ಮುಂಬೈ:ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ಪುಣೆಯಲ್ಲಿ ಪೋರ್ಷೆ ಕಾರಿನ ಅಪಘಾತ ಮತ್ತು ವರ್ಲಿಯಲ್ಲಿ ಬಿಎಂಡಬ್ಲ್ಯು ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದು ಭಾನುವಾರ (ಜುಲೈ 7) ಮಹಿಳೆಯೊಬ್ಬರು ಮೃತಪಟ್ಟಿದ್ದರು. ಹೀಗೆ ರಾಜ್ಯದಲ್ಲಿ ಕಡಿಮೆ ಅಂತರದಲ್ಲಿ ಬೆಳಕಿಗೆ ಬರುತ್ತಿರುವ ಹಿಟ್ ಅಂಡ್ ರನ್ ಪ್ರಕರಣದ ಬಗ್ಗೆ ಸಿಎಂ ಏಕನಾಥ್​ ಶಿಂಧೆ ಪ್ರತಿಕ್ರಿಯಿಸಿದ್ದಾರೆ.
ಇದನ್ನು ಓದಿ:ಸಚಿವ ಸಂಪುಟ ವಿಸ್ತರಣೆ; 15 ನಿಮಿಷಗಳಲ್ಲಿ ಎರಡು ಬಾರಿ ಪ್ರಮಾಣವಚನ ಸ್ವೀಕರಿಸಿದ ಸಚಿವ.. ಕಾರಣವೇನು ಗೊತ್ತಾ?
ಹಿಟ್ ಅಂಡ್ ರನ್ ಘಟನೆಗಳ ಹೆಚ್ಚಳದಿಂದ ಆತಂಕಗೊಂಡಿದ್ದೇನೆ. ಶಕ್ತಿಶಾಲಿಗಳು ಮತ್ತು ಪ್ರಭಾವಿಗಳು ತಮ್ಮ ಸ್ಥಾನಮಾನವನ್ನು ದುರುಪಯೋಗಪಡಿಸಿಕೊಂಡು ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುವುದನ್ನು ಸಹಿಸಲಾಗದು. ಅನ್ಯಾಯದ ಇಂತಹ ತಪ್ಪುಗಳನ್ನು ನನ್ನ ಸರ್ಕಾರ ಸಹಿಸುವುದಿಲ್ಲ ಎಂದು ಹೇಳಿದ್ದಾರೆ.
ಸಾಮಾನ್ಯ ನಾಗರಿಕರ ಜೀವವು ನಮಗೆ ಅಮೂಲ್ಯವಾಗಿದೆ. ಈ ಪ್ರಕರಣಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲು ಮತ್ತು ನ್ಯಾಯವನ್ನು ಒದಗಿಸುವಂತೆ ರಾಜ್ಯ ಪೊಲೀಸ್ ಇಲಾಖೆಗೆ ಸೂಚಿಸಿದ್ದೇನೆ. ಜತೆಗೆ ಕಟ್ಟುನಿಟ್ಟಾದ ಕಾನೂನುಗಳನ್ನು, ಹಿಟ್ ಮತ್ತು ರನ್ ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ಜಾರಿಗೊಳಿಸುತ್ತಿದ್ದೇವೆ ಎಂದಿದ್ದಾರೆ.

ಶ್ರೀಮಂತರಾಗಲಿ, ಪ್ರಭಾವಿಯಾಗಲಿ, ಅಧಿಕಾರಶಾಹಿಗಳಾಗಲಿ, ಮಂತ್ರಿಗಳ ಮಕ್ಕಳಾಗಲಿ, ಯಾವುದೇ ಪಕ್ಷದೊಂದಿಗೆ ಸಂಬಂಧ ಹೊಂದಿರುವ ಯಾರೊಬ್ಬರಿಗೂ ನಾನು ರಾಜ್ಯದ ಮುಖ್ಯಮಂತ್ರಿಯಾಗಿರುವವರೆಗೆ ವಿನಾಯಿತಿ ಇರುವುದಿಲ್ಲ. ಅನ್ಯಾಯವನ್ನು ಸಹಿಸುವುದಿಲ್ಲ, ಇದು ಸ್ಪಷ್ಟವಾಗಿರಲಿ. ನನ್ನ ಆಡಳಿತವು ಸಂತ್ರಸ್ತರು ಮತ್ತು ಅವರ ಕುಟುಂಬಗಳೊಂದಿಗೆ ದೃಢವಾಗಿ ನಿಂತಿದೆ. ಎಲ್ಲಾ ನಾಗರಿಕರಿಗೆ ಸುರಕ್ಷಿತ ಮಹಾರಾಷ್ಟ್ರವನ್ನು ರಚಿಸಲು ಬದ್ಧರಾಗಿದ್ದೇವೆ ಎಂದಿದ್ದಾರೆ. (ಏಜೆನ್ಸೀಸ್​​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
