ನವದೆಹಲಿ:ಕೆನರಾ ಬ್ಯಾಂಕ್​ಗೆ ಸಂಬಂಧಿಸಿದ್ದು ಎನ್ನಲಾದ 538 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೆಟ್​ ಏರ್​ವೇಸ್ ಸಂಸ್ಥಾಪಕ ನರೇಶ್​ ಗೋಯಲ್​​ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧನ ಮಾಡಿದೆ.
ಮುಂಬೈನ ಇಡಿ ಕಚೇರಿಯಲ್ಲಿ ಸುದೀರ್ಘ ವಿಚಾರಣೆ ನಡೆಸಿದ ಬಳಿಕ ಅಕ್ರಮ ಹಣ ವರ್ಗಾವಣೆ ತಡೆಗಟ್ಟುವಿಕೆ ಕಾಯ್ದೆ (ಪಿಎಂಎಲ್​ಎ) ಅಡಿಯಲ್ಲಿ ಗೋಯಲ್​ ಅವರನ್ನು ಇಡಿ ಬಂಧಿಸಿದೆ. 74 ವರ್ಷದ ಗೋಯಲ್​ ಅವರನ್ನು ಶನಿವಾರ ಮುಂಬೈನ ಪಿಎಂಎಲ್​ಎ ವಿಶೇಷ ಕೋರ್ಟ್​ ಮುಂದೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಇಡಿ ತಮ್ಮ ವಶಕ್ಕೆ ಪಡೆದುಕೊಳ್ಳಲಿದೆ.
ಕೆನರಾ ಬ್ಯಾಂಕ್‌ನಲ್ಲಿ 538 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್ ಏರ್‌ವೇಸ್ ಸಂಸ್ಥಾಪಕ ಗೋಯಲ್ ಮತ್ತು ಅವರ ಪತ್ನಿ ಅನಿತಾ ಮತ್ತು ಕಂಪನಿಯ ಕೆಲವು ಮಾಜಿ ಅಧಿಕಾರಿಗಳ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಎಫ್​ಐಆರ್​ ದಾಖಲಿಸಿದ್ದು, ಇದರ ಆಧಾರದ ಮೇಲೆ ಇದೀಗ ಇಡಿ ವಿಚಾರಣೆ ನಡೆಸುತ್ತಿದೆ.
ಇದನ್ನೂ ಓದಿ:ಗೃಹಿಣಿಗೆ ಮೆಸೇಜ್​ ಮಾಡಿದ್ದಕ್ಕೆ ಯುವಕನ ಹತ್ಯೆ ಕೇಸ್​ಗೆ ಬಿಗ್​ ಟ್ವಿಸ್ಟ್​: ಮತ್ತೊಬ್ಬನ ಮೇಲಿನ ಸೇಡಿಗೆ ಸ್ನೇಹಿತನನ್ನೇ ಕೊಂದ!
ಜೆಟ್ ಏರ್‌ವೇಸ್ (ಇಂಡಿಯಾ) ಲಿಮಿಟೆಡ್‌ಗೆ (ಜೆಐಎಲ್) 848.86 ಕೋಟಿ ಮೊತ್ತದ ಸಾಲವನ್ನು ಮಂಜೂರು ಮಾಡಲಾಗಿದ್ದು, ಅದರಲ್ಲಿ 538.62 ಕೋಟಿ ರೂ. ಬಾಕಿ ಇದೆ ಎಂದು ಆರೋಪಿಸಿ ಕೆನರಾ ಬ್ಯಾಂಕ್‌ನ ಆಡಳಿತ ಮಂಡಳಿ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.
ಜಿಐಎಲ್​ನ ವಿಧಿವಿಜ್ಞಾನ ಲೆಕ್ಕಪರಿಶೋಧನೆಯ ಪ್ರಕಾರ ಸಂಬಂಧಿತ ಕಂಪನಿಗಳಿಗೆ ಒಟ್ಟು ಕಮಿಷನ್ ವೆಚ್ಚದಲ್ಲಿ 1,410 ಕೋಟಿ ರೂ. ಅನ್ನು ಪಾವತಿಸಿರುವುದು ಕಂಡುಬಂದಿದ್ದು, ಹಣವನ್ನು ಅಕ್ರಮವಾಗಿ ಬೇರೆಡೆಗೆ ವರ್ಗಾಹಿಸಿರುವುದು ಪತ್ತೆಯಾಗಿದೆ ಎಂದು ಕೆನರಾ ಬ್ಯಾಂಕ್​ ತನ್ನ ವರದಿಯಲ್ಲಿ ತಿಳಿಸಿತ್ತು. ಜಿಐಎಲ್​ ಕಂಪನಿ ತನ್ನ ಅಧೀನ ಕಂಪನಿಗಳಿಗೆ ಸಾಲದ ಹಣವನ್ನು ಸಾಲ ಮತ್ತು ಮುಂಗಡಗಳು ಮತ್ತು ವಿಸ್ತರಿಸಿದ ಹೂಡಿಕೆಗಳ ರೂಪದಲ್ಲಿ ಬೇರೆಡೆಗೆ ತಿರುಗಿಸಿದೆ ಎಂದು ತಿಳಿಬಂದಿದೆ.(ಏಜೆನ್ಸೀಸ್​)
ಗೃಹಿಣಿಗೆ ಮೆಸೇಜ್​ ಮಾಡಿದ್ದಕ್ಕೆ ಯುವಕನ ಹತ್ಯೆ ಕೇಸ್​ಗೆ ಬಿಗ್​ ಟ್ವಿಸ್ಟ್​: ಮತ್ತೊಬ್ಬನ ಮೇಲಿನ ಸೇಡಿಗೆ ಸ್ನೇಹಿತನನ್ನೇ ಕೊಂದ!

ಏಷ್ಯಾಕಪ್​ನಲ್ಲಿ ಇಂದು ಭಾರತ-ಪಾಕ್​ ಸಮರ; ಕಾಡುತ್ತಿದೆ ಮಳೆ ಭೀತಿ

ನೆಹರು ಸ್ಮಾರಕ ಇನ್ಮುಂದೆ ಪಿಎಂ ಮ್ಯೂಸಿಯಂ..

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:three × four =
Remember me
