ಬೆಂಗಳೂರು:ರಾಷ್ಟ್ರಪತಿ ಆಯ್ಕೆ ಸಂಬಂಧ ಬಿಜೆಪಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ಬೆಂಬಲ ನೀಡುವ ಇಂಗಿತವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ವ್ಯಕ್ತಪಡಿಸಿದರು.
ಪಕ್ಷದ ರಾಜ್ಯ ಕಚೇರಿ ಜೆ.ಪಿ.ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ದ್ರೌಪದಿ ಮುರ್ಮು ಅವರಿಗೆ ಬಹುಮತದ ಸಂಖ್ಯೆ ಈಗಾಗಲೇ ಸಿಕ್ಕಿದೆ. ನಮ್ಮ ಪಕ್ಷದ ಬೆಂಬಲ ಅವಶ್ಯಕತೆ ಇಲ್ಲ. ಆದರೂ ನಮ್ಮ ಬೆಂಬಲ ಕೇಳಿದ್ದಾರೆ. ಅದು ಅವರ ಔದಾರ್ಯ ಎಂದು ಬೆಂಬಲ ನೀಡುವ ಬಗ್ಗೆ ಪರೋಕ್ಷವಾಗಿ ಹೇಳಿದರು.
ನನ್ನ ಪ್ರಕಾರ ಮುರ್ಮು ಈಗಾಗಲೇ ಗೆದ್ದಾಗಿದೆ.‌ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ಮುರ್ಮು ಅವರು ಎರಡು ಬಾರಿ ದೂರವಾಣಿ ಕರೆ ಮಾಡಿ ಬೆಂಬಲಕ್ಕೆ ಮನವಿ ಮಾಡಿದ್ದಾರೆ. ಬೆಂಗಳೂರಿಗೆ ಬಂದು ಮನವಿ ಮಾಡಲು‌ ಅವರು ಸಮಯ ಕೋರಿದ್ದರು. ಅವರು ಖುದ್ದು ಬಂದು ಮನವಿ ಮಾಡುವ ಅವಶ್ಯಕತೆ ಇಲ್ಲ ಎಂದು ಕುಮಾರಸ್ವಾಮಿ ಹೇಳಿದರು.
ಚುನಾವಣಾ ಅಭ್ಯರ್ಥಿಯಾಗಿ ಮುರ್ಮು ಕಣದಲ್ಲಿದ್ದಾರೆ. ಅವರ ಹಿನ್ನೆಲೆ ಏನು, ಜೀವನದಲ್ಲಿ ಎಷ್ಟು ಕಷ್ಟ ಅನುಭವಿಸಿದ್ದಾರೆ, ತಳಮಟ್ಟದ ಸಮುದಾಯದಿಂದ ಹೇಗೆ ಬೆಳೆದು ಬಂದಿದ್ದಾರೆ ಎಂಬುದನ್ನು ನಾನು ಅರಿತಿದ್ದೇನೆ. ಆದಿವಾಸಿ ಸಮುದಾಯದ ಮಹಿಳೆಯೊಬ್ಬರು ಇಷ್ಟು ದೊಡ್ಡ ಸಾಧನೆ ಮಾಡಿರುವುದು ಸ್ಫೂರ್ತಿದಾಯಕ ಎಂದು ಅವರು ಹೇಳಿದರು.
ಇಲ್ಲಿ ಕಾಂಗ್ರೆಸ್-ಬಿಜೆಪಿ ಅನ್ನುವ ಪ್ರಶ್ನೆ ಅಲ್ಲ. ಬಿ ಟೀಂ ಎನ್ನುವ ಪ್ರಶ್ನೆಯೂ ರಾಷ್ಟ್ರಪತಿ ಚುನಾವಣೆಯಲ್ಲಿ ಬರಲ್ಲ. ನಾವು ತೆಗೆದುಕೊಂಡ ನಿರ್ಧಾರ ಬಿಜೆಪಿ ಬಿ- ಟೀಂ ಅಂತ ಪ್ರಚಾರ ಮಾಡೋದು, ಇದಕ್ಕೆ ಅನ್ವಯ ಆಗಲ್ಲ ಎಂದು ಅವರು ಪರೋಕ್ಷವಾಗಿ ಸಿದ್ದರಾಮಯ್ಯ ಮೇಲೆ ಚಾಟಿ ಬೀಸಿದರು.
‘ನಮಸ್ಕಾರ ದೇವರು’ ಅಂತ ಹೇಳೋದ್ಯಾಕೆ ಡಾಕ್ಟರ್​ ಬ್ರೋ?; ಹಣ ಬೇಕಾದಾಗ ಯಾವ ಹೋಟೆಲ್​ಗೆ ಹೋಗ್ತಾರೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − seven =
Remember me
