ತಿರುಪತಿ:ಇನ್‌ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿ ಮತ್ತು ಅವರ ಪತ್ನಿ, ಇನ್‌ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರು ತಿರುಪತಿ ತಿರುಮಲ ದೇವಸ್ಥಾನಕ್ಕೆ ಚಿನ್ನದ ಶಂಖ ಮತ್ತು ಕೂರ್ಮಪೀಠವನ್ನು ದಾನವಾಗಿ ನೀಡಿದ್ದಾರೆ.
ಇದನ್ನೂ ಓದಿ:VIDEO | ಕಾರು ಹಿಂಬದಿಗೆ ಸಿಲುಕಿ ಜಖಂಗೊಂಡರೂ ನಿಲ್ಲಿಸದೆ 2 ಕಿ.ಮೀ ದೂರ ಎಳೆದೊಯ್ದ ಲಾರಿ ಚಾಲಕ!; ವಿಡಿಯೋ ವೈರಲ್​
ಭಾನುವಾರ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ಆಶೀರ್ವಾದ ಪಡೆದ ನಾರಾಯಣಮೂರ್ತಿ-ಸುಧಾ ದಂಪತಿ, ಸುಮಾರು 2 ಕೆಜಿ ತೂಕದ ಚಿನ್ನದ ಈ ವಸ್ತುಗಳನ್ನು ದೇಣಿಗೆಯಾಗಿ ಸಮರ್ಪಿಸಿದರು. ಇವುಗಳ ಬೆಲೆ ಸುಮಾರು 1.25 ಕೋಟಿ ರೂ. ಎಂದು ಹೇಳಲಾಗಿದೆ. ಇವುಗಳನ್ನು ದೇವರ ಅಭಿಷೇಕಕ್ಕೆ ಬಳಸಲಾಗುತ್ತದೆ.
ಟಿಟಿಡಿ ಕಾರ್ಯನಿರ್ವಹಣಾಧಿಕಾರಿ ಎ.ವಿ. ಧರ್ಮ ರೆಡ್ಡಿ ಅವರು ಇವುಗಳನ್ನು ದೇವಸ್ಥಾನದ ಪರವಾಗಿ ಸ್ವೀಕರಿಸಿದರು. ನಂತರ ನಾರಾಯಣಮೂರ್ತಿ ದಂಪತಿಗೆ ಶೇಷವಸ್ತ್ರ ತೊಡಿಸಿ ಸನ್ಮಾನಿಸಿ ಪ್ರಸಾದ ನೀಡಿದರು. ಸುಧಾ ಮೂರ್ತಿ ಅವರು ಎರಡು ಬಾರಿ ಟಿಟಿಡಿ ಟ್ರಸ್ಟ್ ಬೋರ್ಡ್‌ನ ಅಧ್ಯಕ್ಷೆಯಾಗಿದ್ದರು. ಜಗನ್‌ಮೋಹನ್ ರೆಡ್ಡಿ ಮುಖ್ಯಮಂತ್ರಿಯಾದ ಬಳಿಕ ಸುಧಾ ಮೂರ್ತಿ ಅವರು ರಾಜೀನಾಮೆ ಕೊಟ್ಟಿದ್ದರು.
ಈ ಸೂರಿ ಪಾಯಲ್ ಯಾರಪ್ಪಾ ಎಂದು ಕೇಳಿದ ಮಾಜಿ ಸಿಎಂ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 15 =
Remember me
