ನವದೆಹಲಿ:ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಸಮೀಕ್ಷೆ ನಡೆಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಅನುಮತಿ ನೀಡಿರುವ ಅಲಹಾಬಾದ್​ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ಮುಖಂಡರು ಇಂದು (ಆ.03) ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ.
ಈ ವಿಚಾರವನ್ನು ಮುಸ್ಲಿಂ ಸಂಘಟನೆ ಪರ ವಕೀಲ ನಿಜಾಮ್​ ಪಾಷಾ ಅವರು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಅವರ ಮುಂದೆ ಪ್ರಸ್ತಾಪಿಸಿದ್ದು, ತಕ್ಷಣ ವಿಚಾರಣೆ ಕೈಗೆತ್ತಿಕೊಳ್ಳುವಂತೆ ಕೋರಿದ್ದಾರೆ.
ಇಂದು ಬೆಳಗ್ಗೆ ಅಲಹಾಬಾದ್​ ಹೈಕೋರ್ಟ್​, ಅಂಜುಮನ್ ಮಸೀದಿ ಸಮಿತಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿ, ಮಸೀದಿ ಸಂಕೀರ್ಣದಲ್ಲಿ ಸಮೀಕ್ಷೆ ನಡೆಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಅನುಮತಿ ನೀಡಿತು. ಇದೀಗ ಈ ಆದೇಶದ ವಿರುದ್ಧ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಎಸ್​ಎಲ್​ಪಿ (ಸ್ಪೆಷಲ್​ ಲೀವ್​ ಪೆಟಿಷನ್​) ಸಲ್ಲಿಸಿದೆ. ನಾನು ಈಮೇಲ್​ ಮೂಲಕ ತುರ್ತು ವಿಚಾರಣೆ ಮನವಿ ಮಾಡಿದ್ದೇನೆ. ಸದ್ಯಕ್ಕೆ ಅವರು ಸಮೀಕ್ಷೆಗೆ ಮುಂದಾಗದಿರಲಿ ಎಂದು ಪಾಷಾ ಹೇಳಿದ್ದಾರೆ.
ಎಸ್​ಎಲ್​ಪಿ ಸಲ್ಲಿಕೆ ಕುರಿತು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್​ ಮಾತನಾಡಿ, ಈ ಕೂಡಲೇ ನಾನು ಈ ಮೇಲ್​ ಅನ್ನು ಪರಿಶೀಲಿಸುತ್ತೇನೆ ಎಂದಿದ್ದಾರೆ.
ಉತ್ತರ ಪ್ರದೇಶದ ವಾರಣಾಸಿಯಲ್ಲಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯನ್ನು ಕಾಶಿ ದೇವಾಲಯದ ಮೇಲೆ ನಿರ್ಮಿಸಿದರೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಸಮೀಕ್ಷೆಗೆ ಜಿಲ್ಲಾ ನ್ಯಾಯಾಲಯ ನೀಡಿದ್ದ ಅನುಮತಿಯನ್ನು ಪ್ರಶ್ನಿಸಿ, ಮುಸ್ಲಿಂ ಸಮಿತಿ ಅಲಹಾಬಾದ್​ ಹೈಕೋರ್ಟ್​ ಮೆಟ್ಟಿಲೇರಿತ್ತು. ಇಂದು ತೀರ್ಪು ಪ್ರಕಟಿಸಿದ ಹೈಕೋರ್ಟ್​ ಮುಸ್ಲಿಂ ಸಮಿತಿ ಅರ್ಜಿಯನ್ನು ವಜಾಗೊಳಿಸಿ ಸಮೀಕ್ಷೆಗೆ ಅನುಮತಿಯನ್ನು ನೀಡಿದೆ. ಇದೀಗ ಈ ಆದೇಶವನ್ನೂ ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದೆ. ಇದೀಗ ಎಲರ ಕುತೂಹಲ ಸುಪ್ರೀಂಕೋರ್ಟ್​ನತ್ತ ನೆಟ್ಟಿದೆ.
ಜುಲೈ 21ರ ಆದೇಶದಲ್ಲಿ, ವಾರಣಾಸಿ ಜಿಲ್ಲಾ ನ್ಯಾಯಾಧೀಶರು 2023ರ ಮೇ ತಿಂಗಳಿನಲ್ಲಿ ನಾಲ್ವರು ಹಿಂದೂ ಮಹಿಳೆಯರು ಸಲ್ಲಿಸಿದ ಅರ್ಜಿಯ ಮೇರೆಗೆ ಜ್ಞಾನವಾಪಿ ಸಂಕೀರ್ಣದ ಎಎಸ್‌ಐ ಮೂಲಕ ಸಮೀಕ್ಷೆಗೆ ನಿರ್ದೇಶಿಸಿದ್ದರು. ಮಸೀದಿಯ ವೈಜ್ಞಾನಿಕ ಸಮೀಕ್ಷೆಯನ್ನು ಕೈಗೊಳ್ಳುವುದು ಇದರ ಉದ್ದೇಶವಾಗಿತ್ತು. ಅಂಜುಮನ್ ಮಸೀದಿ ಸಮಿತಿಯು ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಅಲಹಾಬಾದ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು.
ಅಲಹಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಜುಲೈ 27ರಂದು, ಈ ವಿಷಯವಾಗಿ ವಾದ-ಪ್ರತಿವಾದವನ್ನು ಆಲಿಸಿ, ಆಗಸ್ಟ್ 3ರಂದು ಹೈಕೋರ್ಟ್ ತನ್ನ ಆದೇಶವನ್ನು ನೀಡುವವರೆಗೆ ಸಮೀಕ್ಷೆಯನ್ನು ನಡೆಸಬಾರದೆಂದು ಸೂಚಿಸಿದ್ದರು. ಅದರಂತೆ ಇಂದು, ಹೈಕೋರ್ಟ್​ನಿಂದ ಆದೇಶವು ಹೊರಬಿದ್ದಿದ್ದು, ಎಎಸ್‌ಐ ಮೂಲಕ ಸರ್ವೆ ನಡೆಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.(ಏಜೆನ್ಸೀಸ್​​)
ಸರ್ವೇ ನಡೆಸದಂತೆ ಸಲ್ಲಿಸಿದ್ದ ಅರ್ಜಿ ವಜಾ: ಜ್ಞಾನವಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆಗೆ ಹೈಕೋರ್ಟ್​ ಅನುಮತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − eighteen =
Remember me
