ತಿರುಪತಿ: ಲಾಕ್​ಡೌನ್​ ಸಡಿಲಿಕೆ ಹಿನ್ನೆಲೆಯಲ್ಲಿ ಎಲ್ಲೆಡೆಯಂತೆ ತಿರುಪತಿ ತಿರುಮಲದಲ್ಲೂ ಧಾರ್ಮಿಕ ಚಟುವಟಿಕೆ ಸಹಜ ಸ್ಥಿತಿಗೆ ಮರಳುತ್ತಿದ್ದು, ಭಾನುವಾರವೊಂದೇ ದಿನ ಕಳೆದ ಕೆಲವು ದಿನಗಳಲ್ಲೇ ಅತ್ಯಧಿಕ ಎನ್ನುವಷ್ಟು ಕಾಣಿಕೆ ಸಂಗ್ರಹವಾಗಿದೆ.
ದೇವಸ್ಥಾನಕ್ಕೆ ಭಾನುವಾರ 20,228 ಭಕ್ತರು ಆಗಮಿಸಿದ್ದು, ಒಂದೇ ದಿನ 6,556 ಕೇಶಮುಂಡನ ನಡೆದಿದೆ. ಅದರಲ್ಲೂ 2.14 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದ್ದು, ಕರೊನಾ ಅವಧಿಯಲ್ಲಿ ಇದು ಇತ್ತೀಚಿಗಿನ ಅತ್ಯಧಿಕ ಕಾಣಿಕೆ ಮೊತ್ತ ಎಂದು ದೇವಸ್ಥಾನದ ಆಡಳಿತ ಮಂಡಳಿ ಹೇಳಿಕೊಂಡಿದೆ.
ನವರಾತ್ರಿ ಹಿನ್ನೆಲೆಯಲ್ಲಿ ಅಕ್ಟೋಬರ್​ 16ರಿಂದ 24ರ ವರೆಗೆ ಬ್ರಹೋತ್ಸವ ನಿಗದಿಯಾಗಿದ್ದು, ದೇವಸ್ಥಾನಕ್ಕೆ ಭಕ್ತರ ಆಗಮನದಲ್ಲಿ ಗಣನೀಯ ಹೆಚ್ಚಳ ಆಗಲಿದೆ ಎಂಬ ನಿರೀಕ್ಷೆಯನ್ನು ಆಡಳಿತ ಮಂಡಳಿ ಹೊಂದಿದೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − nine =
Remember me
