ್ವರ ಹೇಳಿಕೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 − two =
Remember me
