ನವದೆಹಲಿ:ಉತ್ತರಪ್ರದೇಶದ ಜ್ಞಾನವಾಪಿ ಮಸೀದಿ ವಿವಾದ ಪ್ರಕರಣದಲ್ಲಿ ಹಿಂದೂಗಳ ಮನವಿಗೆ ನ್ಯಾಯಾಲಯದಲ್ಲಿ ಜಯ ಸಿಕ್ಕಿದೆ. ಮಸೀದಿ ಸಂಕೀರ್ಣದಲ್ಲಿನ ದೇವರುಗಳಿಗೆ ಪೂಜಿಸುವ ಹಕ್ಕಿನ ಕುರಿತಂತೆ ಸಲ್ಲಿಸಿರುವ ಮನವಿಯನ್ನು ವಾರಾಣಸಿ ನ್ಯಾಯಾಲಯ ಪುರಸ್ಕರಿಸಿದೆ.
ದೇವರ ಪೂಜೆ ನಿರ್ವಹಣೆ ಕುರಿತಂತೆ ಐವರು ಹಿಂದೂ ಮಹಿಳೆಯರು ದಾಖಲಿಸಿದ್ದ ಪ್ರಕರಣವನ್ನು ಪ್ರಶ್ನಿಸಿ, ಮುಸ್ಲಿಮರು ಮನವಿ ಸಲ್ಲಿಸಿದ್ದರು. ಸೋಮವಾರ ಜಿಲ್ಲಾ ನ್ಯಾಯಾಧೀಶ ಅಜಯ್​ಕೃಷ್ಣ ವಿಶ್ವಾಸ್ ಅವರು ಈ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದು, ಹಿಂದೂಗಳ ಮನವಿಯನ್ನು ಎತ್ತಿಹಿಡಿಯುವ ಮೂಲಕ ಮುಸ್ಲಿಮರ ಅರ್ಜಿಯನ್ನು ತಳ್ಳಿ ಹಾಕಿದ್ದಾರೆ.
ಈ ಮೂಲಕ ಅಂಜುಮಾನ್ ಇಸ್ಲಾಮಿಯಾ ಕಮಿಟಿ ಪ್ರಶ್ನೆ ಮಾಡಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡಿದೆ. ಪರಿಣಾಮವಾಗಿ ಮಸೀದಿ ಸಂಕೀರ್ಣದ ಹೊರ ಆವರಣದಲ್ಲಿನ ಶೃಂಗಾರ ಗೌರಿ ಮಾತೆಯ ದರ್ಶನಕ್ಕೆ ಅವಕಾಶ ಕೋರಿ ಐವರು ಭಕ್ತರ ಮನವಿಗೆ ಪುರಸ್ಕಾರ ಸಿಕ್ಕಂತಾಗಿದೆ.
ಹಿಂದು ದೂರುದಾರರು ಸಲ್ಲಿಸಿರುವ ಮನವಿ ದ ಪ್ಲೇಸಸ್ ಆಫ್ ವರ್ಷಿಪ್​ ಆ್ಯಕ್ಟ್ ಉಲ್ಲಂಘನೆ ಆಗುವಂತೆ ಇಲ್ಲ ಎಂದು ನ್ಯಾಯಾಧೀಶರಾದ ಎ.ಕೆ.ವಿಶ್ವಾಸ್ ಹೇಳಿದ್ದಾರೆ. ಅಲ್ಲದೆ ಈ ಹಿಂದಿನ ವಿಚಾರಣೆ ವೇಳೆ ಉಲ್ಲೇಖಿಸಲ್ಪಟ್ಟಂತೆ ಅಲ್ಲಿ ಪತ್ತೆಯಾದ ಶಿವಲಿಂಗ ಹಲವಾರು ವರ್ಷಗಳಷ್ಟು ಹಳೆಯದಾಗಿದ್ದಲ್ಲಿ ಪ್ಲೇಸಸ್ ಆಫ್ ವರ್ಷಿಪ್​ ಆ್ಯಕ್ಟ್ ಅನ್ವಯಿಸುವುದಿಲ್ಲ. ಇದನ್ನು ನ್ಯಾಯಾಲಯದ ಮುಂದೆ ಇಡಲಾಗುವುದು ಎಂದು ವಕೀಲ ವಿಷ್ಣು ಜೈನ್ ತಿಳಿಸಿದ್ದಾರೆ.
ವಿಷ್ಣುವರ್ಧನ್​ ಜನ್ಮದಿನಂದು ‘ಯಜಮಾನೋತ್ಸವ’; ನಡೆಯಲಿದೆ ದಾಖಲೆಯ ಕಟೌಟ್​​ ಜಾತ್ರೆ..

ಲೋಕಾಯುಕ್ತ ದಾಳಿ: 4 ಲಕ್ಷ ರೂ. ಸಮೇತ ಸಿಕ್ಕಿಬಿದ್ದ ಜಂಟಿ ಆಯುಕ್ತರ ಆಪ್ತ ಸಹಾಯಕ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 18 =
Remember me
