ನವದೆಹಲಿ:ಪಾಕ್​ನಲ್ಲಿನ ಭಾರತೀಯ ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿಯನ್ನು ಸೋಮವಾರ ಬೆಳಗ್ಗೆ 8.30ರಲ್ಲಿ ಅಪಹರಿಸಿದ್ದ ಪಾಕಿಸ್ತಾನದ ಅಧಿಕಾರಿಗಳು ಯಾವುದೋ ಗೌಪ್ಯ ಸ್ಥಳಕ್ಕೆ ಕರೆದೊಯ್ದು ಕೋಳ ತೊಡಿಸಿ, ರಾಡ್​ ಮತ್ತು ಬಡಿಗೆಯಿಂದ ಮನಬಂದಂತೆ ಹಲ್ಲೆ ಮಾಡಿದ್ದಾರೆ ಎಂದು ಭಾರತೀಯ ರಾಯಭಾರ ಕಚೇರಿ ಮೂಲಗಳು ತಿಳಿಸಿವೆ.
ಕಾರ್ಯನಿಮಿತ್ತ ಕಾರಿನಲ್ಲಿ ತೆರಳುತ್ತಿದ್ದ ರಾಯಭಾರ ಕಚೇರಿ ಸಿಬ್ಬಂದಿ ಪೆಟ್ರೋಲ್​ ಹಾಕಿಸಿಕೊಳ್ಳಲು ಮುಂದಾದಾಗ ಪೆಟ್ರೋಲ್​ ಬಂಕ್​ಗೆ ಐದಾರು ವಾಹನಗಳಲ್ಲಿ ಬಂದ 15ರಿಂದ 16 ಮಂದಿ ಶಸ್ತ್ರಸಜ್ಜಿತರ ಗುಂಪು ತಮ್ಮನ್ನಯ ಅಪಹರಿಸಿತು. ಕಣ್ಣಿಗೆ ಬಟ್ಟೆ ಕಟ್ಟಿದ್ದಲ್ಲದೆ, ತಲೆ ಮೇಲೆ ಮಣಭಾರದ ಚೀಲ ಇರಿಸಿ, ಗೌಪ್ಯ ಸ್ಥಳಕ್ಕೆ ಕರೆದೊಯ್ಯಲಾಯಿತು. ತಮ್ಮನ್ನು ಅಪಹರಿಸಿದ ಸ್ಥಳದಿಂದ 10 ನಿಮಿಷದ ದೂರದಲ್ಲಿ ಈ ಸ್ಥಳವಿತ್ತು. ಅಲ್ಲಿಗೆ ಹೋದ ಬಳಿಕ ಕೋಳ ತೊಡಿಸಿ, ರಾಡ್​ ಮತ್ತು ಬಡಿಗೆಗಳನ್ನು ಹಲ್ಲೆ ಮಾಡುತ್ತಾ, ರಾಯಭಾರ ಕಚೇರಿಯಲ್ಲಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕೆಲಸದ ವಿವರಗಳನ್ನು ತಿಳಿಸುವಂತೆ ಆಗ್ರಹಿಸಿದ್ದಾಗಿ ಅಪಹರಣಕ್ಕೆ ಒಳಗಾಗಿದ್ದ ಸಿಬ್ಬಂದಿ ತಿಳಿಸಿರುವುದಾಗಿ ಹೇಳಿವೆ.
ಇದನ್ನೂ ಓದಿ:ಭಾರತದೊಂದಿಗೆ ತಿಕ್ಕಾಟ ಮುಂದುವರಿಸಿದ ನೇಪಾಳ, ಗಡಿಯಲ್ಲಿ 500 ಹೊರಠಾಣೆಗಳ ನಿರ್ಮಾಣ ಗುರಿ
ರಾಯಭಾರ ಕಚೇರಿ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಕಾರು ಗುದ್ದೋಡಲು ಪ್ರಯತ್ನಿಸಿದಾಗ ಅವರನ್ನು ತಡೆದು ನಿಲ್ಲಿಸಲಾಯಿತು. ಈ ಘಟನೆಯಲ್ಲಿ ಒಬ್ಬ ಪಾದಾಚಾರಿ ಗಂಭೀರವಾಗಿ ಗಾಯಗೊಂಡಿರುವುದಾಗಿ ಪಾಕ್​ ಪತ್ರಿಕೆಗಳು ವರದಿ ಮಾಡಿವೆ. ಆದರೆ, ಇದನ್ನು ಅಲ್ಲಗಳೆದಿರುವ ಅಪಹರಣಕ್ಕೆ ಒಳಗಾಗಿದ್ದ ಸಿಬ್ಬಂದಿ, ತಮ್ಮನ್ನು ಹೊಡೆಯುತ್ತಿರುವಂತೆ ವಿಡಿಯೋ ಚಿತ್ರೀಕರಿಸಿಕೊಂಡು ಕಾರು ಅಪಘಾತ ಎಸಗಿದ್ದಾಗಿ ತಪ್ಪೊಪ್ಪಿಕೊಳ್ಳುವಂತೆ ಮಾಡಿದರು ಎಂದು ಹೇಳಿರುವುದಾಗಿ ತಿಳಿಸಿವೆ.
ಎಲ್ಲರಿಗೂ ಇದೇ ಗತಿ:ಭಾರತೀಯ ರಾಯಭಾರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಇದೇ ಗತಿ ಮಾಡುವುದಾಗಿ ಹೇಳಿದ ಅಪಹರಣಕಾರರು ತಮ್ಮನ್ನು ರಾತ್ರಿ 9 ಗಂಟೆಗೆ ಬಿಡುಗಡೆ ಮಾಡಿದ್ದಾಗಿ ಅವರು ತಿಳಿಸಿರುವುದಾಗಿ ಮೂಲಗಳು ಹೇಳಿವೆ.
ಅಪಹರಣಕ್ಕೆ ಒಳಗಾಗಿ ಬಿಡುಗಡೆಯಾಗಿರುವ ಸಿಬ್ಬಂದಿಯ ಮುಖ, ಕತ್ತು ಮತ್ತು ತೊಡೆಗಳ ಮೇಲೆ ಗಾಯಗಳಾಗಿವೆ. ಆದರೂ ಅವರು ನಡೆದಾಡುವ ಸ್ಥಿತಿಯಲ್ಲಿದ್ದಾರೆ ಎಂದು ತಿಳಿಸಿವೆ.
ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿ ವಿರುದ್ಧ ಅಜ್ಜಿ ಕಥೆ ಕಟ್ಟಿದ ಪಾಕಿಸ್ತಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
