ಹೈದರಾಬಾದ್:ಪರೀಕ್ಷೆ ಕೇಂದ್ರಕ್ಕೆ ಒಂದು ನಿಮಿಷ ತಡವಾಗಿ ಆಗಮಿಸಿದ ಎಂಬ ಕಾರಣಕ್ಕೆ ವಿದ್ಯಾರ್ಥಿಯನ್ನು ಒಳಬಿಡದೆ ಸತಾಯಿಸಿದ ಕಾರಣ ಆತ ಮನನೊಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಆದಿಲಾಬಾದ್​ ಜಿಲ್ಲೆಯಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ಟೇಕುಂ ಶಿವಕುಮಾರ್ ಎಂದು ಗುರುತಿಸಲಾಗಿದ್ದು, ಇವರು 11ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಆದಿಲಾಬಾದ್ ಜಿಲ್ಲೆಯ ಸತ್ನಾಲಾ ಅಣೆಕಟ್ಟಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಸ್ಥಳದಲ್ಲಿ ಡೆತ್​ನೋಟ್​ ಪತ್ತೆಯಾಗಿದ್ದು, ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Intermediate student in#Adilabad#Telangana#TekumSivaKumardied by suicide after he was not allowed into exam centre because officials scrupulously followed#NotEvenOneMinuteLaterule of#TSBIE; teenager left heartwrenching note for dad, saying sorry#StudentSuicide#ExamStresspic.twitter.com/MGDn4XzT0b
ಇದನ್ನೂ ಓದಿ:ನಿಮ್ಮನ್ನು ಮುಂದಿನ 10 ವರ್ಷಗಳ ಬ್ಯುಸಿಯಾಗಿರಿಸುತ್ತೇವೆ; ಸಂದೇಶ್​​ಖಾಲಿ ಆರೋಪಿ ಪರ ವಕೀಲರಿಗೆ ಕೋರ್ಟ್ ಛೀಮಾರಿ​
ಈ ಕುರಿತು ಪ್ರತಿಕ್ರಿಯಿಸಿರುವ ಆದಿಲಾಬಾದ್​ ಜಿಲ್ಲಾ ವಿಭಾಗದ ಹಿರಿಯ ಪೊಲೀಸ್​ ಅಧಿಕಾರಿ ಒಬ್ಬರು, ನನ್ನನ್ನು ಕ್ಷಮಿಸಿ ಅಪ್ಪಾ, ಈ ಆಘಾತವನ್ನು ನಿಭಾಯಿಸಲು ನನಗೆ ಸಾಧ್ಯವಾಗುತ್ತಿಲ್ಲ, ನೀವು ನನಗಾಗಿ ಬಹಳಷ್ಟು ಮಾಡಿದ್ದೀರಿ, ಆದರೆ ನಾನು ನಿಮಗಾಗಿ ಏನನ್ನೂ ಮಾಡಲು ಸಾಧ್ಯವಾಗುತ್ತಿಲ್ಲ. ಒಂದು ನಿಮಿಷ ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಬಂದಿದ್ದಕ್ಕೆ ನನ್ನನ್ನು ಒಳಬಿಡಲಿಲ್ಲ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಪತ್ತೆಯಾಗಿರುವ ಡೆತ್​ನೋಟ್​ನಲ್ಲಿ ಉಲ್ಲೇಖಿಸಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇತ್ತ ವಿದ್ಯಾರ್ಥಿಯ ಸಾವು ರಾಜ್ಯದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದ್ದು ಹಲವರು ತೆಲಂಗಾಣ ರಾಜ್ಯ ಶಿಕ್ಷಣ ಮಂಡಳಿಯ ನಿಯಮಗಳಿಗೆ ಕಿಡಿಕಾರಿದ್ದಾರೆ. ಒಂದು ನಿಮಿಷ ತಡವಾದರು ವಿದ್ಯಾರ್ಥಿಯನ್ನು ಪರೀಕ್ಷೆ ಬರೆಯಲು ಬಿಡದಿರುವುದು ಯಾವ ರೀತಿಯ ನ್ಯಾಯ. ಕೂಡಲೇ ಈ ರೀತಿಯ ನಿಯಮಗಳನ್ನು ಹಿಂಪಡೆಯಬೇಕು ಎಂದು ಹಲವರು ಆಗ್ರಹಿಸಿದ್ದಾರೆ.
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:five × two =
Remember me
