ಬೆಂಗಳೂರು:ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯನ್ನಾಗಿ ನನ್ನನ್ನು ಆಹ್ವಾನಿಸಿ, ವೇದಿಕೆಯಲ್ಲಿ ಸ್ಥಾನ ನೀಡದೆ ಅವಮಾನ ಮಾಡಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದು ನನಗೆ ಮಾಡಿದ ಅವಮಾನವಲ್ಲ, ಕನ್ನಡದ ಪ್ರಾತಿನಿಧಿಕ ಸಂಸ್ಥೆಗೆ ಮಾಡಿದ ಅಪಮಾನ. ಇದರಿಂದ ಬೇಸರಗೊಂಡು ಕಾರ್ಯಕ್ರಮದಲ್ಲಿ ಭಾಗವಹಿಸದೆ ಹೊರ ನಡೆದಿದ್ದಾಗಿ ಅವರು ತಿಳಿಸಿದ್ದಾರೆ.
ಇದನ್ನೂ ಓದಿ:ಪತಿ ಹೃದಯಾಘಾತಕ್ಕೆ ಬಲಿ; ಒಂದೇ ಉರುಳಿಗೆ ಮಗನೊಂದಿಗೆ ಕೊರಳೊಡ್ಡಿ ಪ್ರಾಣ ಬಿಟ್ಟ ಪತ್ನಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸುವ ಕಾರ್ಯಕ್ರಮ ಆಗಿದ್ದರಿಂದ, ಮೊದಲೇ ಪ್ರಧಾನ ಮಂತ್ರಿಯವರ ಕಾರ್ಯಾಲಯಕ್ಕೆ ಮಾಹಿತಿ ನೀಡಬೇಕಿತ್ತು. ಆದರೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ಘನತೆ-ಗೌರವ ತಿಳಿಸುವುದರಲ್ಲಿ ಹಾಗೂ ತಮ್ಮ ಉಪಸ್ಥಿತಿಯ ಅನಿವಾರ್ಯತೆ ವೇದಿಕೆಯಲ್ಲಿ ಇರಬೇಕಾದುದನ್ನು ಮನವರಿಕೆ ಮಾಡಿಕೊಡುವುದರಲ್ಲಿ ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ಎಂ. ನಾಗರಾಜ್ ಹಾಗೂ ಸಂಘಟಕರು ವಿಫಲರಾಗಿದ್ದಾರೆ. ಹೀಗಾಗಿ ನಾನು ಕಾರ್ಯಕ್ರಮದಲ್ಲಿ ಭಾಗವಹಿಸಲಿಲ್ಲ ಎಂದು ಮಹೇಶ ಜೋಶಿ ಅವರು ಹೇಳಿದ್ದಾರೆ.
ಒಂದೇ ಮನೆಯ ನಾಲ್ವರ ಹತ್ಯೆ; ನಾಲ್ಕು ಕೊಲೆಗಳ ಆರೋಪಿಯ ತಾಯಿ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 − three =
Remember me
