ನವದೆಹಲಿ:ರಾಂಚಿಯ ಇಟ್ಕಿ ಬ್ಲಾಕ್ ಪ್ರದೇಶದಲ್ಲಿ ಕಳೆದ 12 ದಿನಗಳಲ್ಲಿ ಆನೆಯೊಂದು 16 ಜನರ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದ್ದು, ಸ್ಥಳೀಯ ನಿವಾಸಿಗಳು ಭಯಭೀತರಾಗಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ 144ನೇ ಸೆಕ್ಷನ್ ಜಾರಿಗೊಳಿಸಿದೆ.
ಗ್ರಾಮಸ್ಥರು ಮನೆಯೊಳಗೆ ಇರಲು ಸೂಚಿಸಲಾಗಿದೆ ಎಂದು ರಾಂಚಿ ವಲಯ ಅರಣ್ಯಾಧಿಕಾರಿ ಶ್ರೀಕಾಂತ್ ವರ್ವ ತಿಳಿಸಿದ್ದಾರೆ. ಆನೆ ಕಂಡುಬಂದಲ್ಲಿ ಅದರ ಹತ್ತಿರ ಹೋಗದಂತೆ ಸೂಚನೆ ನೀಡಲಾಗಿದೆ. ಗ್ರಾಮಸ್ಥರು ಆನೆಯ ಬಳಿ ಜಮಾಯಿಸುತ್ತಿದ್ದು, ಇದರಿಂದ ಆನೆ ಹೆದರಿ ದಾಳಿ ನಡೆಸುತ್ತದೆ.
ಇದನ್ನೂ ಓದಿ:ಟ್ರಾಫಿಕ್ ಪೊಲೀಸರು ಸಾರ್ವಜನಿಕರ ಕಿರುಕುಳ ನೀಡಿದರೆ ಕ್ರಮ: ಮೈಸೂರು ನಗರ ಪೊಲೀಸ್ ಆಯುಕ್ತ ಬಿ. ರಮೇಶ್ ಎಚ್ಚರಿಕೆ
ಲೋಹರ್ದಗಾ ಜಿಲ್ಲೆಯಲ್ಲಿ ಸೋಮವಾರ ಇಬ್ಬರು ಮಹಿಳೆಯರು ಸೇರಿ ನಾಲ್ವರನ್ನು ಮತ್ತು ಭಾನುವಾರ ಒಬ್ಬರನ್ನು ಈ ಆನೆ ತುಳಿದು ಕೊಂದಿತ್ತು. ಸೋಮವಾರ ರಾತ್ರಿ ಇಟ್ಕಿ ಬ್ಲಾಕ್ ಪ್ರವೇಶಿಸಿ ಮಂಗಳವಾರ ಬೆಳಗ್ಗೆ ಇಬ್ಬರು ಮಹಿಳೆಯರು ಸೇರಿ ನಾಲ್ಕು ಜನರನ್ನು ಆನೆ ಕೊಂದಿದೆ ಎಂದು ವರ್ವ ಹೇಳಿದ್ದಾರೆ.
ಅರಣ್ಯ ಇಲಾಖೆ ಪಶ್ಚಿಮ ಬಂಗಾಳದ ತಜ್ಞರ ತಂಡವನ್ನು ನಿಯೋಜಿಸಿದೆ. ನಾಲ್ಕು ವಿಭಾಗಗಳ ಅರಣ್ಯಾಧಿಕಾರಿಗಳನ್ನು ಒಳಗೊಂಡ ಸಮಿತಿಯೂ ಕಾರ್ಯತಂತ್ರ ರೂಪಿಸಿದೆ.(ಏಜೆನ್ಸೀಸ್​)
30 ವರ್ಷ ದಾಟಿದ್ರೂ ಮದ್ವೆಯಾಗದ ಹಿನ್ನೆಲೆ ದೇವರ ಮೊರೆ: ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ ಹೊರಟ ಬ್ರಹ್ಮಚಾರಿಗಳು!

ಪೋರ್ನ್​ ವಿಡಿಯೋಗಳನ್ನು ನೋಡುವಾಗ ಪತ್ನಿ ಕೈಗೆ ಸಿಕ್ಕಿಬಿದ್ದ ಗಂಡ: ನಂತರ ನಡೆದಿದ್ದು ಘೋರ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
