ನವದೆಹಲಿ:ಪ್ರಸ್ತುತ ನಡೆಯುತ್ತಿರುವ ಲೋಕಸಭೆ ಚುನಾವಣೆಯಲ್ಲಿ ಈಗಾಗಲೇ ನಾಲ್ಕು ಹಂತದ ಮತದಾನ ಮುಕ್ತಾಯಗೊಂಡಿದೆ. ಸೋಮವಾರ (ಮೇ 20) ರಾಯ್‌ ಬರೇಲಿ, ಅಮೇಥಿ ಹೈವೋಲ್ಟೇಜ್‌ ಕ್ಷೇತ್ರಗಳು ಸೇರಿ ಒಟ್ಟು 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಈ ನಡುವೆ ಬಿಜೆಪಿ 370, ಎನ್‌ಡಿಎ ಒಕ್ಕೂಟ 400 ಸ್ಥಾನಗಳನ್ನು ಗೆಲ್ಲುವುದರೊಂದಿಗೆ 3ನೇ ಬಾರಿಗೆ ಅಧಿಕಾರದ ಗದ್ದುಗೆ ಏರುವ ವಿಶ್ವಾಸವನ್ನು ಪ್ರಧಾನಿ ನರೇಂದ್ರ ಮೋದಿ ವ್ಯಕ್ತಪಡಿದ್ದಾರೆ.
ಇದನ್ನೂ ಓದಿ:ಮಧ್ಯಪ್ರದೇಶ: ಹೆಂಡತಿಯನ್ನು ಚುಡಾಯಿಸಿದ್ದಕ್ಕೆ ದಲಿತ ದಂಪತಿ ಮೇಲೆ ಹಲ್ಲೆ, ಶೂಗಳ ಹಾರ ಹಾಕಿಸಿದ ದುಷ್ಕರ್ಮಿಗಳು
ಖಾಸಗಿ ವಾಹಿನಿಯೊಂದಕ್ಕೆ ನೀಡದ ವಿಶೇಷ ಸಂದರ್ಶನವೊಂದರಲ್ಲಿ ಮಾತನಾಡಿದ ಮೋದಿ, ನಮ್ಮ ಗುರಿ ತುಂಬಾ ದೊಡ್ಡದಿದೆ. ನಾವು ಗೆದ್ದೇ ಗೆಲ್ಲುತ್ತೇವೆ ಎಂಬ ಆತ್ಮವಿಶ್ವಾಸ ನನಗಿದೆ. ಅತಿಯಾದ ಆತ್ಮವಿಶ್ವಾಸ ಇಲ್ಲ. ಈ ಹಿಂದೆಯೂ ಅತಿಯಾದ ಆತ್ಮವಿಶ್ವಾಸದಿಂದ ಗೆದಿಲ್ಲ. ನಮ್ಮ ಮುಂದಿನ ಆಡಳಿತ ಒಂದು ಪ್ರದೇಶಕ್ಕೆ ಸೀಮಿತವಾಗಿರುವುದಿಲ್ಲ. ದೊಡ್ಡ ಗುರಿಯನ್ನು ಕ್ಷಿಪ್ರವಾಗಿ ಸಾಧಿಸುವ ಛಲ ಹೊಂದಿದ್ದೇವೆ. ಗುರಿ ದೊಡ್ಡದಾಗಿ ಇಟ್ಟುಕೊಂಡು, ಅದರ ವೇಗಕ್ಕೆ ತಕ್ಕಂತೆ ಮುನ್ನಡೆಯುವುದು ನಮ್ಮ ಉದ್ದೇಶವಾಗಿದೆ ಎಂದು ಮೋದಿ ತಿಳಿಸಿದರು.
ದೇಶದ ಚುನಾವಣೆ ಫಲಿತಾಂಶ ಏನಾಗಲಿದೆ ಎಂಬುದು ಎಲ್ಲರಿಗೂ ತಿಳಿದಿದೆ. ನಾವು 3ನೇ ಅವಧಿಯ ಆಡಳಿತಕ್ಕೆ ಸಿದ್ಧವಾಗುತ್ತಿದ್ದೇವೆ. ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಏನೆಲ್ಲ ತೀರ್ಮಾನ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಕಾರ್ಯಸೂಚಿಯನ್ನು ಹಾಕಿಕೊಂಡು ಬನ್ನಿ ಅಂತ ಈಗಾಗಲೇ ನಮ್ಮ ಸಚಿವರಿಗೆ ತಿಳಿಸಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್‌ ಮತ್ತು ಇಂಡಿಯಾ ಒಕ್ಕೂಟವು ಈವರೆಗೆ ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸದೇ ಇರುವು0ದರಿಂದ ಮತದಾರರು ಅವರಿಂದ ಆಯ್ಕೆಯಾಗುವ ಅವಕಾಶವನ್ನೇ ಕಳೆದುಕೊಂಡಿದ್ದಾರೆ ಎಂದು ಟೀಕಿಸಿದರು. ಲೋಕಸಭೆ ಚುನಾವಣೆ ಏಪ್ರಿಲ್ 19 ರಂದು ಆರಂಭವಾಗಿದ್ದು, ನಾಳೆ (ಮೇ 20) ರಂದು ಐದನೇ ಹಂತದ ಮತದಾನ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.
ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್‌: ಶಾಸಕ ಶ್ರೀನಿವಾಸ್ ವಿರುದ್ಧ ಹರಿಹಾಯ್ದ ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
