ದುಬೈ:ಹಾವು ಕಡಿತಕ್ಕೆ ಒಂಟೆಯ ಕಣ್ಣೀರೇ ಮದ್ದು! ಇದನ್ನು ಕೇಳಿ ನಿಮಗೆ ಆಶ್ಚರ್ಯವಾಗುತ್ತಿದೆಯೇ? ಈ ಸುದ್ದಿ ನಿಜ. ಒಂಟೆಯ ಕಣ್ಣೀರಿನಲ್ಲಿ ಇರುವ ರಾಸಾಯನಿಕಗಳು ಹಾವಿನ ವಿಷಕ್ಕೆ ಪ್ರತಿವಿಷವಾಗಿ ಕಾರ್ಯನಿರ್ವಹಿಸುತ್ತವೆ ಎಂದು ಇತ್ತೀಚಿನ ಸಂಶೋಧನೆಗಳು ಬಹಿರಂಗಪಡಿಸಿವೆ.
ಹಾವುಗಳಲ್ಲಿ ಎರಡು ಬಗೆ ಇದೆ. ಒಂದು ವಿಷಕಾರಿ ಹಾವುಗಳು ಮತ್ತೊಂದು ವಿಷಕಾರಿಯಲ್ಲದ ಹಾವುಗಳು. ಹಾವುಗಳು ಕಚ್ಚಿದಾಗ ಅತೀ ಬೇಗನೆ ಚಿಕಿತ್ಸೆ ದೊರೆಯಬೇಕು. ಇಲ್ಲವಾದಲ್ಲಿ ಪ್ರಾಣ ಪಕ್ಷಿ ಬೇಗ ಹಾರಿ ಹೋಗಿಬಿಡುತ್ತದೆ. ಲಭ್ಯವಿರುವ ಮಾಹಿತಿ ಪ್ರಕಾರ ವಿಶ್ವದಾದ್ಯಂತ ಪ್ರತಿ ವರ್ಷ ಸುಮಾರು 1.25 ಲಕ್ಷ ಮಂದಿ ಹಾವಿನ ಕಡಿತಕ್ಕೆ ಒಳಗಾಗಿ ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯದೇ ಮೃತಪಡುತ್ತಾರೆ. ಆದರೆ, ಒಂಟೆಯ ಕಣ್ಣೀರಿನ ಮೇಲೆ ನಡೆದ ಹೊಸ ಸಂಶೋಧನೆಯು ಜನರಲ್ಲಿ ಕೊಂಚ ರಿಲೀಫ್​ ತಂದಿದೆ.
ಇಂಥದ್ದೊಂದು ಸಂಶೋಧನೆಯನ್ನು ದುಬೈನ ಕೇಂದ್ರೀಯ ಪ್ರಯೋಗಾಲಯದಲ್ಲಿ ಮಾಡಲಾಗಿದೆ. ಹಾವಿನ ವಿಷಕ್ಕೆ ಒಂಟೆಯ ಕಣ್ಣೀರನ್ನು ಬಳಸಿಕೊಂಡು ಪ್ರತಿವಿಷ ತಯಾರು ಮಾಡಬಹುದೆಂದು ತಿಳಿದುಬಂದಿದೆ. ಹಲವು ವರ್ಷಗಳಿಂದ ದುಬೈ ಲ್ಯಾಬ್​ನಲ್ಲಿ ಈ ವಿಚಾರವಾಗಿ ಸಂಶೋಧನೆ ನಡೆಯುತ್ತಿತ್ತು. ಆದರೆ, ಹಣದ ಕೊರತೆಯಿಂದ ಮುಂದುವರಿಸಲು ಸಾಧ್ಯವಾಗಿರಲಿಲ್ಲ. ಆದರೆ, ಇಂದಿನ ಸಂಶೋಧನೆಯಿಂದ ಬಹುಶಃ ಲ್ಯಾಬ್​ಗೆ ಹಣಕಾಸಿನ ನೆರವು ಸಿಕ್ಕಿ, ಒಂಟೆಯ ಕಣ್ಣೀರಿನ ಮೇಲೆ ಮತ್ತಷ್ಟು ಸಂಶೋಧನೆ ನಡೆಯುವ ಸಾಧ್ಯತೆ ಇದೆ.
ಪರಿಣಾಮಕಾರಿ ಮೆಡಿಸಿನ್​ಈ ಸಂಶೋಧನೆಯ ಮುಖ್ಯಸ್ಥರಾದ ಡಾ. ವಾರ್ನರ್ ಹೇಳುವ ಪ್ರಕಾರ​ ಒಂಟೆ ಕಣ್ಣೀರಿನಲ್ಲಿ ಪ್ರತಿವಿಷಗಳಿವೆ ಎಂಬುದರಲ್ಲಿ ಸಂದೇಹವಿಲ್ಲ. ಒಂಟೆ ಕಣ್ಣೀರಿನಲ್ಲಿರುವ ಪ್ರೋಟೀನ್​ಗಳು ಮಾನವರನ್ನು ಸೋಂಕಿನಿಂದ ರಕ್ಷಿಸುತ್ತದೆ. ಇದನ್ನು ಬಳಸಿಕೊಂಡ ಹಾವಿನ ವಿಷವನ್ನು ದೇಹದಿಂದ ತೆಗೆದುಹಾಕುವ ಪರಿಣಾಮಕಾರಿ ಔಷಧವನ್ನು ತಯಾರು ಮಾಡಬಹುದು. ಜಗತ್ತಿಗೆ ಇದನ್ನು ಪರಿಚಯಿಸಲು ಅಗತ್ಯ ತಯಾರಿಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ವಾರ್ನರ್​ ಹೇಳಿದ್ದಾರೆ.
ಇನ್ನೂ ಒಂಟೆಯ ಮೂತ್ರದಲ್ಲಿಯೂ ಔಷಧೀಯ ಗುಣಗಳಿರುವುದನ್ನು ಈ ಸಂಶೋಧನೆಗಳು ತೋರಿಸುತ್ತಿವೆ. ಸಂಶೋಧನೆಯ ಫಲವಾಗಿ ಔಷಧ ಲಭ್ಯವಾದಲ್ಲಿ ಹಾವು ಕಡಿತದಿಂದ ಸಾವು ಸಂಭವಿಸುವುದನ್ನು ತಡೆಯುವ ಸಾಧ್ಯತೆ ಹೆಚ್ಚಿದೆ.
ತಜ್ಞರು ಹೇಳುವುದೇನು?ಒಂಟೆಯ ಕಣ್ಣೀರಿನಲ್ಲಿ ಅನೇಕ ರೀತಿಯ ಅಗತ್ಯ ಪ್ರೋಟೀನ್‌ಗಳು ಕಂಡುಬರುತ್ತವೆ. ಇದು ಸೋಂಕಿನಿಂದ ನಮ್ಮನ್ನು ರಕ್ಷಿಸುತ್ತದೆ. ಒಂಟೆಯ ಕಣ್ಣೀರಿನಲ್ಲಿ ಕಂಡುಬರುವ ಲೈಸೋಜೈಮ್‌ಗಳು, ಬ್ಯಾಕ್ಟೀರಿಯಾ, ವೈರಸ್‌ ಸೇರಿದಂತೆ ಇತರೆ ಸೋಂಕುಗಳನ್ನು ತಡೆಯುತ್ತದೆ. ಕಣ್ಣೀರು ಮಾತ್ರವಲ್ಲ ಒಂಟೆ ಮೂತ್ರದಲ್ಲಿ ಔಷಧೀಯ ಶಕ್ತಿಯೂ ಇದೆ, ಇದನ್ನು ಹಿಂದಿನಿಂದಲೂ ಬಳಸಲಾಗುತ್ತಿದೆ. ಈ ಕಣ್ಣೀರು ಹಾವಿನ ವಿಷವನ್ನು ಸಹ ತೆಗೆದುಹಾಕುವಷ್ಟು ಪರಿಣಾಮಕಾರಿಯಾಗಿದೆ. ಭಾರತ ಮತ್ತು ಅಮೆರಿಕದಂತಹ ಅನೇಕ ದೇಶಗಳಲ್ಲಿ ಈ ವಿಷಯದ ಬಗ್ಗೆ ಸಂಶೋಧನೆಯೂ ನಡೆಯುತ್ತಿದೆ ಎಂದು ತಜ್ಞರು ಹೇಳಿದ್ದಾರೆ.(ಏಜೆನ್ಸೀಸ್​)
ಹುಡುಗಿಯರಿಗೆ ಇದು ಸುಲಭ, ಹುಡುಗರ ಬಗ್ಗೆ ಯೋಚಿಸಿದ್ರೆ ಅಯ್ಯೋ ಪಾಪ ಅನ್ಸುತ್ತೆ ಎಂದ ನಿತ್ಯಾ ಮೆನನ್!​

ಇ-ಖಾತೆ ಇದ್ದರಷ್ಟೇ ಆಸ್ತಿ ನೋಂದಣಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
