ಬೆಂಗಳೂರು:ಇಂದು ಬೆಳಿಗ್ಗೆ, ಭಾರತದಲ್ಲಿನ ಅನೇಕ ಮೊಬೈಲ್ ಬಳಕೆದಾರರು ಸರ್ಕಾರದಿಂದ ತುರ್ತು ಎಚ್ಚರಿಕೆಯ ಸಂದೇಶವನ್ನು ಸ್ವೀಕರಿಸಿದ್ದಾರೆ. 11:35ಕ್ಕೆ   Android ಮತ್ತು iPhoneಗಳಿಗೆ ತುರ್ತು ಸಂದೇಶ ಬಂದಿದೆ. ಏನಿದು ಸಂದೇಶ ಎನ್ನುವ ಪ್ರಶ್ನೆ ಸೋಶಿಯಲ್​​ ಮೀಡಿಯಾದಲ್ಲಿ ಮುನ್ನೆಲೆಗೆ ಬಂದಿದೆ.
ಭಾರತದ ಲಕ್ಷಾಂತರ ಜನರ ಮೊಬೈಲ್‌ ಫೋನ್‌ಗಳಿಗೆ ತುರ್ತು ಎಚ್ಚರಿಕೆ ಸಂದೇಶ ಬಂದಿದ್ದು, ಇದರಿಂದ ಜನ ಆತಂಕಕ್ಕೀಡಾಗಿದ್ದರು. ತಮಗೆ ಬಂದ ಸಂದೇಶಗಳನ್ನು ಸೋಶಿಯಲ್​​ ಮೀಡಿಯಾದಲ್ಲಿ ಶೇರ್​​ ಮಾಡಿ, ಈ ಸಂದೇಶ ನನಗೆ ಮಾತ್ರ ಬಂದಿದ್ದ, ನಿಮಗೂ ಬಂತಾ ಎನ್ನುವ ಪ್ರಶ್ನೆಯನ್ನು ಮಾಡಿದ್ದರು.
ಆದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಈ ಸಂದೇಶವನ್ನು ಪರೀಕ್ಷಾರ್ಥವಾಗಿ ಕಳುಹಿಸಿದೆ ಎಂದು ತಿಳಿದು ಬಂದಿದೆ.  ಇದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯಿಂದ ಸೆಲ್ ಬ್ರಾಡ್‌ಕಾಸ್ಟಿಂಗ್ ಸಿಸ್ಟಮ್  ಮೂಲಕ ಕಳುಹಿಸಲಾದ ಮಾದರಿ ಪರೀಕ್ಷಾ ಸಂದೇಶವಾಗಿದೆ ಎಂದು ತಿಳಿದ ನಂತರ ಜನ ನಿಟ್ಟುಸಿರು ಬಿಟ್ಟಿದ್ದಾರೆ.
ಅಸಲಿಗೆ ನಡೆದಿದ್ದೇನು?:ಇಂದು ಬೆಳಿಗ್ಗೆ 11.35ರ ಹೊತ್ತಿಗೆ ಭಾರತದ ಅನೇಕ ಮೊಬೈಲ್ ಬಳಕೆದಾರರು ಸರ್ಕಾರದಿಂದ ತುರ್ತು ಎಚ್ಚರಿಕೆಯ ಸಂದೇಶವನ್ನು ಸ್ವೀಕರಿಸಿದ್ದಾರೆ. ತುರ್ತು ಎಚ್ಚರಿಕೆಯ ರೆಕಾರ್ಡೆಡ್‌ ಧ್ವನಿಯೊಂದಿಗೆ ಇದನ್ನು ಕಳುಹಿಸಲಾಗಿದೆ.  ಬೀಪ್ ಸದ್ದಿನೊಂದಿಗೆ ಬಂದ ಈ ಎಚ್ಚರಿಕೆ ಸಂದೇಶವನ್ನು ಕೆಲವು ನಿಮಿಷಗಳ ಅಂತರದಲ್ಲಿ ಹಿಂದಿ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಕಳುಹಿಸಲಾಗಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಹೇಳುವುದೇನು?:ಈ ಎಚ್ಚರಿಕೆಯ ಸಂದೇಶ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆಯ ಭಾಗವಾಗಿದೆ. ಇದನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ನಡೆಸಿದೆ.  ತುರ್ತು ಸಮಯದಲ್ಲಿ ಎಚ್ಚರಿಕೆ ವ್ಯವಸ್ಥೆ ಪರಿಣಾಮಕಾಯಾಗಿರುತ್ತದೆಯೇ ಎಂಬುದನ್ನು ನಿರ್ಣಯಿಸಲು ಮತ್ತು ಯಾವುದೇ ಸಂಭಾವ್ಯ ಸಮಸ್ಯೆಗಳನ್ನು ಗುರುತಿಸಲು ನಡೆಸಿದ ಪರೀಕ್ಷೆಯ ಭಾಗವಾಗಿದೆ. ಸೆಲ್ ಬ್ರಾಡ್‌ಕಾಸ್ಟಿಂಗ್ ಸಿಸ್ಟಮ್ (CBS) Cell Broadcasting System ಮೂಲಕ 11:30 ರಿಂದ ಮತ್ತು 11:44 ರ  ನಡುವೆ ಈ ಸಂದೇಶವನ್ನು ಕಳುಹಿಸಲಾಗಿದೆ.
ಪ್ಯಾನ್ ಇಂಡಿಯಾ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷಿಸಲು ಈ ಸಂದೇಶವನ್ನು ಕಳುಹಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು  ಸಕಾಲಿಕ ಎಚ್ಚರಿಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಗಮನಾರ್ಹವಾಗಿ, ಸೆಲ್ ಬ್ರಾಡ್‌ಕಾಸ್ಟಿಂಗ್ ಸಿಸ್ಟಮ್ ಎನ್ನುವುದು ಮೊಬೈಲ್ ಆಪರೇಟರ್‌ಗಳು ಫೋನ್ ಆನ್ ಆಗಿದೆಯೋ ಇಲ್ಲವೋ , ಮೊಬೈಲ್ ನೆಟ್‌ವರ್ಕ್ ಪ್ರದೇಶದಲ್ಲಿ ಇದೆಯೋ ಇಲ್ಲವೋ ಎಂಬುದನ್ನು ಲೆಕ್ಕಿಸದೆ ನಿರ್ದಿಷ್ಟ ಪ್ರದೇಶದಲ್ಲಿ ಎಲ್ಲಾ ಫೋನ್‌ಗಳಿಗೆ  ಸಂದೇಶಗಳನ್ನು ಕಳುಹಿಸಲು ಬಳಸುವ ತಂತ್ರಜ್ಞಾನವಾಗಿದೆ.
ಭಾರತದಲ್ಲಿನ ಆಂಡ್ರಾಯ್ಡ್ ಫೋನ್ ಬಳಕೆದಾರರು ಸೆಪ್ಟೆಂಬರ್ 15, ಜುಲೈ 20 ಮತ್ತು ಆಗಸ್ಟ್ 17 ರಂದು ಇದೇ ರೀತಿಯ ಪರೀಕ್ಷಾ ಎಚ್ಚರಿಕೆಗಳನ್ನು ಸ್ವೀಕರಿಸಿದ್ದರು.
ಗಾಯಕಿಯ ಕೊನೆಯ ಆಸೆ ಈಡೇರಿಸಿದ ಲತಾ ಮಂಗೇಶ್ಕರ್ ಕುಟುಂಬ; ತಿರುಪತಿ ದೇವಸ್ಥಾನಕ್ಕೆ 10 ಲಕ್ಷ ರೂ. ದೇಣಿಗೆ






ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:12 + fifteen =
Remember me
