ನವದೆಹಲಿ:ಚುನಾವಣಾ ಬಾಂಡ್​ ವಿಚಾರದಲ್ಲಿ ಫೆಬ್ರವರಿ 15ರಂದು ಸುಪ್ರೀಕೋರ್ಟ್​ ಮಹತ್ವದ ತೀರ್ಪು ಪ್ರಕಟಿಸಿರುವುದು ಬಹುತೇಕರಿಗೆ ತಿಳಿದಿದೆ. ರಾಜಕೀಯ ಪಕ್ಷಗಳು ಪಡೆಯುವ ಚುನಾವಣಾ ಬಾಂಡ್​ ಅನ್ನು ಅಸಂವಿಧಾನಿಕ ಎಂದಿರುವ ಉನ್ನತ ನ್ಯಾಯಾಲಯ ಅದನ್ನು ರದ್ದು ಮಾಡಿ, ಬಾಂಡ್​ ವಿವರಗಳನ್ನು ವೆಬ್​ಸೈಟ್​ನಲ್ಲಿ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿತು. ಅದರಂತೆಯೇ ಮಾರ್ಚ್​ ಚುನಾವಣಾ ಆಯೋಗ ತನ್ನ ವೆಬ್​ಸೈಟ್​ನಲ್ಲಿ ಚುನಾವಣಾ ಬಾಂಡ್​ ವಿವರಗಳನ್ನು ಅಪ್​ಲೋಡ್​ ಮಾಡಿತು. ಸದ್ಯ ಈ ವಿಚಾರ ಕುರಿತಂತೆ ಮಾತನಾಡಿರುವ ಹಿರಿಯ ವಕೀಲ ಕಪಿಲ್ ಸಿಬಲ್ ದೇಶದ ಇತಿಹಾಸದಲ್ಲಿ ನಡೆದ ದೊಡ್ಡ ಹಗರಣವಿದು ಎಂದು ಹೇಳಿದ್ದಾರೆ.
ಇದನ್ನೂ ಓದಿ:ಯಶಸ್ವಿ ಉದ್ಯಮಿ ಸಿ.ಎಸ್. ವೇಣುಗೋಪಾಲ್: ಕಟ್ಟಡ ವಿನ್ಯಾಸದಲ್ಲಿ ನೈಪುಣ್ಯ, ಯುವಜನರಿಗೆ ಸ್ಪೂರ್ತಿ
ಚುನಾವಣಾ ಬಾಂಡ್‌ಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚಿನ ಬೆಳವಣಿಗೆ ಬಗ್ಗೆ ಮಾತನಾಡಿದ ಕಪಿಲ್, ಮಾರ್ಚ್ 21ರೊಳಗೆ ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಬಹಿರಂಗಪಡಿಸುವಂತೆ ಎಸ್‌ಬಿಐಗೆ ಸುಪ್ರೀಂ ಕೋರ್ಟ್‌ನ ಆದೇಶದ ಕುರಿತು ಹಲವು ವಿಷಯಗಳನ್ನು ಬಹಿರಂಗಪಡಿಸಿದರು.
“ದುರದೃಷ್ಟವಶಾತ್, ಇದು ಬಹುಶಃ ಈ ದೇಶದ ಇತಿಹಾಸದಲ್ಲಿ ನಡೆದ ಅತಿದೊಡ್ಡ ಹಗರಣ. ಈ ಯೋಜನೆಯು ಪಾರದರ್ಶಕವಾಗಿಲ್ಲ ಎಂಬುದೇ ಸತ್ಯ, ಹಾಗಾಗಿ ಉದ್ಯಮಿ ಅಥವಾ ಕೈಗಾರಿಕೋದ್ಯಮಿ, ಯಾರಾದರೂ ರಾಜಕೀಯ ಪಕ್ಷಕ್ಕೆ ಹಣ ನೀಡಬೇಕೆಂದಿದ್ದರೆ ಅದನ್ನು ಚೆಕ್ ಮೂಲಕವೇ ಮಾಡಬೇಕಿತ್ತು. ಅದಕ್ಕೂ ಅವಕಾಶ ನೀಡಲಾಗಿದೆ. ಆದರೆ ಚೆಕ್ ಮೂಲಕ ಮಾಡಲಿಲ್ಲ ಯಾಕೆ?” ಎಂದರು.
ಇದನ್ನೂ ಓದಿ:ಮುಸ್ಲಿಮರ ಮಹಾ ಸಮ್ಮೇಳನ ಏರ್ಪಡಿಸಲು ತೀರ್ಮಾನ
“ಅವರೇ ಯಾಕೆ ಹೋಗಿ ಈ ಬಾಂಡ್ ಖರೀದಿಸಬೇಕಾಯಿತು? ಸ್ವಾಭಾವಿಕವಾಗಿ, ಈ ಯೋಜನೆಯ ಉದ್ದೇಶವು ಅಧಿಕಾರದಲ್ಲಿರುವ ರಾಜಕೀಯ ಪಕ್ಷವನ್ನು ಶ್ರೀಮಂತಗೊಳಿಸುವುದನ್ನು ಖಚಿತಪಡಿಸಿಕೊಳ್ಳುವುದಾಗಿತ್ತು. ಅದಕ್ಕಾಗಿಯೇ ಬಿಜೆಪಿಗೆ ಈ ಬಾಂಡ್​ನಿಂದ, ಈ ಸ್ಕೀಮ್​ ಮುಖಾಂತರ 6000 ಕೋಟಿ ರೂ. ದೊರೆತಿದೆ” ಎಂದರು,(ಏಜೆನ್ಸೀಸ್).
‘ಇದೆಲ್ಲವೂ ನನ್ನ ಕುಟುಂಬದ ಮೇಲೆ ಪರಿಣಾಮ ಬೀರಿದೆ’; ಕಡೆಗೂ ಮೌನ ಮುರಿದ ಚಹಲ್ ಪತ್ನಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 10 =
Remember me
