ನವದೆಹಲಿ:ಜುಲೈ 25ರಿಂದ ನಡೆಯಬೇಕಿದ್ದ ಕನ್ವರ್ ಯಾತ್ರೆಯನ್ನು ರದ್ದುಗೊಳಿಸಿ ನವದೆಹಲಿ ಸರ್ಕಾರ ಆದೇಶ ಹೊರಡಿಸಿದೆ. ಕರೊನಾ ಸೋಂಕಿನ ಹಿನ್ನೆಲೆಯಲ್ಲಿ ಯಾತ್ರೆಯನ್ನು ರದ್ದು ಮಾಡಿರುವುದಾಗಿ ತಿಳಿಸಲಾಗಿದೆ.
ಯಾತ್ರೆಗೆ ಸಂಬಂಧಿಸಿದ ಯಾವುದೇ ಆಚರಣೆಗಳು, ಮೆರವಣಿಗೆಗಳು ಅಥವಾ ಕೂಟಗಳನ್ನು ರಾಷ್ಟ್ರ ರಾಜಧಾನಿಯಲ್ಲಿ ಅನುಮತಿಸಲಾಗುವುದಿಲ್ಲ ಎಂದು ಅಧಿಕೃತ ಆದೇಶ ಭಾನುವಾರ ತಿಳಿಸಿದೆ. ಯಾತ್ರೆಯಿಂದಾಗಿ ಜನಸಂದಣಿ ಉಂಟಾಗುವ ಸಾಧ್ಯತೆ ಇದ್ದು, ಅದರಿಂದಾಗಿ ಕರೊನಾ ಹೆಚ್ಚಾಗುವ ಅಪಾಯವಿದೆ. ಆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆದೇಶ ತಿಳಿಸಿದೆ.
ಸಾಂಕ್ರಾಮಿಕ ರೋಗದ ಮೂರನೇ ಅಲೆಯ ಬಗ್ಗೆ ತಜ್ಞರು ವ್ಯಕ್ತಪಡಿಸಿದ ಆತಂಕ ಮತ್ತು ಕೂಟಗಳಿಂದ ಅಪಾಯ ಹೆಚ್ಚಾಗುವ ಸಾಧ್ಯತೆ ಇರುವುದರಿಂದಾಗಿ ಉತ್ತರಾಖಂಡ ರಾಜ್ಯ ಸರ್ಕಾರವು ಕನ್ವರ್ ಯಾತ್ರೆಯನ್ನು ರದ್ದು ಮಾಡಿತ್ತು. ಅದರ ಬೆನ್ನಲ್ಲೇ ಶನಿವಾರದಂದು ಉತ್ತರ ಪ್ರದೇಶ ಕೂಡ ಯಾತ್ರೆ ರದ್ದು ಮಾಡಿ ಆದೇಶ ಹೊರಡಿಸಿತ್ತು.
ಶ್ರಾವಣ ತಿಂಗಳ ಆರಂಭದಲ್ಲಿ ಅಂದರೆ ಸಾಮಾನ್ಯವಾಗಿ ಜುಲೈ ತಿಂಗಳ ಅಂತ್ಯದಲ್ಲಿ ಕನ್ವರ್ ಯಾತ್ರೆ ಆರಂಭವಾಗುತ್ತದೆ. ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ದೆಹಲಿ ಮತ್ತು ಹಿಮಾಚಲ ಪ್ರದೇಶದ ಕೋಟ್ಯಂತರ ಶಿವ ಭಕ್ತರು ನಡೆದುಕೊಂಡು ಹರಿದ್ವಾರಕ್ಕೆ ಬಂದು ಸೇರುತ್ತಾರೆ. ಅಲ್ಲಿನ ಗಂಗಾ ನದಿಯ ನೀರನ್ನು ತೆಗೆದುಕೊಂಡು ತಮ್ಮ ಶಿವ ದೇವಾಲಯಕ್ಕೆ ಅರ್ಪಿಸುತ್ತಾರೆ. (ಏಜೆನ್ಸೀಸ್)
ಬಕ್ರೀದ್​ಗಾಗಿ ನೀಡಲಾಗಿರುವ ಸಡಿಲಿಕೆ ಹಿಂಪಡೆಯದಿದ್ದರೆ ಕೋರ್ಟ್​ಗೆ ಹೋಗುತ್ತೇವೆ; ಕೇರಳ ಸರ್ಕಾರಕ್ಕೆ ಐಎಂಎ ಎಚ್ಚರಿಕೆ

ಓವೈಸಿ ಅಧ್ಯಕ್ಷತೆಯ ಎಐಎಂಐಎಂ ಪಕ್ಷದ ಟ್ವಿಟ್ಟರ್ ಅಕೌಂಟ್ ಹ್ಯಾಕ್! ಎಲಾನ್ ಮಸ್ಕ್ ಖಾತೆಯಾಗಿ ಬದಲು!

ನನ್ನ ಜತೆ ಸೆಲ್ಫಿ ಬೇಕೆಂದರೆ ನೂರು ರೂಪಾಯಿ ಡೆಪಾಸಿಟ್ ಮಾಡ್ಬೇಕು! ಮಧ್ಯ ಪ್ರದೇಶ ಸಚಿವರ ಹೊಸ ರೂಲ್ಸ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 18 =
Remember me
