ನವದೆಹಲಿ:ಉದ್ಯಮಿ ಸೈರಸ್ ಮಿಸ್ತ್ರಿ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಗೈನಕಲಾಜಿಸ್ಟ್ ವಿರುದ್ಧ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಮುಂಬೈನ ಖ್ಯಾತ ಗೈನಕಲಾಜಿಸ್ಟ್​ ಡಾ.ಅನಹಿತ ಪಂಡೋಲೆ ಎಂಬಾಕೆ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಷಾಪೂರ್​​ಜಿ ಪಲ್ಲೊನ್​ಜಿ ಗ್ರೂಪ್​ ಕುಟುಂಬದ ಖ್ಯಾತ ಉದ್ಯಮಿ, ಟಾಟಾ ಸನ್ಸ್​ ಸಂಸ್ಥೆಯ ಮಾಜಿ ಚೇರ್ಮನ್​ ಸೈರಸ್​ ಮಿಸ್ತ್ರಿ ಅವರು ಸೆಪ್ಟೆಂಬರ್​​ನಲ್ಲಿ ಮರ್ಸಿಡೆಸ್​ ಕಾರು ಅಪಘಾತಕ್ಕೀಡಾಗಿ ಮೃತಪಟ್ಟಿದ್ದರು. ಅವರ ಸಾವಿನ ಎರಡು ತಿಂಗಳ ಬಳಿಕ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಡಾ.ಅನಹಿತ ಪಂಡೋಲೆ ಎಂಬಾಕೆಯ ವಿರುದ್ಧ ಪ್ರಕರಣ ದಾಖಲಾಗಿದೆ.
ಮಹಾರಾಷ್ಟ್ರದ ಪಾಲ್ಘಾರ್ ಬಳಿ ಈ ಅಪಘಾತ ಸಂಭವಿಸಿದ್ದ ಸಂದರ್ಭದಲ್ಲಿ ಡಾ.ಅನಹಿತ ಅವರು ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕೇಸು ದಾಖಲಾಗಿದೆ. ಈ ಅಪಘಾತದಲ್ಲಿ ಸೈರಸ್ ಮಿಸ್ತ್ರಿ ಜತೆಗೆ ಇನ್ನೊಬ್ಬ ಉದ್ಯಮಿ ಜಹಂಗೀರ್ ಪಂಡೋಲೆ ಕೂಡ ಸಾವಿಗೀಡಾಗಿದ್ದರು. ಕಾರಿನಲ್ಲಿ ಅನಹಿತ (55) ಹಾಗೂ ಆಕೆಯ ಪತಿ ದರಿಯಸ್ (60) ಗಂಭೀರವಾಗಿ ಗಾಯಗೊಂಡಿದ್ದರು. ದರಿಯಸ್​ ಅವರ ಹೇಳಿಕೆ ಆಧರಿಸಿ ಪೊಲೀಸರು ಅನಹಿತ ವಿರುದ್ಧ ಉದ್ದೇಶಪೂರ್ವಕವಲ್ಲದ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆರ್​ಎಸ್​ಎಸ್​ ಪಥಸಂಚಲನ ರದ್ದು; ಕುತೂಹಲ ಕೆರಳಿಸಿದೆ ಮುಂದಿನ ನಡೆ!

ಸಹೋದರನ ಮಗನ ಸಾವಿನ ಕುರಿತು ರೇಣುಕಾಚಾರ್ಯ ಗಂಭೀರ ಆರೋಪ

ಶಿಕ್ಷಕರ ಏಟಿಗೆ ಬಲಿಯಾದಳು ನಾಲ್ಕನೇ ತರಗತಿಯ ವಿದ್ಯಾರ್ಥಿನಿ!

ಹೆಚ್ಚಾಗದ ವೇತನ, ‘108’ ಸಮಸ್ಯೆ: ಮನನೊಂದು ವಿಷ ಕುಡಿದ ಸರ್ಕಾರಿ ಆಸ್ಪತ್ರೆ ಆ್ಯಂಬುಲೆನ್ಸ್ ಚಾಲಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − one =
Remember me
