ಇಸ್ರೇಲ್:ಗಾಜಾ ಪಟ್ಟಿಯಲ್ಲಿರುವ ಹಮಾಸ್ ಭಯೋತ್ಪಾದಕರು ಶನಿವಾರ ಮುಂಜಾನೆ ಇಸ್ರೇಲ್ ಕಡೆಗೆ ಹತ್ತಾರು ರಾಕೆಟ್‌ಗಳನ್ನು ಹಾರಿಸಿ ಯುದ್ಧದ ಪರಿಸ್ಥಿತಿ ಸೃಷ್ಟಿಸಿದರು. ಭಯೋತ್ಪಾದಕರು ಇಸ್ರೇಲ್ ಮೇಲೆ ದಾಳಿ ನಡೆಸಿದ್ದು, ಇದನ್ನು ಇಸ್ರೇಲ್ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಹಮಾಸ್ ಭಯೋತ್ಪಾದಕರ ದಾಳಿಯಲ್ಲಿ ಒಬ್ಬರು ಸಾವನ್ನಪ್ಪಿದ್ದರೆ, ಮೂವರು ಗಾಯಗೊಂಡಿದ್ದಾರೆ. ಈ ದಾಳಿಯ ಹೊಣೆಯನ್ನು ಹಮಾಸ್ ಹೊತ್ತುಕೊಂಡಿದೆ. ಇದಕ್ಕೆ ಪ್ರತೀಕಾರವಾಗಿ ಇಸ್ರೇಲ್ ಸೇನೆಯು ಗಾಜಾ ಪಟ್ಟಿಯಲ್ಲಿ  ವೈಮಾನಿಕ ದಾಳಿ ನಡೆಸಿದೆ.
ಹಮಾಸ್ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಇಸ್ರೇಲ್‌ನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದರೊಂದಿಗೆ ಹಮಾಸ್ ನ ಭಯೋತ್ಪಾದಕ ಸಂಘಟನೆ ಇದಕ್ಕೆ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಇಸ್ರೇಲ್ ವಿದೇಶಾಂಗ ಸಚಿವಾಲಯ ಎಚ್ಚರಿಕೆ ನೀಡಿದೆ. ಒಂದು ಗಂಟೆಯ ಹಿಂದೆ ಹಮಾಸ್‌ನ ಉಗ್ರಗಾಮಿ ಸಂಘಟನೆ ದಾಳಿ ಮಾಡಿದೆ ಎಂದು ಟ್ವೀಟ್ ಮಾಡಲಾಗಿದೆ. ಅವರು ರಾಕೆಟ್‌ಗಳನ್ನು ಹಾರಿಸಿ, ಇಸ್ರೇಲ್ ಪ್ರದೇಶದೊಳಗೆ ನುಸುಳಿದರು. ಆಗ ಇಸ್ರೇಲಿ ರಕ್ಷಣಾ ಪಡೆ ನಾಗರಿಕರನ್ನು ರಕ್ಷಿಸಿ, ಹಮಾಸ್ ಭಯೋತ್ಪಾದಕರಿಗೆ ಪಾಠ ಕಲಿಸಿದೆ.
ಇಸ್ರೇಲಿ ಜನರು ಮನೆಯಲ್ಲಿಯೇ ಇರಲು ಆದೇಶವರದಿಯ ಪ್ರಕಾರ, ದಾಳಿಯ ನಂತರ ಇಸ್ರೇಲ್‌ನ ಅನೇಕ ಭಾಗಗಳಲ್ಲಿ ಸೈರನ್‌ಗಳು ಮೊಳಗಿದವು. ಟೆಲ್ ಅವೀವ್‌ನಲ್ಲಿರುವ ರಕ್ಷಣಾ ಪಡೆಗಳ ಪ್ರಧಾನ ಕಚೇರಿಯಲ್ಲಿ ಪ್ರಧಾನಿ ಮತ್ತು ರಕ್ಷಣಾ ಸಚಿವರು ಭದ್ರತೆಯನ್ನು ಮೌಲ್ಯಮಾಪನ ಮಾಡುತ್ತಿದ್ದಾರೆ ಎಂದು ಪ್ರಧಾನಿ ನೆತನ್ಯಾಹು ಅವರ ಕಚೇರಿ ತಿಳಿಸಿದೆ. ಇದರೊಂದಿಗೆ, ಇಸ್ರೇಲ್ ಪ್ರಸ್ತುತ ನಿವಾಸಿಗಳಿಗೆ ಮನೆಯೊಳಗೆ ಇರುವಂತೆ ಆದೇಶಿಸಿದೆ.
ಇದಕ್ಕೂ ಮೊದಲು, ಇಸ್ರೇಲ್ ಆಕ್ರಮಣದ ವಿರುದ್ಧ “ಆಪರೇಷನ್ ಅಲ್-ಅಕ್ಸಾ ಫ್ಲಡ್” ಅನ್ನು ಪ್ರಾರಂಭಿಸಿರುವುದಾಗಿ ಘೋಷಿಸಿದಂತೆಯೇ ಇಸ್ರೇಲ್ ಮೇಲೆ 5,000 ಕ್ಕೂ ಹೆಚ್ಚು ರಾಕೆಟ್‌ಗಳನ್ನು ಹಾರಿಸಲಾಯಿತು ಎಂದು ಹಮಾಸ್ ಹೇಳಿದೆ. ಇತ್ತೀಚೆಗಿನ ಪರಿಸ್ಥಿತಿ ನೋಡಿದರೆ ಇಸ್ರೇಲ್ ಸೇನೆ ಕೂಡ ಯುದ್ಧಕ್ಕೆ ಸಿದ್ಧ ಎಂದು ಹೇಳಿದೆ. ಸೇನೆಯು ತನ್ನ ಸೈನಿಕರಿಗೆ ‘ಯುದ್ಧಕ್ಕೆ ಸನ್ನದ್ಧತೆ’ ಎಚ್ಚರಿಕೆಯನ್ನು ನೀಡಿದೆ. ಇದರೊಂದಿಗೆ ಗಾಜಾದ ಶಿಕ್ಷಣ ಸಚಿವಾಲಯವು ಇಂದು ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದೆ.
Rockets firing hasn’t stopped since the morning!#Gazapic.twitter.com/cw7U9acgPp
— Muhammad Smiry 🇵🇸 (@MuhammadSmiry)October 7, 2023

ಏನಿದು ವಿವಾದ?ವಾಸ್ತವವಾಗಿ, ಈ ಪ್ರದೇಶದಲ್ಲಿ ಕನಿಷ್ಠ 100 ವರ್ಷಗಳಿಂದ ಈ ಸಂಘರ್ಷ ನಡೆಯುತ್ತಿದೆ. ವೆಸ್ಟ್ ಬ್ಯಾಂಕ್, ಗಾಜಾ ಸ್ಟ್ರಿಪ್​​​​​​ಮತ್ತು ಗೋಲನ್ ಹೈಟ್ಸ್‌ನಂತಹ ಪ್ರದೇಶಗಳಲ್ಲಿ ವಿವಾದವಿದೆ. ಪೂರ್ವ ಜೆರುಸಲೆಮ್ ಸೇರಿದಂತೆ ಈ ಪ್ರದೇಶಗಳನ್ನು ಪ್ಯಾಲೆಸ್ಟೈನ್ ಹಕ್ಕು ಸಾಧಿಸಿದೆ. ಅದೇ ಸಮಯದಲ್ಲಿ, ಇಸ್ರೇಲ್ ಜೆರುಸಲೆಮ್ ಮೇಲಿನ ತನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ಧವಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ, ಪ್ರತಿ ದಿನವೂ ಉದ್ವಿಗ್ನ ವಾತವರಣವಿದೆ.
ಪ್ರಪ್ರಥಮ ಬಾರಿಗೆ ಭಾರತಕ್ಕೆ 100 ಪದಕಗಳು, ಕುತೂಹಲ ಹೆಚ್ಚಿಸುತ್ತೆ ಏಷ್ಯನ್ ಗೇಮ್ಸ್‌ನ 72 ವರ್ಷಗಳ ಇತಿಹಾಸ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 14 =
Remember me
