ಡಿಯೋರಿಯಾ ( ಉತ್ತರಪ್ರದೇಶ):ಕಾಂಗ್ರೆಸ್​ ಮತ್ತು ಸಮಾಜವಾದಿ ಪಕ್ಷಗಳಿಗೆ ಗಡಿಯಾಚೆಗಿನ “ಜಿಹಾದಿಗಳು” ಬೆಂಬಲಿಸುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಅವರು ಭಾನುವಾರ ಗಂಭೀರ ಆರೋಪ ಮಾಡಿದರು.
ಇದನ್ನೂ ಓದಿ:ಕಪಿಲ್ ಶರ್ಮಾ ಶೋನಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ: ಬಂಧನ
ಬನ್ಸ್‌ಗಾಂವ್ ಮತ್ತು ಡಿಯೋರಿಯಾ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಪಾಕಿಸ್ತಾನ ಮತ್ತು ಗಡಿಯಾಚೆಗಿನ ಜಿಹಾದಿಗಳು ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್​ಗೆ ಬೆಂಬಲ ನೀಡುತ್ತಿದ್ದಾರೆ. ಇಂಡಿಯಾ ಒಕ್ಕೂಟದ ಗೆಲುವಿಗಾಗಿ ಪ್ರಾರ್ಥನೆ ನಡೆಸುವ ಮೂಲಕ ವೋಟ್ ಜಿಹಾದ್​ ನಡೆಸಲಾಗುತ್ತಿದೆ ಎಂದು ಟೀಕಿಸಿದರು.
ಇದೇ ವೇಳೆ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಧರ್ಮದ ಆಧಾರದ ಮೇಲೆ ಮೀಸಲಾತಿಯನ್ನು ವಿರೋಧಿಸಿದ್ದಕ್ಕಾಗಿ “ಇಂಡಿಯಾ ಮೈತ್ರಿಕೂಟದ ಜಮಾತ್​” ನನ್ನನ್ನು ನಿಂದಿಸುತ್ತಿದೆ ಎಂದು ಆರೋಪಿಸಿದರು.
“ನಾವು ಅಧಿಕಾರಕ್ಕೆ ಬಂದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ಮರುಸ್ಥಾಪಿಸುತ್ತೇವೆ ಮತ್ತು ನಿರಾಶ್ರಿತರಿಗೆ ಭಾರತೀಯ ಪೌರತ್ವವನ್ನು ನೀಡುವ ಕಾನೂನಾದ CAA ಅನ್ನು ನಾವು ರದ್ದುಗೊಳಿಸುತ್ತೇವೆ ಎಂದು ಇಂಡಿಯಾ ಮೈತ್ರಿಕೂಟ ಜಮಾತ್ ಹೇಳುತ್ತಿದೆ ಎಂದು ಮೋದಿ ವಾಗ್ದಾಳಿ ನಡೆಸಿದರು.
ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರನ್ನು ಹಾಡಿ ಹೊಗಳಿದ ಮೋದಿ, ಯೋಗಿ ಅವರು ಮಾಫಿಯಾಗಳಿಗೆ ಪಾಠ ಕಳಿಸುವಲ್ಲಿ ನುರಿತರು ಎಂದರು.
“ಉತ್ತರಪ್ರದೇಶದಲ್ಲಿ ಬ್ರಹ್ಮೋಸ್ ಕ್ಷಿಪಣಿಗಳನ್ನು ತಯಾರಿಸುವ ದಿನ ದೂರವಿಲ್ಲ, ಮತ್ತು ಬ್ರಹ್ಮೋಸ್ ಕ್ಷಿಪಣಿಗಳು ಅವರ ಭಯವು ವ್ಯಾಪಕವಾಗಿದೆ” ಎಂದು ಪ್ರಧಾನಿ ಹೇಳಿದರು. ಪ್ರಪಂಚದಾದ್ಯಂತ ಹಲವು ದೇಶಗಳಲ್ಲಿ ಬ್ರಹ್ಮೋಸ್ ಕ್ಷಿಪಣಿಗಳಿಗೆ ಬೇಡಿಕೆಯಿದೆ, ಆದರೆ ಕಾಂಗ್ರೆಸ್ ಬ್ರಹ್ಮೋಸ್ ಕ್ಷಿಪಣಿ ಖರೀದಿ ಮಾಡಲು ಅಡ್ಡಗಾಲು ಹಾಕುವ ಮೂಲಕ ರಕ್ಷಣಾ ವಲಯದ ಪ್ರಗತಿಗೆ ಮಾರಕವಾಗಿತ್ತು ಎಂದು ಮೋದಿ ಆರೋಪಿಸಿದರು.  2024ರ ಜೂನ್​ 04ರ ಭಾರತದ ಭವಿಷ್ಯವನ್ನು ನಿರ್ಧರಿಸುವ ದಿನವಾಗಲಿದೆ. 140ಕೋಟಿ ಭಾರತೀಯರ ಕನಸಾಗಿರುವ ಅಮೃತ ಕಾಲದತ್ತ ಹೋಗುವ ಸಮಯ ಎಂದು ಹೇಳಿದರು.
ಯುಸಿಸಿ, ಒಂದು ದೇಶ ಒಂದು ಚುನಾವಣೆ ಮುಂದಿನ ಅವಧಿಯಲ್ಲಿ ಜಾರಿ: ಅಮಿತ್ ಷಾ ಭರವಸೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
