ನವದೆಹಲಿ:ಕೇಂದ್ರ ಹಣಕಾಸು ಸಚಿವಾಲಯವು ಹೊಸದೊಂದು ಆದೇಶ ಹೊರಡಿಸಿದ್ದು, ಇದು ಆದಾಯ ತೆರಿಗೆ ಪಾವತಿದಾರರೆಲ್ಲ ಗಮನಿಸಲೇಬೇಕಾದ ಸಂಗತಿಯಾಗಿದೆ. ಏಕೆಂದರೆ ಆದಾಯ ತೆರಿಗೆ ಪಾವತಿದಾರರಿಗೆ ಸರ್ಕಾರ ಈ ಒಂದು ಯೋಜನೆಯ ಪ್ರಯೋಜನ ಸಿಗುವುದಿಲ್ಲ.
ಅದೇನೆಂದರೆ, ಆದಾಯ ತೆರಿಗೆ ಪಾವತಿದಾರರಿಗೆ ಅಟಲ್ ಪೆನ್ಷನ್ ಯೋಜನೆಯ ಪ್ರಯೋಜನ ಪಡೆಯಲಿಕ್ಕೆ ಆಗುವುದಿಲ್ಲ. ಹಣಕಾಸು ಸಚಿವಾಲಯ ಹೊರಡಿಸಿರುವ ಈ ಹೊಸ ಆದೇಶ ಅಕ್ಟೋಬರ್ 1ರಿಂದ ಜಾರಿಗೆ ಬರಲಿದೆ. ಯಾವುದೇ ವ್ಯಕ್ತಿ ಆದಾಯ ತೆರಿಗೆ ಪಾವತಿಸಿದ್ದರೆ ಅಥವಾ ಪಾವತಿಸುತ್ತಿದ್ದರೆ ಅಂಥವರು ಅಟಲ್​ ಪಿಂಚಣಿ ಯೋಜನೆಗೆ ಅರ್ಹರಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಒಂದು ವೇಳೆ ಯಾರಾದರೂ ಅ. 1ರ ಬಳಿಕ ಅಟಲ್ ಪಿಂಚಣಿ ಯೋಜನೆಯ ಪ್ರಯೋಜನ ಪಡೆಯುತ್ತಿರುವಂಥವರು ಆದಾಯ ತೆರಿಗೆ ಪಾವತಿಸಿದ್ದು ಅಥವಾ ಪಾವತಿಸುತ್ತಿರುವುದು ಕಂಡುಬಂದರೆ ಅಂಥವರ ಯೋಜನೆ ರದ್ದುಗೊಳಿಸಿ, ಅದುವರೆಗಿನ ಪಿಂಚಣಿ ಮೊತ್ತವನ್ನು ನೀಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಅಟಲ್ ಪಿಂಚಣಿ ಯೋಜನೆಯನ್ನು 18ರಿಂದ 40 ವರ್ಷದೊಳಗಿನವರು ಪಡೆಯಬಹುದಾಗಿದ್ದು, ಅವರು ಬ್ಯಾಂಕ್​ ಅಥವಾ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಇದ್ದರೆ ಯೋಜನೆಗೆ ನೋಂದಾಯಿಸಿಕೊಳ್ಳಬಹುದು. ಫಲಾನುಭವಿಗಳಿಗೆ 60 ವರ್ಷದ ಬಳಿಕ ಮಾಸಿಕ ಕನಿಷ್ಠ 1ರಿಂದ 5 ಸಾವಿರ ರೂ. ವರೆಗೆ ಪಿಂಚಣಿ ಲಭಿಸುತ್ತದೆ. ಸದ್ಯ ದೇಶದಲ್ಲಿ ಜೂ. 4ರವರೆಗಿನ ಮಾಹಿತಿ ಪ್ರಕಾರ 3.739 ಕೋಟಿ ಮಂದಿ ಈ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ.
ಸರ್ಕಾರಿ ಕಾರ್ಯಕ್ರಮದಿಂದ ಎದ್ದು ಹೊರಟ ಜನರ ಸಮಯಪ್ರಜ್ಞೆಗೆ ಸಿಎಂ ಮೆಚ್ಚುಗೆ!
Fact Check: ರಾಷ್ಟ್ರಧ್ವಜ ಖರೀದಿಸದಿದ್ದರೆ ರೇಷನ್ ಕೊಡಲ್ವಾ?; ಇಲ್ಲಿದೆ ಸತ್ಯಾಂಶ..
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 − fifteen =
Remember me
