ನವದೆಹಲಿ:ಸೆಂಟ್ರಲ್ ವಿಸ್ಟಾ ಮರುಅಭಿವೃದ್ಧಿ ಯೋಜನಯಡಿ ನಿರ್ವಣವಾಗಿರುವ ಸಂಸತ್ತಿನ ಹೊಸ ಕಟ್ಟಡ ಈ ತಿಂಗಳ ಕೊನೆಯಲ್ಲಿ ಉದ್ಘಾಟನೆಯಾಗುವ ಸಾಧ್ಯತೆ ಇದೆ. ನರೇಂದ್ರ ಮೋದಿ 2014ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ದಿನವಾದ ಮೇ 26 ಲೋಕಾರ್ಪಣೆಗಾಗಿ ಸಂಭಾವ್ಯ ದಿನ ಎನ್ನಲಾಗಿದೆ.
ಇದನ್ನೂ ಓದಿ:ನಾವು ಗೆಲ್ಲಲೆಂದೇ ಬಂದವರು… ನಮಗೆ ಸೋಲು ಕ್ಷಣಿಕ: ಬಿ.ಎಲ್.ಸಂತೋಷ್​
ಹೊಸ ಭವನದಲ್ಲೇ ಮುಂಗಾರು ಅಧಿವೇಶನ: ಜುಲೈನಲ್ಲಿ ಆರಂಭವಾಗುವ ಸಂಸತ್ತಿನ ಮುಂಗಾರು ಅಧಿವೇಶನವನ್ನು ಹೊಸ ಭವನದಲ್ಲಿ ಆಯೋಜಿಸುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ. ಈ ವರ್ಷದ ಕೊನೆಯಲ್ಲಿ ನಡೆಯಬೇಕಿರುವ ಜಿ-20 ದೇಶಗಳ ಸ್ಪೀಕರ್​ಗಳ ಸಭೆಯನ್ನು ಹೊಸ ಕಟ್ಟಡದಲ್ಲಿ ಆಯೋಜಿಸುವ ಸಂಭವವಿದೆ.
ಇದನ್ನೂ ಓದಿ:ಹುಂಬ ವಿಶ್ವಾಸ; ಸೋಲಿನ ಸಹವಾಸ
2021ರ ಜನವರಿಯಲ್ಲಿ ತ್ರಿಕೋನಾಕೃತಿಯ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಿತ್ತು. 75ನೇ ಸ್ವಾತಂತ್ರೊ್ಯೕತ್ಸವದ ಹೊತ್ತಿಗೆ ಅಂದರೆ 2022ರ ಆಗಸ್ಟ್​ನಲ್ಲಿ ಮುಗಿಸುವ ಯೋಜನೆಯಿತ್ತು. ಆದರೆ, 9 ತಿಂಗಳು ವಿಳಂಬವಾಗಿದೆ.
ಹೊಸ ಸಂಸತ್ ಭವನಕ್ಕೆ ಮೂರು ಮುಖ್ಯ ದ್ವಾರಗಳಿದ್ದು ಜ್ಞಾನ ದ್ವಾರ, ಶಕ್ತಿ ದ್ವಾರ ಮತ್ತು ಕರ್ಮ ದ್ವಾರ ಎಂದು ಹೆಸರಿಸಲಾಗಿದೆ. ಸಂಸದರು, ವಿಐಪಿಗಳು ಮತ್ತು ಸಂದರ್ಶಕರಿಗಾಗಿ ಪ್ರತ್ಯೇಕ ಪ್ರವೇಶ ದ್ವಾರಗಳಿರುತ್ತವೆ. 64,500 ಚದರ ಅಡಿ ವಿಸ್ತೀರ್ಣದಲ್ಲಿ ನಾಲ್ಕಂತಸ್ತಿನ ಕಟ್ಟಡವನ್ನು ನಿರ್ವಿುಸಲಾಗಿದೆ. 1,224 ಸಂಸದರಿಗೆ ಆಸನ ವ್ಯವಸ್ಥೆ ಕಲ್ಪಿಸಬಹುದು. ಅಂದಾಜು 970 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ಭವನ ನಿರ್ವಣವಾಗಿದೆ. ಟಾಟಾ ಪ್ರಾಜೆಕ್ಟ್ಸ್ ನಿರ್ವಣದ ಗುತ್ತಿಗೆ ಪಡೆದಿತ್ತು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × two =
Remember me
