ನವದೆಹಲಿ:ಬಿಜೆಪಿ ಜೊತೆ ಸೇರಿ ಬಿಹಾರದ ಮುಖ್ಯಮಂತ್ರಿಯಾಗಿ ಜೆಡಿಯು ನಾಯಕ ನಿತೀಶ್ ಕುಮಾರ್ ಅವರು 9ನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದರು. ಈ ಕುರಿತು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ:ಕುಸಿದ ತಾಪಮಾನ!: ‘ಊಟಿ’ ಚಳಿಗೆ ಗಢಗಢ ನಡುಗುತ್ತಿರುವ ಜನ
#WATCH| Begusarai: On On JDU Chief Nitish Kumar resigning as the CM of Bihar and JD(U)-BJP alliance, Prashant Kishor, Poll Strategist says, "I have been saying this since starting that Nitish Kumar can swap anytime. This has become a part of his politics… He is a 'paltumaar'.…pic.twitter.com/V7LR9rcJ71
— ANI (@ANI)January 28, 2024

ಬಿಹಾರದ ಬಿಜೆಪಿ ಮತ್ತು ಇತರ ಜೆಡಿಯು ನಾಯಕರು ಕೂಡ ‘ಪಲ್ಟುಮಾರ್’ ಆಗಿದ್ದಾರೆ. ಮುಖ್ಯಮಂತ್ರಿ ನಿತೀಶ್​ ಕುಮಾರ್​ ವಿರುದ್ಧ ಹಲವು ಆರೋಪ ಮಾಡುತ್ತಿದ್ದ ಬಿಜೆಪಿ ನಾಯಕರೇ ಇಂದು ಸ್ವಾಗತ ಮಾಡುತ್ತಿರುವುದು ನೋವಿನ ಸಂಗತಿ ಎಂದಿದ್ದಾರೆ.
ಈ ಕುರಿತು ಸುದ್ದಿಗಾರೊಂದಿಗೆ ಮಾತನಾಡಿರು ಅವರು, ಬಿಹಾರದಲ್ಲಿ ಜೆಡಿಯು-ಬಿಜೆಪಿ ಜೊತೆ ಮಾಡಿಕೊಂಡಿರುವ ಮೈತ್ರಿ ಹೆಚ್ಚು ದಿನ ಉಳಿಯುವ ಸಾಧ್ಯತೆ ಇಲ್ಲ. ಈ ಸರ್ಕಾರದ ಆಯುಷ್ಯ ಕೆಲವೇ ತಿಂಗಳುಗಳು. ರಾಜ್ಯದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆವರೆಗೂ ನಿಲ್ಲುವ ಸಾಧ್ಯತೆ ಕಡಿಮೆ. ಸಾರ್ವತ್ರಿಕ ಚುನಾವಣೆ ಮುಗಿದ ಆರು ತಿಂಗಳೊಳಗೆ ಈ ಬದಲಾವಣೆ ಕಾಣಲಿದೆ. ಈ ವಿಷಯವನ್ನು ಲಿಖಿತವಾಗಿ ಸಾಬೀತು ಮಾಡುತ್ತೇನೆ ಎಂದು ಭವಿಷ್ಯ ನುಡಿದರು.
2022ರಲ್ಲಿ ಎನ್‌ಡಿಎ ಮೈತ್ರಿಕೂಟದಿಂದ ಹೊರಬಂದ ನಿತೀಶ್ ಕುಮಾರ್ ಆರ್‌ಜೆಡಿ ಜತೆಗೂಡಿ ಸರ್ಕಾರ ರಚಿಸಿದ್ದರು. ಇದೇ ರೀತಿ ಮುಂದುವರಿದರೆ ಲೋಕಸಭೆ ಚುನಾವಣೆಯಲ್ಲಿ 5 ಸ್ಥಾನ ಗೆಲ್ಲುವುದು ಕಷ್ಟ ಎಂದು ಪ್ರಶಾಂತ್ ಕಿಶೋರ್ ನೆನಪಿಸಿದರು. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸತೀಶ್​ ಯಾವುದೇ ಪಕ್ಷದೊಂದಿಗೆ ಸ್ಪರ್ಧಿಸಿದರೂ 20ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ ಎಂದರು. ಅದಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯದಿಂದ ಹಿಂದೆ ಸರಿಯುವುದಾಗಿ ಚಾಲೆಂಜ್​ ಹಾಕಿದರು.
ಭಾನುವಾರ (ಇಂದು) ಸಂಜೆ 5 ಗಂಟೆಗೆ ಜೆಡಿಯು-ಬಿಜೆಪಿ ನೇತೃತ್ವದ ಸರ್ಕಾರ ರಚನೆಯಾಗಿದೆ. ಮುಖ್ಯಮಂತ್ರಿಯಾಗಿ ನಿತೀಶ್ ಜೊತೆಗೆ ಆರು ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ಇವರಲ್ಲಿ ಮೂವರು ಬಿಜೆಪಿ ಹಾಗೂ ಉಳಿದವರು ಜೆಡಿಯು ಪಕ್ಷದವರು. 2015ರ ಬಿಹಾರ ಚುನಾವಣೆಯಲ್ಲಿ ನಿತೀಶ್ ಕುಮಾರ್ ಗೆಲುವಿಗೆ ಪಾತ್ರ ವಹಿಸಿದ್ದ ಪ್ರಶಾಂತ್​ ಕಿಶೋರ್​ ಇದೀಗ ಅವರನ್ನೇ ‘ಪಲ್ಟುಮಾರ್’​ ಎಂದು ಟೀಕೆ ಮಾಡಿದ್ದಾರೆ.
ಕಾಲೇಜು ಹಾಸ್ಟೆಲ್​ನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ ಮೃತ್ಯು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
