ಭೋಪಾಲ್​:ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ವ್ಯಕ್ತಿಯೋರ್ವ ತನ್ನ ಹೆಂಡತಿಯ ಶಿರಚ್ಚೇದ ಮಾಡಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯಾರ್​ನ ಖೈರಿ ಮೊಹಲ್ಲಾದಲ್ಲಿ ನಡೆದಿದೆ.
ರೇಖಾ ಚೌಧರಿ ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಆರೋಪಿ ಕಮಲೇಶ್​ ಚೌಧರಿ ತಲೆಮಾರಿಸಿಕೊಂಡಿದ್ದು, ಪೊಲೀಸರು ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ಪೊಲೀಸ್​ ಅಧಿಕಾರಿಯೊಬ್ಬರು ಆರೋಪಿ ಕಮಲೇಶ್​ ಹಾಗೂ ರೇಖಾ ನಡುವೆ ಪ್ರತಿನಿತ್ಯ ಒಂದಿಲ್ಲೊಂದು ವಿಚಾರಕ್ಕೆ ಜಗಳವಾಡುತ್ತಿದ್ದರು. ತನ್ನ ಪತಿ ಬೇರೆ ಮಹಿಳೆ ಜೊತೆ ಸಂಬಂಧ ಇಟ್ಟುಕೊಂಡಿರುವ ಬಗ್ಗೆ ರೇಖಾ ಪದೇ ಪದೇ ಪ್ರಶ್ನಿಸುತ್ತಿದ್ದ ಕಾರಣ ದಂಪತಿಗಳಿಬ್ಬರ ನಡುವೆ ಗಲಾಟೆಯಾಗುತ್ತಿತ್ತು.
ಇದನ್ನೂ ಓದಿ:2024 ಲೋಕಸಭೆ ಚುನಾವಣೆಯಲ್ಲಿ ಅಮೇಥಿಯಿಂದ ಸ್ಪರ್ಧಿಸುತ್ತಾರಾ ರಾಹುಲ್ ಗಾಂಧಿ?
ತನ್ನ ಹೆಂಡತಿ ತನ್ನ ಮೇಲೆ ಪದೇ ಪದೇ ಅನುಮಾನ ವ್ಯಕ್ತಪಡಿಸುತ್ತಿದ್ದರಿಂದ ತೀವ್ರವಾಗಿ ಕುಪಿತಗೊಂಡಿದ್ದ ಕಮಲೇಶ್​ ಆಕೆ ಮಲಗಿರುವ ವೇಳೆ ಮಕ್ಕಳ ಕಣ್ಣೆದುರಲ್ಲೇ ಶಿರಚ್ಚೇದ ಮಾಡಿ ಪರಾರಿಯಾಗಿದ್ದಾನೆ. ಬಳಿಕ ಈ ವಿಚಾರವನ್ನು ಮಕ್ಕಳು ನೆರೆಹೊರೆಯವರಿಗೆ ತಿಳಿಸಿ ಅವರ ಸಹಾಯದೊಂದಿಗೆ ದೂರು ದಾಖಲಿಸಿದ್ದಾರೆ.
ಆರೋಪಿ ಕಮಲೇಶ್​ ತಲೆಮಾರಿಸಿಕೊಂಡಿದ್ದು, ಆತನ ಬಂಧನಕ್ಕೆ ತಂಡ ಒಂದನ್ನು ರಚಿಸಲಾಗಿದೆ. ಘಟನೆ ನಡೆದ ಪ್ರದೇಶದ ಸುತ್ತ ಅಳವಡಿಸಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಸ್ಥಳೀಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − one =
Remember me
