ಚಂಡೀಗಢ:ಜಮ್ಮುವಿನಿಂದ ರಾಜಸ್ಥಾನದ ಜೋಧ್​​ಪುರಕ್ಕೆ ತೆರಳುತ್ತಿದ್ದ ಎಕ್ಸ್‌ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಪಂಜಾಬ್‌ನ ಫಿರೋಜ್‌ಪುರದ ಕಾಸು ಬೇಗು ನಿಲ್ದಾಣದಲ್ಲಿ ನಿಲ್ಲಿಸಲಾಯಿತು. ಪೊಲೀಸ್ ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿ ತನಿಖೆ ನಡೆಸುತ್ತಿದ್ದಾರೆ. ಬಾಂಬ್ ಬೆದರಿಕೆಯನ್ನು ಫಿರೋಜ್‌ಪುರದ ಎಸ್‌ಎಸ್‌ಪಿ ಸೌಮ್ಯ ಮಿಶ್ರಾ ಖಚಿತಪಡಿಸಿದ್ದಾರೆ.
ಇದನ್ನು ಓದಿ:ಚೀನಾದೊಂದಿಗಿನ ಸಮಸ್ಯೆ ಬಗೆಹರಿಸಲು ಮೂರನೇಯವರ ಹಸ್ತಕ್ಷೇಪ ಅಗತ್ಯವಿಲ್ಲ; ಸಚಿವ ಎಸ್.ಜೈಶಂಕರ್
ಜಮ್ಮುತಾವಿ -ಭಗತ್ ಕಿ ಕೋಠಿ ಎಕ್ಸ್‌ಪ್ರೆಸ್‌ಗೆ (ರೈಲು ಸಂಖ್ಯೆ 19926) ಫಿರೋಜ್‌ಪುರ ಬಳಿ ಬಾಂಬ್ ಬೆದರಿಕೆ ವರದಿಯಾಗಿದ್ದು, ಪೊಲೀಸರು ಮತ್ತು ರೈಲ್ವೆರಕ್ಷಣಾ ಪಡೆ (ಆರ್‌ಪಿಎಫ್) ಸೇರಿದಂತೆ ಭದ್ರತಾ ಪಡೆಗಳಿಂದ ತಕ್ಷಣದ ಕ್ರಮಕೈಗೊಳ್ಳಲಾಗಿದೆ.
#WATCH| Punjab: Express train going from Jammu to Jodhpur stopped at Kasu Begu station of Firozpur after Police received a phone call regarding a bomb threat onboard. Police teams have reached the spot and an investigation is underway.pic.twitter.com/P6BrPdI1WP
ಪಶ್ಚಿಮ ಬಂಗಾಳದಲ್ಲಿ ನೋಂದಾಯಿಸಲಾದ ಮೊಬೈಲ್ ಸಂಖ್ಯೆಯನ್ನು ಬಳಸಿಕೊಂಡು ರೈಲ್​​​ಮದದ್ ಅಪ್ಲಿಕೇಶನ್ ಮೂಲಕ ಬೆದರಿಕೆ ಹಾಕಲಾಗಿದೆ. ಈ ಅಪ್ಲಿಕೇಶನ್​ನಲ್ಲಿ ಪ್ರಯಾಣಿಕರಿಗೆ ದೂರುಗಳನ್ನು ಸಲ್ಲಿಸಲು ಮತ್ತು ಸಲ್ಲಿಸಿದ ದೂರಗಳ ನೈಜ ಸ್ಥಿತಿಯನ್ನು ಪರಿಶೀಲಿಸಲು ಅವಕಾಶವಿದೆ.
ಮುಂಜಾಗ್ರತಾ ಕ್ರಮವಾಗಿ ಫಿರೋಜ್‌ಪುರದಿಂದ 10 ಕಿಲೋಮೀಟರ್ ದೂರದಲ್ಲಿರುವ ಕಾಸು ಬೇಗು ನಿಲ್ದಾಣದಲ್ಲಿ ರೈಲನ್ನು ನಿಲ್ಲಿಸಲಾಗಿತ್ತು. ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು ಶೋಧ ಕಾರ್ಯ ನಡೆಯುತ್ತಿದೆ. ಬಾಂಬ್ ಸ್ಕ್ವಾಡ್ ಘಟಕಗಳು, ಅಗ್ನಿಶಾಮಕ ದಳ ಮತ್ತು ವೈದ್ಯಕೀಯ ತಂಡಗಳು ಘಟನಾ ಸ್ಥಳದಲ್ಲಿದ್ದು, ಪ್ರತಿಯೊಬ್ಬರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಫಿರೋಜ್‌ಪುರದ ಪೊಲೀಸ್ ವರಿಷ್ಠಾಧಿಕಾರಿ ರಣಧೀರ್ ಕುಮಾರ್ ತಿಳಿಸಿದ್ದಾರೆ.(ಏಜೆನ್ಸೀಸ್​​)
ಕರೊನಾಗೆ ಕೊರೊನಿಲ್ ಔಷಧಿ; ಹೇಳಿಕೆ ತೆಗೆಯುವಂತೆ ರಾಮದೇವ್​​​​ಗೆ ದೆಹಲಿ ಕೋರ್ಟ್​​ ಸೂಚನೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 6 =
Remember me
