ನವದೆಹಲಿ:ರಾಮ ಮಂದಿರದಉದ್ಘಾಟನಾ ಕಾರ್ಯಕ್ರಮ ಹಾಗೂ ಪ್ರಾಣ ಪ್ರತಿಷ್ಠೆ ಜನವರಿ 22ರಂದು ನಡೆಯಲಿದೆ.  ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಬಯಸಿದರೆ, ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ಲೈವ್ ಸ್ಟ್ರೀಮಿಂಗ್ ಅನ್ನು ನಿಮ್ಮ ಮನೆಯಿಂದಲೆ ವೀಕ್ಷಿಸಬಹುದು.
ನಿಮ್ಮ ಫೋನ್​ನಲ್ಲಿ ಜಿಯೋ ಸಿನಿಮಾ ಅಪ್ಲಿಕೇಷನ್ ಡೌನ್​ಲೋಡ್​ ಮಾಡಿ ಅದರಲ್ಲಿ ಪ್ರಾಣಪ್ರತಿಷ್ಠೆ ಎಂಬುದನ್ನು ಕ್ಲಿಕ್ ಮಾಡಿ ವೀಕ್ಷಿಸಬಹುದು. ಇಲ್ಲವಾದಲ್ಲಿ ಎಕ್ಸ್​ನಲ್ಲಿ ಅಥವಾ ಫೇಸ್​ಬುಕ್​ನಲ್ಲಿ ರಾಮಜನ್ಮಭೂಮಿ ಟ್ರಸ್ಟ್​ ಹೆಸರಿನ ಖಾತೆಯಲ್ಲಿ ಕೂಡ ವೀಕ್ಷಿಸಬಹುದು.
ನೀವು ದೂರದರ್ಶನದ ಎಲ್ಲಾ ಚಾನೆಲ್​ಗಳಲ್ಲಿ ನೇರಪ್ರಸಾರವಿರಲಿದೆ. ರಾಮಮಂದಿರದ ಮೆಗಾ ಕವರೇಜ್ ಡಿಡಿ ನ್ಯಾಷನಲ್ ಹಾಗೂ ಡಿಡಿ ನ್ಯೂಸ್​ನಲ್ಲಿ ಪ್ರಸಾರವಾಗಲಿದೆ. ಹಾಗೆಯೇ ಜನವರಿ 23ರಂದು ದೂರದರ್ಶನದಲ್ಲಿ ಶ್ರೀರಾಮ ದೇವಸ್ಥಾನದ ಆರತಿ ಕೂಡ ನೇರಪ್ರಸಾರವಾಗಲಿದೆ. ದೂರದರ್ಶನದ ಯೂಟ್ಯೂಬ್​ ಲಿಂಕ್​ನಲ್ಲಿಯೂ ನೇರಪ್ರಸಾರ ವೀಕ್ಷಿಸಬಹುದು. ಭಾರತೀಯ ರಾಯಭಾರ ಕಚೇರಿಗಳು ಕೂಡ ಲೈವ್ ತೋರಿಸಲಿವೆ.
ಪ್ರಾಣ ಪ್ರತಿಷ್ಠೆ ಜನವರಿ 22ರಂದು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.ಹೀಗಾಗಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹಲವು ನಾಯಕರು, ನಟರು ಆಗಮಿಸಲಿದ್ದಾರೆ.

ಶ್ರೀರಾಮೋತ್ಸವ; ರಾಮಲಲ್ಲಾನ ವಿಗ್ರಹದಲ್ಲಿವೆ ಸಹಸ್ರಾರು ದೇವತೆಗಳು

ನಗುಮೊಗದ ರಾಮಲಲ್ಲಾ; ಉದ್ಘಾಟನೆಗೂ ಮುನ್ನ ಅನಾವರಣಗೊಂಡ ಶ್ರೀರಾಮ ವಿಗ್ರಹದ ಮುಖ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × one =
Remember me
