ಕೋಲ್ಕತ್ತಾ:ಮಾರ್ಚ್ 6ರಂದು ಕೋಲ್ಕತ್ತಾದಲ್ಲಿ ನಿರ್ಮಿಸಲಾದ ಭಾರತದ ಮೊದಲ ನದಿಯೊಳಗಿನ ಮೆಟ್ರೋ ಸುರಂಗವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದು, ಹೂಗ್ಲಿ ನದಿಯ ಅಡಿಯಲ್ಲಿ ನಿರ್ಮಿಸಲಾದ ಸುರಂಗವು ಕೋಲ್ಕತ್ತಾ ಮೆಟ್ರೋದ ಪೂರ್ವ-ಪಶ್ಚಿಮ ಮೆಟ್ರೋ ಕಾರಿಡಾರ್‌ನ ಭಾಗವಾಗಿದೆ. ಇದು ಹೌರಾ ಮೈದಾನದಿಂದ ಎಸ್‌ಪ್ಲೇನೇಡ್‌ಗೆ ಸಂಪರ್ಕಿಸುತ್ತದೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಲೋಕ ಗೆಲ್ಲಲು ಬಿಜೆಪಿ ಸಂಕಲ್ಪಪತ್ರ: ವಿಶೇಷ ಜನಮತ ಅಭಿಯಾನಕ್ಕೆ ಚಾಲನೆ
ಅದೇ ದಿನ ಕೋಲ್ಕತ್ತಾ ಮೆಟ್ರೋದ ಕವಿ ಸುಭಾಷ್-ಹೇಮಂತ ಮುಖೋಪಾಧ್ಯಾಯ ಮತ್ತು ತಾರಾತಲಾ-ಮಜೆರ್ಹತ್ ವಿಭಾಗಗಳನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಈ ವಿಭಾಗಗಳು ರಸ್ತೆ ದಟ್ಟಣೆಯನ್ನು ನಿವಾರಿಸಲು ಮತ್ತು ತಡೆರಹಿತ, ಸುಲಭ ಮತ್ತು ಆರಾಮದಾಯಕ ಸಂಪರ್ಕವನ್ನು ಒದಗಿಸುವ ಗುರಿಯನ್ನು ಹೊಂದಿವೆ.
ಹೌರಾ ಮೈದಾನ್​-ಎಸ್ಪ್ಲಾನೇಡ್ ಮೆಟ್ರೋ ಮಾರ್ಗವು ಭಾರತದ ಯಾವುದೇ ಪ್ರಬಲ ನದಿಯ ಅಡಿಯಲ್ಲಿ ಮೊದಲ ಸಾರಿಗೆ ಸುರಂಗವನ್ನು ಹೊಂದಿದೆ. ಆದರೆ ಹೌರಾ ಮೆಟ್ರೋ ನಿಲ್ದಾಣವು ದೇಶದಲ್ಲೇ ಅತ್ಯಂತ ಆಳವಾದದ್ದು (33-ಮೀಟರ್ ಮೇಲ್ಮೈ ಕೆಳಗೆ) ಎನ್ನಲಾಗಿದೆ. ಮೆಟ್ರೋ 45 ಸೆಕೆಂಡುಗಳಲ್ಲಿ ಹೂಗ್ಲಿ ನದಿಯ ಅಡಿಯಲ್ಲಿ 520-ಮೀಟರ್ ವ್ಯಾಪ್ತಿಯನ್ನು ಕ್ರಮಿಸುವ ನಿರೀಕ್ಷೆಯಿದೆ.
ಇದನ್ನೂ ಓದಿ:ಡೆಲ್ಲಿ ಕ್ಯಾಪಿಟಲ್ಸ್‌ಗೆ ಹ್ಯಾಟ್ರಿಕ್ ಗೆಲುವು: ಅಗ್ರಸ್ಥಾನಕ್ಕೇರಿದ ಲ್ಯಾನಿಂಗ್ ಬಳಗ
ಮಜೆರ್ಹತ್ ಮೆಟ್ರೋ ನಿಲ್ದಾಣವು ವಿಶಿಷ್ಟವಾಗಿ ಎತ್ತರಿಸಿದ ಮೆಟ್ರೋ ನಿಲ್ದಾಣವಾಗಿದ್ದು, ಇದು ಕಾಲುವೆಯನ್ನು ಸಹ ಒಳಗೊಂಡಿರುತ್ತದೆ. ಕೋಲ್ಕತ್ತಾ ಮೆಟ್ರೋ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಕೌಸಿಕ್ ಮಿತ್ರಾ ಮಾತನಾಡಿ, “ಪ್ರಧಾನಿ ಮೋದಿ ಅವರು ಕೋಲ್ಕತ್ತಾದ ಜನರಿಗೆ ನೀಡಿದ ಉಡುಗೊರೆ ಇದಾಗಿದೆ. ಈ ಉದ್ಘಾಟನೆಯೊಂದಿಗೆ ಬಹುಕಾಲದ ಕನಸು ನನಸಾಗಲಿದೆ” ಎಂದಿದ್ದಾರೆ,(ಏಜೆನ್ಸೀಸ್).
ಮದುವೆಗೂ ಮುನ್ನ ಆರೋಗ್ಯ ಸಮಸ್ಯೆ ತೋಡಿಕೊಂಡ ಅನಂತ್​; ಮಗನ ಮಾತಿಗೆ ಕಣ್ಣೀರಿಟ್ಟ ಮುಖೇಶ್ ಅಂಬಾನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 8 =
Remember me
