ಬೆಂಗಳೂರು: ಕರೊನಾ ಸೋಂಕು ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ 65 ವರ್ಷ ಮೇಲ್ಪಟ್ಟವರು ಮನೆಗಳಿಂದ ಹೊರಬಾರದಂತೆ ಸಲಹೆ ನೀಡಲಾಗಿದ್ದು, ಅದನ್ನು ಕಡ್ಡಾಯಗೊಳಿಸಿಲ್ಲ ಎಂದು ಕೇಂದ್ರ ಸರ್ಕಾರ ರಾಜ್ಯ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
65 ವರ್ಷ ಮೀರಿದ ನಾಗರಿಕರ ಸಂಚಾರ ನಿರ್ಬಂಧಿಸಿ ಮೇ 18ರಂದು ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಬಿ.ಎನ್. ಜಯದೇವ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಇದನ್ನೂ ಓದಿ24 ಗಂಟೆಯಲ್ಲಿ ರಾಜ್ಯದಲ್ಲಿ ಬರೋಬ್ಬರಿ 515 ಕರೊನಾ ಪ್ರಕರಣಗಳು; ಉಡುಪಿಯಲ್ಲಿ ದ್ವಿಶತಕ
ಕೇಂದ್ರ ಸರ್ಕಾರದ ಪರ ವಕೀಲರು ಮೇ 30ರಂದು ಹೊರಡಿಸಿದ್ದ ಹೊಸ ಆದೇಶದ ಪ್ರತಿಯನ್ನು ಮೆಮೊ ಮೂಲಕ ನ್ಯಾಯಪೀಠಕ್ಕೆ ಸಲ್ಲಿಸಿದ್ದಾರೆ.
65 ವರ್ಷ ಮೇಲ್ಪಟ್ಟವರು, ಗರ್ಭಿಣಿಯರು, ಅನಾರೋಗ್ಯ ಪೀಡಿತರು ಹಾಗೂ 10 ವರ್ಷಕ್ಕೂ ಕಡಿಮೆ ವಯಸಿನ ಮಕ್ಕಳು ಮನೆಯಲ್ಲೇ ಉಳಿಯುವಂತೆ ಸಲಹೆ ನೀಡಲಾಗಿದೆಯೇ ಹೊರತು ಕಡ್ಡಾಯಗೊಳಿಸಿಲ್ಲ ಎಂದು ಅದರಲ್ಲಿ ತಿಳಿಸಿದ್ದಾರೆ. ಅದನ್ನು ಪರಿಗಣಿಸಿದ ನ್ಯಾಯಪೀಠ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ಯರ್ಥಪಡಿಸಿತು.
ಇದನ್ನೂ ಓದಿಕರೊನಾಗೆ ಪತ್ನಿ ಬಲಿ, ಐಸೋಲೇಶನ್​ನಲ್ಲಿ ಪತಿ
ಕರೊನಾ ಪತ್ತೆ, ಚಿಕಿತ್ಸೆ ಇನ್ನು ಸುಲಭ- ಸಚಿವ ಬಿ.ಸಿ.ಪಾಟೀಲ್ ಹೇಳಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + three =
Remember me
