ಉತ್ತರಪ್ರದೇಶ:ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಕೇಂದ್ರ ಸರ್ಕಾರವು ಅಧಿಸೂಚನೆ ಹೊರಡಿಸಿದ ಬಳಿಕ ಅಖಿಲ ಭಾರತ ಮುಸ್ಲಿಂ ಜಮಾತ್ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ ಬರೇಲ್ವಿ ಈ ಕಾನೂನನ್ನು ಸ್ವೀಕರಿಸುವುದಾಗಿ ಹೇಳಿದ್ದು, ಇದು ಮುಸ್ಲಿಂ ಸಮುದಾಯದ ಪೌರತ್ವದ ಮೇಲೆ ಪ್ರಭಾವ ಬೀರುವುದಿಲ್ಲ ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ:ಲೋಕಸಮರ: ಖಾಸಗಿ ವಿಮಾನ, ಕಾಪ್ಟರ್​ಗೆ ಭರ್ಜರಿ ಡಿಮ್ಯಾಂಡ್​ ! ಇದರ ಬಾಡಿಗೆ ಬೆಲೆ ಕೇಳಿದ್ರೆ ಬೆರಗಾಗ್ತೀರಾ..
ಕೇಂದ್ರ ಸರ್ಕಾರ ಸಿಎಎ ಕಾನೂನನ್ನು ಜಾರಿಗೆ ತಂದಿದೆ. ನಾನು ಈ ಕಾನೂನನ್ನು ಸ್ವಾಗತಿಸುತ್ತೇನೆ. ಇದನ್ನು ಬಹಳ ಮುಂಚೆಯೇ ಮಾಡಬೇಕಾಗಿತ್ತು. ಈ ಕಾನೂನಿನ ಬಗ್ಗೆ ಮುಸ್ಲಿಮರಲ್ಲಿ ಸಾಕಷ್ಟು ತಪ್ಪು ತಿಳುವಳಿಕೆಗಳಿವೆ. ಈ ಕಾನೂನುನಿಂದ ಮುಸ್ಲಿಂಮರಿಗೆ ಏನು ಅಪಾಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.ಮುಸ್ಲಿಮರೊಂದಿಗೆ, ಧರ್ಮದ ಆಧಾರದ ಮೇಲೆ ದೌರ್ಜನ್ಯಗಳನ್ನು ಎದುರಿಸುತ್ತಿರುವ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಬರುವ ಮುಸ್ಲಿಮೇತರರಿಗೆ ಪೌರತ್ವ ನೀಡಲು ಈ ಹಿಂದೆ ಯಾವುದೇ ಕಾನೂನು ಇರಲಿಲ್ಲ ಮೌಲಾನಾ ಹೇಳಿದ್ದಾರೆ.
ಕೋಟ್ಯಂತರ ಭಾರತೀಯ ಮುಸ್ಲಿಮರಿಗೆ ಈ ಕಾನೂನಿನಿಂದ ಯಾವುದೇ ಪರಿಣಾಮ ಬೀರುವುದಿಲ್ಲ. ಈ ಕಾನೂನು ಯಾವುದೇ ಮುಸಲ್ಮಾನರ ಪೌರತ್ವವನ್ನು ಕಸಿದುಕೊಳ್ಳಲು ಹೋಗುವುದಿಲ್ಲ. ಕಳೆದ ವರ್ಷಗಳಲ್ಲಿ, ಪ್ರತಿಭಟನೆಗಳು ನಡೆದಿರುವುದು ಕಂಡುಬಂದಿದೆ. ಕೆಲವು ರಾಜಕೀಯ ವ್ಯಕ್ತಿಗಳು ಮುಸ್ಲಿಮರಲ್ಲಿ ತಪ್ಪು ತಿಳುವಳಿಕೆಯನ್ನು ಹುಟ್ಟುಹಾಕಿದ್ದಾರೆ. ಭಾರತದ ಪ್ರತಿಯೊಬ್ಬ ಮುಸಲ್ಮಾನನೂ ಸಿಎಎಯನ್ನು ಸ್ವಾಗತಿಸಬೇಕು ಎಂದು ಸಲಹೆ ನೀಡಿದ್ದಾರೆ.
भारत सरकार द्वारा CAA क़ानून को लागू किये जाने पर हम स्वागत करते हैं और भारत का हर मुसलमान इसका स्वागत करें, मुसलमान न घबराएं, ये नागरिकता देता है न की छिनता है, इससे मुसलमानों का कोई लेना-देना नहीं।@PMOIndia@rashtrapatibhvn#BigBreaking#CAA#BreakingNewspic.twitter.com/NLuToI82FM
— Maulana Shahabuddin Razvi Bareilvi (@Shahabuddinbrly)March 11, 2024

ಫೆಬ್ರವರಿಯಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪೌರತ್ವವನ್ನು ಒದಗಿಸಲು ಸಿಎಎನ್ನು ತರಲಾಗಿದೆಯೇ ಹೊರತು ಯಾರ ಪೌರತ್ವವನ್ನು ಕಸಿದುಕೊಳ್ಳಲು ಅಲ್ಲ ಎಂದು ಎಂದರು.
ನಮ್ಮ ದೇಶದಲ್ಲಿ ಅಲ್ಪಸಂಖ್ಯಾತರು ಮತ್ತು ವಿಶೇಷವಾಗಿ ನಮ್ಮ ಮುಸ್ಲಿಂ ಸಮುದಾಯವನ್ನು ಪ್ರಚೋದಿಸಲಾಗುತ್ತಿದೆ. ಸಿಎಎ ಯಾರ ಪೌರತ್ವವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಏಕೆಂದರೆ ಈ ಕಾಯಿದೆಯಲ್ಲಿ ಯಾವುದೇ ಅವಕಾಶವಿಲ್ಲ. ಸಿಎಎ ಬಾಂಗ್ಲಾದೇಶ ಮತ್ತು ಪಾಕಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ನಿರಾಶ್ರಿತರಿಗೆ ಪೌರತ್ವವನ್ನು ನೀಡುವ ಕಾಯಿದೆ ಅಮಿತಾ ಶಾ ಹೇಳಿದ್ದರು.
ಸೋಮವಾರ ಸಂಜೆ ಕೇಂದ್ರ ಗೃಹ ಸಚಿವಾಲಯವು ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ) ಅನುಷ್ಠಾನದ ನಿಯಮಗಳನ್ನು ಪ್ರಕಟಿಸಿತ್ತು.
IPL ಆರಂಭಕ್ಕೂ ಅಂಬಾಟಿ ರಾಯಡು ಮಹತ್ವದ ಹೇಳಿಕೆ..! ಸಿಎಸ್​ಕೆಗೆ ರೋಹಿತ್ ಶರ್ಮ ಕ್ಯಾಪ್ಟನಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
