ನವದೆಹಲಿ:ಇಲ್ಲಿನ ಜವಾಹರ ಲಾಲ್​ ನೆಹರೂ ವಿಶ್ವವಿದ್ಯಾಲಯಕ್ಕೆ ಭಾನುವಾರ 50 ಜನರ ಗುಂಪೊಂದು ನುಗ್ಗಿ ವಿದ್ಯಾರ್ಥಿಗಳು, ಉಪನ್ಯಾಸಕರ ಮೇಲೆ ಹಲ್ಲೆ ನಡೆಸಿದ್ದು ಅಲ್ಲಿನ ಪರಿಸ್ಥಿತಿ ಬಿಗಡಾಯಿಸಿದೆ.
ಇಂದು ಜೆಎನ್​ಯು ಸುತ್ತಮುತ್ತ ಪೊಲೀಸ್​ ಬಿಗಿ ಭದ್ರತೆ ಒದಗಿಸಲಾಗಿದೆ. ಸರಿಯಾದ ಐಡಿ ಕಾರ್ಡ್​ ಹೊಂದಿರುವ ವಿದ್ಯಾರ್ಥಿಗಳನ್ನು ಮಾತ್ರ ಕ್ಯಾಂಪಸ್​ ಒಳಗೆ ಬಿಡಲಾಗುತ್ತಿದೆ. ಹಾಸ್ಟೆಲ್​, ವಿವಿ ಆಡಳಿತ ಮಂಡಳಿ ಕಚೇರಿ ಸೇರಿ ಹಲವು ಪ್ರಮುಖ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಕ್ಯಾಂಪಸ್ ಒಳಗೆ ಮಾಧ್ಯಮ ಸಿಬ್ಬಂದಿ ಪ್ರವೇಶವನ್ನ ನಿಷೇಧಿಸಲಾಗಿದೆ.
ಜೆಎನ್​ಯು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಮಹಾರಾಷ್ಟ್ರದ ಮುಂಬೈ ಮತ್ತು ಪುಣೆ ಸೇರಿ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಮುಂಬೈನ ಗೇಟ್​ವೇ ಆಫ್ ಇಂಡಿಯಾ ಬಳಿ ನಿನ್ನೆ ಮಧ್ಯರಾತ್ರಿ ಶುರುವಾದ ದಿಢೀರ್​ ಪ್ರತಿಭಟನೆ ಇಂದು ಬೆಳಗ್ಗೆ ಕೂಡ ಮುಂದುವರಿದಿದೆ. ಪುಣೆಯ ಎಫ್​ಟಿಐಐ ಕ್ಯಾಂಪಸ್​ನಲ್ಲೂ ಪ್ರತಿಭಟನೆ ನಡೆಸಲಾಗುತ್ತಿದೆ. ಕೈಯಲ್ಲಿ ರಾಷ್ಟ್ರಧ್ವಜ, ಬ್ಯಾನರ್​ಗಳು, ಕ್ಯಾಂಡಲ್​ಗಳನ್ನು ಹಿಡಿದ ಪ್ರತಿಭಟನಾಕಾರರು ಜೆಎನ್​ಯು ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸುತ್ತಿದ್ದಾರೆ.
ಈ ಮಧ್ಯೆ ಜೆಎನ್​ಯು ಉಪಕುಲಪತಿ ಎಂ.ಜಗದೀಶ್​ ಕುಮಾರ್​ ಅವರು ವಿದ್ಯಾರ್ಥಿಗಳು ಶಾಂತಿಯಿಂದ ಇರಬೇಕು ಎಂದು ಹೇಳಿದ್ದಾರೆ. ವಿವಿಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ನಾವು ಕಾಳಜಿ ವಹಿಸುತ್ತೇವೆ. ಸೆಮಿಸ್ಟರ್​ಗಳೂ ಯಾವುದೇ ಅಡಚಣೆಯಿಲ್ಲದೆ ನಡೆಯುತ್ತವೆ. ನಮ್ಮ ವಿದ್ಯಾರ್ಥಿಗಳ ಶೈಕ್ಷಣಿಕ ಆಸಕ್ತಿ ರಕ್ಷಣೆಯೇ ವಿವಿಯ ಮೊದಲ ಆದ್ಯತೆ ಎಂದು ಹೇಳಿದ್ದಾರೆ.
ಜೆಎನ್​ಯುಗೆ ನುಗ್ಗಿದ ಉದ್ರಿಕ್ತರ ಗುಂಪಿನಿಂದ ಹಲ್ಲೆ; ವಿದ್ಯಾರ್ಥಿಗಳು, ಉಪನ್ಯಾಸಕರಿಗೆ ಗಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 2 =
Remember me
