ನವದೆಹಲಿ:ಕರೊನಾ ವೈರಸ್​ನೊಂದಿಗೆ ಬದುಕಬೇಕು ಎನ್ನುವುದು ಅಕ್ಷರಶಃ ಜಾರಿಗೆ ಬಂದಂತಾಗಿದೆ.
ಹೌದು…! ಕರೊನಾ ಸೋಂಕಿಗೆ ಒಳಗಾಗಿದ್ದರೂ ಗಂಭೀರ ಸ್ವರೂಪದ ಅನಾರೋಗ್ಯ ಕಾಡದಿದ್ದರೆ, ನಿಮ್ಮನ್ನು ಆಸ್ಪತ್ರೆಗೆ ದಾಖಲಾದ 24 ಗಂಟೆಗಳಲ್ಲಿಯೇ ಮನೆಗೆ ಕಳುಹಿಸಲಾಗುತ್ತದೆ.
ಕೇಂದ್ರ ಆರೋಗ್ಯ ಇಲಾಖೆ ಹೊರಡಿಸಿದ ಮಾರ್ಗಸೂಚಿಯಲ್ಲಿಯೇ ಇಂಥದ್ದೊಂದು ಸಲಹೆ ನೀಡಲಾಗಿದೆ. ಗುಣಲಕ್ಷಣಗಳಿಲ್ಲದ, ಲಘುವಾಗಿ ಸೋಂಕಿಗೆ ಒಳಗಾದ ರೋಗಿಗಳಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಬೇಕಾದ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ಅಂಥವರನ್ನು 24 ಗಂಟೆಯೊಳಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಿ ಎಂದು ದೆಹಲಿ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ.
ಇದನ್ನೂ ಓದಿ;ಕರೊನಾ ಲಸಿಕೆಗೆ ಇನ್ನೊಂದೇ ಹೆಜ್ಜೆ…! ಜುಲೈನಲ್ಲಿ 30 ಸಾವಿರ ಜನರ ಮೇಲೆ ಅಂತಿಮ ಪರೀಕ್ಷೆ
ಸದ್ಯ ಅಮೆರಿಕ ಸೇರಿ ಹಲವು ದೇಶಗಳಲ್ಲಿ, ಲಘು ಸೋಂಕಿಗೆ ಒಳಗಾದವರನ್ನು ತಪಾಸಣೆ ನಡೆಸಿ ಕ್ವಾರಂಟೈನ್​ನಲ್ಲಿ ಇರುವಂತೆ ತಿಳಿಸಿ ಮನೆಗೆ ಕಳುಹಿಸಲಾಗುತ್ತಿದೆ. ಕರೊನಾದಿಂದ ತೀರಾ ಗಂಭೀರ ಸ್ವರೂಪದ ಅನಾರೋಗ್ಯ ಉಂಟಾದಲ್ಲಿ ಮಾತ್ರ ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗುತ್ತಿದೆ. ಈಗ ಇಂಥದ್ದೇ ನಿರ್ಧಾರವನ್ನು ಕೇಂದ್ರ ಸರ್ಕಾರ ಕೂಡ ಮಾಡಿದೆ.
ಸೋಂಕಿಗೆ ಒಳಗಾದವರನ್ನು ವಿವಿಧ ಹಂತಗಳಲ್ಲಿ ವರ್ಗೀಕರಿಸಲಾಗುತ್ತದೆ. ಗುಣಲಕ್ಷಣಗಳೇ ಇಲ್ಲದವರಿಂದ ಹಿಡಿದು ಗಂಭೀರವಾಗಿ ಅನಾರೋಗ್ಯಕ್ಕೆ ಒಳಗಾದವರ ತನಕ ಹಲವು ಹಂತಗಳೀವೆ. ಕರೊನಾದಿಂದ ಲಘು ಸೋಂಕಿಗೆ ಒಳಗಾದವರನ್ನು ಮನೆಯಲ್ಲಿರಿಸಿ ಚಿಕಿತ್ಸೆ ನಿಡಲಾಗುತ್ತದೆ ಎಂದು ದೆಹಲಿ ಡಿಸಿಎಂ ಮನೀಷ್​ ಸಿಸೋಡಿಯಾ ಹಾಗೂ ಆರೋಗ್ಯ ಸಚಿವ ಸತ್ಯೇಂದ್ರ ಜೈನ್​ ತಿಳಿಸಿದ್ದಾರೆ.
ಇದನ್ನೂ ಓದಿ;ಕರೊನಾದಿಂದ ಸತ್ತವರ ಹೆಣವಿಡಲು ಜಾಗವಿಲ್ಲ, ಚಿತಾಗಾರದಲ್ಲಿ ಸುಡಲೂ ಆಗುತ್ತಿಲ್ಲ, ದೆಹಲಿಯಲ್ಲಿ ಬಿಗಡಾಯಿಸಿದೆ ಸ್ಥಿತಿ..!
ಕೆಮ್ಮು ಹಾಗೂ ಜ್ವರ ಕಾಣಿಸಿಕೊಳ್ಳುವುದು ಲಘು ಸೋಂಕು ಎಂದು ವರ್ಗೀಕರಿಸಲಾಗಿದೆ. ಉಸಿರಾಟದ ತೀವ್ರತೆ ಸೂಚ್ಯಂಕ 15ಕ್ಕಿಂತ ಹೆಚ್ಚಿದ್ದರೆ ಮಧ್ಯಮ ಹಾಗೂ 30ಕ್ಕಿಂತ ಹೆಚ್ಚಾದರೆ ಗಂಭೀರ ತೊಂದರೆ ಎಂದು ಪರಿಗಣಿಸಲಾಗುತ್ತದೆ.
ಸದ್ಯ, ದೆಹಲಿಯಲ್ಲಿ 26,000 ಸೋಂಕಿತರಿದ್ದು, 708 ಜನರು ಮೃತಪಟ್ಟಿದ್ದಾರೆ. 10,000ಕ್ಕೂ ಅಧಿಕ ಜನರು ಗುಣಮುಖರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
As per Union Health Ministry guidelines, asymptomatic & mild symptom cases don't need hospitalization. Any mild or asymptomatic patient has to be discharged by the hospital within 24 hours of admission: Delhi Health Department#COVID19pic.twitter.com/3rtQNrDQrc
— ANI (@ANI)June 6, 2020

ಅಮೆರಿಕ ತಯಾರಿಸಿದೆ 20 ಲಕ್ಷ ಡೋಸ್​ ಕರೊನಾ ಲಸಿಕೆ; ಟ್ರಂಪ್​ ಬಹಿರಂಗ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:ten − two =
Remember me
