ಬೆಂಗಳೂರು:ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ತನ್ನ ಮೂರನೇ ಚಂದ್ರಯಾನ ಯೋಜನೆ ಚಂದ್ರಯಾನ-3 ಸಕಲ ರೀತಿಯಲ್ಲೂ ಅಂತಿಮ ಸಿದ್ದತೆ ನಡೆಸಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಇಸ್ರೋದ ಸತೀಶ್‌ ಧವನ್‌ ಉಪಗ್ರಹ ಉಡಾವಣೆ ಕೇಂದ್ರದಲ್ಲಿ ತಯಾರಿ ನಡೆದಿದೆ.
ಇದನ್ನೂ ಓದಿ:ಜಮೀನು ವಿವಾದ; ತೆಂಗಿನ ತೋಟದಲ್ಲಿ ಮಹಿಳೆಯ ಬಟ್ಟೆ ಹರಿದು ಥಳಿತ
ಚಂದ್ರಯಾನ-3 ಉಡಾವಣೆಗೂ ಮುನ್ನ ಇಸ್ರೋ ವಿಜ್ಞಾನಿಗಳ ತಂಡವು ಆಂಧ್ರಪ್ರದೇಶದ ತಿರುಪತಿ ದೇವಸ್ಥಾನಕ್ಕೆ ಆಗಮಿಸಿ ಈ ಯೋಜನೆ ಯಶಸ್ವಿ ಆಗಲಿ ಎಂದು ಪ್ರಾರ್ಥಿಸಿತು.ಇಸ್ರೋದ ವೈಜ್ಞಾನಿಕ ಕಾರ್ಯದರ್ಶಿ ಶಾಂತನು ಭಟ್ವಾಡೇಕರ್ ಜತೆ ಇಸ್ರೋ ವಿಜ್ಞಾನಿಗಳು ಚಂದ್ರಯಾನ 3 ಮಾದರಿಯೊಂದಿಗೆ ಆಗಮಿಸಿ ಪ್ರಾರ್ಥನೆ ಮಾಡಿದರು.
ಇದನ್ನೂ ಓದಿ: ಮನುಷ್ಯರಷ್ಟೇ ಅಲ್ಲ, ಪಕ್ಷಿಗಳಿಂದಲೂ ತಮ್ಮ ಸಂಗಾತಿಗೆ ವಿಚ್ಛೇದನ: ಆಘಾತಕಾರಿ ಅಂಶ ಪತ್ತೆ
ಇಸ್ರೋದ ಈ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಭಾರತದ ಅತಿದೊಡ್ಡ ನಿರ್ಮಾಣ ಸಂಸ್ಥೆ ಎಲ್ ಅಂಡ್ ಟಿ ಕೂಡ ಕೈ ಜೋಡಿಸಿದೆ. ಇದೇ ಶುಕ್ರವಾರ ಅಂದರೆ ಜುಲೈ 14ರಂದು ಮಧ್ಯಾಹ್ನ 2:35ಕ್ಕೆ ಇಸ್ರೋ ಚಂದ್ರಯಾನ-3 ಅನ್ನು ಉಡಾವಣೆ ಮಾಡಲಿದ್ದು, ಈ ಉಡಾವಣೆಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಮತ್ತು ಸಿಬ್ಬಂದಿಗಳು ಮಾತ್ರವಲ್ಲದೇ ಮುಂಬೈನ ಪೊವಾಯಿ ಮತ್ತು ಕೊಯಮತ್ತೂರಿನಲ್ಲಿರುವ ಲಾರ್ಸೆನ್ ಮತ್ತು ಟೂಬ್ರೊ ಕಾರ್ಖಾನೆಗಳಲ್ಲಿ ಕೆಲಸಗಾರರೂ ಕೂಡ ತುದಿಗಾಲಲ್ಲಿ ನಿಂತು ಕಾಯುತ್ತಿದ್ದಾರೆ. ಅವರ ಈ ಕುತೂಹಲಕ್ಕೆ ಕಾರಣ ಅವರೂ ಕೂಡ ಇಸ್ರೋದ ಈ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ತೊಡಗಿಸಿಕೊಂಡಿರುವುದು.
VIDEO | The ISRO team offered prayers at Tirupati Venkatachalapathy Temple in Andhra Pradesh earlier today ahead of the launch of Chandrayaan-3.pic.twitter.com/uLxZelaxvK
— Press Trust of India (@PTI_News)July 13, 2023

ಇದನ್ನೂ ಓದಿ:ಮಾನ್ಸೂನ್ ಸಮಯದಲ್ಲಿ ಫಿಟ್ ಆಗಿರಲು 5 ಸಲಹೆಗಳು ಇಂತಿವೆ…
ಉಡಾವಣಾ ವಾಹನದ ನಿರ್ಣಾಯಕ ಬೂಸ್ಟರ್ ವಿಭಾಗಗಳು – ಹೆಡ್-ಎಂಡ್ ವಿಭಾಗ, ಮಧ್ಯದ ವಿಭಾಗ ಮತ್ತು ನಳಿಕೆ ಬಕೆಟ್ ಫ್ಲೇಂಜ್ ಗಳು ಪೊವೈನಲ್ಲಿರುವ L&T ಕಾರ್ಖಾನೆಗಳಲ್ಲಿ ತಯಾರಿಸಲ್ಪಟ್ಟವಾಗಿವೆ. ಅದೇ ರೀತಿ ತಮಿಳುನಾಡಿನ ಕೊಯಮತ್ತೂರಿನಲ್ಲಿರುವ L&T ಯ ಹೈಟೆಕ್ ಏರೋಸ್ಪೇಸ್ ಉತ್ಪಾದನಾ ಘಟಕವು ಚಂದ್ರಯಾನ-3ನ ನೆಲದ ಮತ್ತು ಹಾರಾಟದ ಹೊಕ್ಕುಳಿನ ಫಲಕಗಳಂತಹ ಘಟಕಗಳನ್ನು ಒದಗಿಸಿದೆ.
ಇದನ್ನೂ ಓದಿ:ಒಂದು ಸೀರೆ ತಯಾರಿಸಲು ಬೇಕಾಯ್ತು 2 ವರ್ಷ; ಇದರ ಬೆಲೆ ಬರೋಬ್ಬರಿ 21.9 ಲಕ್ಷ ರೂ.!
ಸಾಮಾನ್ಯವಾಗಿ ಕಾರ್ಖಾನೆಗಳು, ರಸ್ತೆಗಳು ಮತ್ತು ಇತರ ನಾಗರಿಕ ಮೂಲಸೌಕರ್ಯಗಳ ನಿರ್ಮಾಣದಲ್ಲಿ ತೊಡಗಿಸಿಕೊಂಡಿರುವ L&T, ಬಾಹ್ಯಾಕಾಶ ಉದ್ಯಮದಲ್ಲಿ ಹೆಚ್ಚಿನ ಅವಕಾಶಗಳನ್ನು ನಿರೀಕ್ಷಿಸುತ್ತಿದೆ. ಮೂರು ವರ್ಷಗಳ ಹಿಂದೆ ಭಾರತೀಯ ಬಾಹ್ಯಾಕಾಶ ಉದ್ಯಮವನ್ನು ಖಾಸಗಿ ವಲಯಕ್ಕೆ ಮುಕ್ತಗೊಳಿಸುವ ನಿರ್ಧಾರವನ್ನು ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ತೆಗೆದುಕೊಂಡಿತ್ತು.
ಜುಲೈ 13 ಅಲ್ಲ 14ಕ್ಕೆ ಚಂದ್ರಯಾನ-3 ಗಗನನೌಕೆ ಉಡಾವಣೆ: ಇಸ್ರೋ ಮಾಹಿತಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eighteen − six =
Remember me
