ರಾಂಚಿ:ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮುಖ್ಯಸ್ಥ ಹೇಮಂತ್ ಸೊರೆನ್ ಅವರು ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಜಾಮೀನು ಪಡೆದ ನಂತರ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.
ಇದನ್ನೂ ಓದಿ:ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸಲ್​ ಬೆಲೆ ಇಳಿಕೆ, ನೂತನ ದರ ಹೀಗಿದೆ…
ನ್ಯಾಯಾಲಯವು ಅರ್ಜಿಯ ಆದೇಶವನ್ನು ಕಾಯ್ದಿರಿಸಿದ ಎರಡು ವಾರಗಳ ನಂತರ ನ್ಯಾಯಾಲಯವು ಪ್ರಕರಣದಲ್ಲಿ ಸೊರೇನ್ ಅವರಿಗೆ ಜಾಮೀನು ನೀಡಿತು. ನ್ಯಾಯಮೂರ್ತಿ ರೊಂಗೋನ್ ಮುಖೋಪಾಧ್ಯಾಯ ಅವರ ಏಕ ಪೀಠವು 50 ಸಾವಿರ ರೂಪಾಯಿ ಜಾಮೀನು ಬಾಂಡ್ ಮತ್ತು ಅದೇ ಮೊತ್ತದ ಇಬ್ಬರು ಶ್ಯೂರಿಟಿಗಳ ಮೇಲೆ ಸೊರೇನ್ ಅವರಿಗೆ ಜಾಮೀನು ನೀಡಿತು.
ಸೋರೆನ್ ಜೈಲಿನಿಂದ ಹೊರಬರುತ್ತಿದ್ದಂತೆ, ಹೆಚ್ಚಿನ ಸಂಖ್ಯೆಯ ಜೆಎಂಎಂ ಬೆಂಬಲಿಗರು ಜೈಕಾರ ಕೂಗಿದರು. ಸೋರೆನ್ ಅವರ ಪತ್ನಿ ಕಲ್ಪನಾ ಸೊರೆನ್, ಜೆಎಂಎಂ ಶಾಸಕರು, ಸೂರನ್ ಅವರಿಗೆ ಜಾಮೀನು ಸಿಕ್ಕಿದ್ದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ.
ಜೈಲಿನಿಂದ ಬಿಡುಗಡೆಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನನ್ನು ಐದು ತಿಂಗಳ ಕಾಲ ಜೈಲಿನಲ್ಲಿ ಇರಿಸಲಾಗಿತ್ತು. ನ್ಯಾಯಾಂಗ ಪ್ರಕ್ರಿಯೆಯು ಕೇವಲ ದಿನಗಳು ಅಥವಾ ತಿಂಗಳುಗಳಲ್ಲ ಹೇಗೆ ವರ್ಷಗಳನ್ನು ತೆಗೆದುಕೊಳ್ಳುತ್ತಿದೆ ಎಂಬುದನ್ನು ನಾವು ನೋಡುತ್ತಿದ್ದೇವೆ. ಇಂದು, ಇದು ನಮ್ಮ ವಿರುದ್ಧ ಹೇಗೆ ಸಂಚು ರೂಪಿಸಲಾಯಿತು ಎಂಬುದು ಇಡೀ ದೇಶಕ್ಕೆ ಸಂದೇಶವಾಗಿದೆ. ನಾವು ಪ್ರಾರಂಭಿಸಿದ ಹೋರಾಟ ಮತ್ತು ನಾವು ಮಾಡಿದ ನಿರ್ಣಯಗಳನ್ನು ಈಡೇರಿಸಲು ನಾವು ಕೆಲಸ ಮಾಡುತ್ತೇವೆ ಹೇಳಿದ್ದಾರೆ.
ಪ್ರಭಾಸ್ ನಟನೆಯ ‘ಕಲ್ಕಿ’ ಸಿನಿಮಾ ಬಗ್ಗೆ ರಾಕಿಂಗ್ ಸ್ಟಾರ್ ಯಶ್‌ ಹೇಳಿದ್ದೇನು?

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:11 − 2 =
Remember me
