ಅಮೆರಿಕ:ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ನಿರಂತರವಾಗಿ ಟಾರ್ಗೆಟ್ ಮಾಡಲಾಗುತ್ತಿದೆ. ಉಮಾ ಸತ್ಯ ಸಾಯಿ ನಂತರ ಇದೀಗ ಅಮೆರಿಕದಲ್ಲಿ ನೆಲೆಸಿರುವ, ಕಳೆದ ತಿಂಗಳಿಂದ ನಾಪತ್ತೆಯಾಗಿದ್ದ 25 ವರ್ಷದ ಭಾರತೀಯ ವಿದ್ಯಾರ್ಥಿ ಅಬ್ದುಲ್ ಅರಾಫತ್ ಮೃತದೇಹ ಪತ್ತೆಯಾಗಿದೆ. ಅಬ್ದುಲ್ ಅರಾಫತ್  ಅಮೆರಿಕದ ಕ್ಲೀವ್‌ಲ್ಯಾಂಡ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಹೈದರಾಬಾದ್ ನಿವಾಸಿ ಮೊಹಮ್ಮದ್ ಅಬ್ದುಲ್ ಅರಾಫತ್ ಸಾವು ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಮತ್ತೊಮ್ಮೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇದು ಒಂದು ವಾರದೊಳಗೆ ಬೆಳಕಿಗೆ ಬಂದ ಎರಡನೇ ಘಟನೆಯಾಗಿದೆ, ಆದರೆ ಈ ವರ್ಷ ಇದುವರೆಗೆ 11 ಭಾರತೀಯ ವಿದ್ಯಾರ್ಥಿಗಳು ಇದೇ ರೀತಿ ಸಾವನ್ನಪ್ಪಿದ್ದಾರೆ.
ನ್ಯೂಯಾರ್ಕ್‌ನಲ್ಲಿರುವ ಭಾರತೀಯ ದೂತಾವಾಸವು (ಕಾನ್ಸುಲೇಟ್ ) ಅರಾಫತ್‌ನ ಸಾವನ್ನು ದೃಢೀಕರಿಸಿ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದೆ. “ಶೋಧನಾ ಕಾರ್ಯಾಚರಣೆಯಲ್ಲಿದ್ದ ಮೊಹಮ್ಮದ್ ಅಬ್ದುಲ್ ಅರಾಫತ್ ಓಹಿಯೋದ ಕ್ಲೀವ್‌ಲ್ಯಾಂಡ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ತಿಳಿದು ದುಃಖವಾಗಿದೆ. ಕ್ಲೀವ್‌ಲ್ಯಾಂಡ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾದ  ಅಬ್ದುಲ್ ಅರಾಫತ್ ಸಾವಿನ ಬಗ್ಗೆ ಸಂಪೂರ್ಣ ತನಿಖೆಯನ್ನು ಖಚಿತಪಡಿಸಿಕೊಳ್ಳಲು ಯುಎಸ್‌ನ ಸ್ಥಳೀಯ ಏಜೆನ್ಸಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ. ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಕುಟುಂಬಕ್ಕೆ ಎಲ್ಲ ರೀತಿಯ ನೆರವು ನೀಡುತ್ತಿದ್ದೇವೆ” ಎಂದು ಹೇಳಿದೆ.
ಮೊಹಮ್ಮದ್ ಅಬ್ದುಲ್ ಅರಾಫತ್ ಮಾರ್ಚ್ 7, 2024 ರಿಂದ ನಾಪತ್ತೆಯಾಗಿದ್ದರು. ನಾಪತ್ತೆಯಾದ 10 ದಿನಗಳ ನಂತರ ಅಬ್ದುಲ್ ಅರಾಫತ್ ತಂದೆ ಮೊಹಮ್ಮದ್ ಸಲೀಂ ಅವರಿಗೆ ಕರೆ ಬಂದಿತ್ತು. ಕರೆ ಮಾಡಿದವರು ಅಬ್ದುಲ್ ಅರಾಫತ್ ಅವರನ್ನು ಅಪಹರಿಸಲಾಗಿದೆ ಎಂದು ಹೇಳಿದ್ದರು. ಅಷ್ಟೇ ಅಲ್ಲ, ಅಬ್ದುಲ್ ಅರಾಫತ್ ನನ್ನು ಬಿಡುಗಡೆ ಮಾಡಲು 1200 ಅಮೆರಿಕನ್ ಡಾಲರ್ ಬೇಡಿಕೆ ಇಡಲಾಗಿತ್ತು. ಈ ಬಗ್ಗೆ ಪೊಲೀಸರಿಗೂ ಮಾಹಿತಿ ನೀಡಲಾಗಿತ್ತು. ಭಾರತೀಯ ರಾಯಭಾರಿ ಕಚೇರಿಯ ಸಹಾಯದಿಂದ ವಿದ್ಯಾರ್ಥಿಯ ಹುಡುಕಾಟ ನಡೆಯುತ್ತಿತ್ತು.  ಆದರೆ ಈಗ ಇದ್ದಕ್ಕಿದ್ದಂತೆ ಅವರ ಮೃತ ದೇಹ ಪತ್ತೆಯಾಗಿದೆ.
ನಿರಂತರವಾಗಿಗುರಿಯಾಗುತ್ತಿರುವಭಾರತೀಯ ವಿದ್ಯಾರ್ಥಿಗಳು
ಇದು ಅಮೆರಿಕದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಸಾವಿನ ಮೊದಲ ಪ್ರಕರಣವಲ್ಲ. ಇಂತಹ ಪ್ರಕರಣಗಳು ನಿರಂತರವಾಗಿ ಬೆಳಕಿಗೆ ಬರುತ್ತಿವೆ. ಏಪ್ರಿಲ್ 6 ರಂದು ಉಮಾ ಸತ್ಯ ಸಾಯಿ ಗದ್ದೆ ಎಂಬ ಭಾರತೀಯ ವಿದ್ಯಾರ್ಥಿ ಸಾವನ್ನಪ್ಪಿದ ಪ್ರಕರಣವೂ ಬೆಳಕಿಗೆ ಬಂದಿತ್ತು. ಅವರು ಓಹಿಯೋದ ಕ್ಲೀವ್‌ಲ್ಯಾಂಡ್‌ನಲ್ಲಿ ಓದುತ್ತಿದ್ದರು. ಈ ವರ್ಷ ಇಲ್ಲಿಯವರೆಗೆ 11 ಭಾರತೀಯರು ಅಥವಾ ಭಾರತೀಯ ಮೂಲದ ವಿದ್ಯಾರ್ಥಿಗಳು ಅಮೆರಿಕದಲ್ಲಿ ಸಾವನ್ನಪ್ಪಿದ್ದಾರೆ.
ಕಳೆದ ತಿಂಗಳು (ಮಾರ್ಚ್) ಅಮೆರಿಕದಲ್ಲಿ 20 ವರ್ಷದ ಭಾರತೀಯ ವಿದ್ಯಾರ್ಥಿ ಅಭಿಜೀತ್ ಪರುಚೂರು ಕೊಲೆಯಾಗಿದ್ದರು. ಅವರು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಬುರ್ರಿಪಾಲೆಂ ನಿವಾಸಿಯಾಗಿದ್ದರು. ಈ ಹಿಂದೆ ಪರ್ಡ್ಯೂ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದ ಭಾರತೀಯ ಮೂಲದ ವಿದ್ಯಾರ್ಥಿ ನೀಲ್ ಆಚಾರ್ಯ ಕೂಡ ಕೊಲೆಯಾಗಿದ್ದರು. ಇದಲ್ಲದೆ ಶ್ರೇಯಸ್ ರೆಡ್ಡಿ ಮತ್ತು ವಿವೇಕ್ ಸೈನಿ ಕೂಡ ಶವವಾಗಿ ಪತ್ತೆಯಾಗಿದ್ದಾರೆ. ಇಂತಹ ಅನೇಕ ಹೆಸರುಗಳು ಈ ಪಟ್ಟಿಯಲ್ಲಿವೆ.
ಕ್ರೋಧಿನಾಮ ಸಂವತ್ಸರ ಯುಗಾದಿ ರಾಶಿ ಫಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
