ನವದೆಹಲಿ:ಕಳೆದ ಐದು ವರ್ಷಗಳಿಂದ ಚೀನಾದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ತಮಿಳುನಾಡಿನ 22 ವರ್ಷದ ಭಾರತೀಯ ವಿದ್ಯಾರ್ಥಿ ಅನಾರೋಗ್ಯದಿಂದ ಮೃತಪಟ್ಟಿದ್ದು, ಆರ್ಥಿಕವಾಗಿ ಹಿಂದುಳಿದಿರುವ ಆತನ ಕುಟುಂಬ ಮೃತದೇಹವನ್ನು ಮರಳಿ ಭಾರತಕ್ಕೆ ತರಲು ವಿದೇಶಾಂಗ ಸಚಿವಾಲಯವನ್ನು ಕೇಳಿದೆ.
ಭಾರತೀಯ ವಿದ್ಯಾರ್ಥಿ ಅಬ್ದುಲ್ ಶೇಖ್, ತನ್ನ ಕೋರ್ಸ್‌ನ ಕೊನೆಯಲ್ಲಿ ಚೀನಾದಲ್ಲಿ ಇಂಟರ್ನ್​ಶಿಪ್​ ಮಾಡುತ್ತಿದ್ದ. ಇತ್ತೀಚೆಗಷ್ಟೇ ಭಾರತಕ್ಕೆ ಬಂದಿದ್ದ ಆತ, ಡಿಸೆಂಬರ್ 11ರಂದು ಚೀನಾಕ್ಕೆ ವಾಪಸಾಗಿದ್ದ.
ಶೇಖ್ ಚೀನಾಕ್ಕೆ ತೆರಳಿದ ನಂತರ ಕ್ವಾರಂಟೈನ್​ಗೆ 8 ದಿನಗಳ ಕಾಲ ಒಳಗಾಗಿದ್ದ. ನಂತರ ಈಶಾನ್ಯ ಚೀನಾದ ಹೈಲಾಂಗ್‌ಜಿಯಾಂಗ್ ಪ್ರಾಂತ್ಯದ ಕಿಕಿಹಾರ್ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ತನ್ನ ಇಂಟರ್ನ್‌ಶಿಪ್ ಮಾಡುತ್ತಿದ್ದ.
ಆದರೂ, ನಂತರ ಆತ ಅಸ್ವಸ್ಥನಾದ ಕಾರಣ ಆತನನ್ನು ತೀವ್ರ ನಿಗಾ ಘಟಕಕ್ಕೆ ಕಳುಹಿಸಲಾಯಿತು, ಅಲ್ಲಿ ಯುವಕ ಸಾವಿಗೀಡಾಗಿದ್ದಾನೆ. ಮೃತದೇಹವನ್ನು ಮನೆಗೆ ತರಲು ವಿದ್ಯಾರ್ಥಿಯ ಕುಟುಂಬ ವಿದೇಶಾಂಗ ಸಚಿವಾಲಯದಿಂದ ನೆರವು ಕೋರಿದೆ. ದರ ಜೊತೆಗೆ ಕುಟುಂಬ, ತಮಿಳುನಾಡು ಸರ್ಕಾರದಿಂದಲೂ ನೆರವು ಕೋರಿದೆ.(ಏಜೆನ್ಸೀಸ್)
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:7 − four =
Remember me
