ಮಧ್ಯಪ್ರದೇಶ:ಮಹಿಳೆಯೊಬ್ಬಳು ತನ್ನ ಗಂಡನ ಪರವಾಗಿ ಜೈಲು ಅಧಿಕಾರಿಗಳಿಗೆ ಪತ್ರವೊಂದನ್ನು ಬರೆದಿದ್ದಾಳೆ. ಮದುವೆಯಾದ ಸಂದರ್ಭದಲ್ಲಿ ಗಂಡ ಜೈಲು ಸೇರಿದ್ದರಿಂದ ನನಗೆ ಗರ್ಭ ಧರಿಸಲು ಸಾಧ್ಯವಾಗಿಲ್ಲ. ಹೀಗಾಗಿ ನನ್ನ ಗಂಡನನ್ನು ಪೆರೋಲ್ ಮೇಲೆ ಕಳುಹಿಸಿಕೊಡಬೇಕು ಎಂದು ಕೇಳಿಕೊಂಡಿದ್ದಾಳೆ.
ಇದನ್ನೂ ಓದಿ:ಮದುವೆ ಮನೆಯಲ್ಲಿ ಹರಿಯಿತು ನೆತ್ತರು; ಹೆಂಡಿತಿಯೊಂದಿಗೆ ನೃತ್ಯ ಮಾಡಿದ್ದಕ್ಕೆ ಇಬ್ಬರು ಸಹೋದರರ ಜೀವ ತೆಗೆದ ಅಣ್ಣ!
ಶಿವಪುರಿ ಮೂಲದ ದಾರಾ ಸಿಂಗ್ ಜಾತವ್ ಎಂಬಾತ ಕಳೆದ ಏಳು ವರ್ಷಗಳಿಂದ ಗ್ವಾಲಿಯರ್ ಸೆಂಟ್ರಲ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಕೈದಿ. ಮದುವೆಯಾದ ಸಂದರ್ಭದಲ್ಲಿ ಈತ ಕೊಲೆ ಪ್ರಕರಣದ ಮೂಲಕ ಜೈಲು ಸೇರಿದ್ದ. ಇದರಿಂದ ಹೆಂಡತಿ ಒಬ್ಬಂಟಿಯಾಗಿ ಜೀವನ ದೂಡಬೇಕಾದ ಸ್ಥಿತಿ ಬಂದೊದಗಿತ್ತು. ಇದೀಗ ಈತನ ಪತ್ನಿ, ಮದುವೆಯಾಗಿ ಏಳು ವರ್ಷಗಳು ಕಳೆದರೂ ನನಗೆ ಮಕ್ಕಳಿಲ್ಲ. ನಾನೀಗ ಗರ್ಭ ಧರಿಸಬೇಕು. ಇದಕ್ಕಾಗಿ ನನ್ನ ಗಂಡನನ್ನು ಪೆರೋಲ್ ಮೂಲಕ ಜೈಲಿನಿಂದ ಕಳುಹಿಸಿಕೊಡಿ ಎಂದು ಅರ್ಜಿ ಸಲ್ಲಿಸಿದ್ದಾಳೆ.
ಮಗನ ಬಂಧನದಿಂದ ನಮಗೆ ಮದುವೆಯ ಸಂತಸವನ್ನು ಸಂಭ್ರಮಿಸಲು ಸಾಧ್ಯವಾಗಿಲ್ಲ. ಇದೀಗ ನಮಗೆ ವಯಸ್ಸಾಗಿದೆ. ಪತ್ನಿ ಅನಾರೋಗ್ಯ ಪೀಡಿತಳಾಗಿದ್ದು, ಮೊಮ್ಮಗ ಬೇಕೆಂದು ಬಯಸಿದ್ದಾಳೆ. ಹೀಗಾಗಿ ಮಗನನ್ನು ಕೆಲ ದಿನಗಳ ಕಾಲ ಜೈಲಿನಿಂದು ಕಳುಹಿಸಿಕೊಡುವಂತೆ ಕೈದಿ ದಾರಾ ಸಿಂಗ್ ತಂದೆ ಕರೀಂ ಸಿಂಗ್ ಜಾತವ್ ಹೇಳಿಕೊಂಡಿದ್ದಾರೆ.
ಇದನ್ನೂ ಓದಿ:ಭಗವದ್ಗೀತೆ ಓದಿದ ಕಳ್ಳನಿಗೆ ಪಶ್ಚಾತ್ತಾಪ; 9 ವರ್ಷಗಳ ಹಿಂದೆ ದರೋಡೆ ಮಾಡಿದ್ದ ಆಭರಣ ಮರಳಿ ತಂದಿಟ್ಟ!
ಕೈದಿಯ ಬಿಡುಗಡೆಗೆ ಸಂಬಂಧಿಸಿದ ಮನವಿ ಪತ್ರವನ್ನು ಸದ್ಯ ಶಿವಪುರಿ ಎಸ್​ಪಿ ಅವರ ಪರಿಶೀಲನೆಗೆ ಕಳುಹಿಸಿಕೊಡಲಾಗಿದೆ ಎಂದು ವರದಿಯಾಗಿದೆ. ಈ ನಡುವೆ ಗ್ವಾಲಿಯರ್ ಸೆಂಟ್ರಲ್ ಜೈಲ್ ಸೂಪರಿಂಟೆಂಡೆಂಟ್ ವಿದಿತ್ ಸಿರ್ವಯ್ಯ ಪ್ರತಿಕ್ರಿಯಿಸಿ, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ಶಿಕ್ಷೆ ಎರಡು ವರ್ಷ ಪೂರ್ಣಗೊಂಡ ಬಳಿಕ ನಡವಳಿಕೆಯು ಆಧಾರದ ಮೇಲೆ ಪೆರೋಲ್‌ ಪಡೆಯಲು ಅರ್ಹರಾಗಿರುತ್ತಾರೆ. ಪೆರೋಲ್ ನೀಡುವುದು ಅಥವಾ ನೀಡದಿರುವ ಬಗ್ಗೆ ಜಿಲ್ಲಾಧಿಕಾರಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + five =
Remember me
