ನವದೆಹಲಿ:2022-2024ರ ನಡುವಿನ ಎರಡು ವರ್ಷಗಳ ಅವಧಿಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (ಎನ್‌ಡಿಆರ್‌ಎಫ್) ಕರ್ನಾಟಕ, ಹಿಮಾಚಲ ಪ್ರದೇಶ ಮತ್ತು ಅಸ್ಸಾಂ ರಾಜ್ಯಗಳಿಗೆ ಹೆಚ್ಚಿನ ಪ್ರಮಾಣದ ಪರಿಹಾರದ ಹಣ ನೀಡಲಾಗಿದೆ ಎಂದು ಬುಧವಾರ ಕೇಂದ್ರ ಸರ್ಕಾರ ಬುಧವಾರ ರಾಜ್ಯಸಭೆಗೆ ತಿಳಿಸಿದೆ.
ಇದನ್ನೂ ಓದಿ:ಸಿಎಂ ರಾಜೀನಾಮೆ ಬಗ್ಗೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಬೇಕು: ಮಧು ಬಂಗಾರಪ್ಪ
ಪ್ರಕೃತಿ ವಿಕೋಪದಿಂದ ತತ್ತರಿಸಿದ ಜನರಿಗೆ ಪರಿಹಾರ ಮತ್ತು ಪುನರ್ವಸತಿಗಾಗಿ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ತಿಳಿಸಿದೆ.2022-24ರ ಅವಧಿಯಲ್ಲಿ ಕೇಂದ್ರದ ಉನ್ನತ ಮಟ್ಟದ ಸಮಿತಿಯು ನೆರೆ ಮತ್ತು ಭೂ ಕುಸಿತ ಸಂಬಂಧಿಸಿದ ಪರಿಹಾರ ಒದಗಿಸಲು ಕರ್ನಾಟಕ ಅತ್ಯಧಿಕ 941 ಕೋಟಿ ರೂ., ಹಿಮಾಚಲ ಪ್ರದೇಶ ಮತ್ತು ಅಸ್ಸಾಂಗೆ ಕ್ರಮವಾಗಿ 873 ಕೋಟಿ ರೂಪಾಯಿ ಮತ್ತು 594 ಕೋಟಿ ರೂಪಾಯಿಗಳನ್ನು ಒದಗಿಸಲು ಅನುಮೋದಿಸಲಾಗಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ರಾಜ್ಯಸಭೆಗೆ ತಿಳಿಸಿದರು.
ಕಳೆದ ಎರಡು ವರ್ಷಗಳಲ್ಲಿ ಎನ್‌ಡಿಆರ್‌ಎಫ್‌ನಿಂದ ಕರ್ನಾಟಕಕ್ಕೆ 939 ಕೋಟಿ, ಹಿಮಾಚಲ ಪ್ರದೇಶಕ್ಕೆ 812 ಕೋಟಿ ಮತ್ತು ಅಸ್ಸಾಂಗೆ 160 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ತಮಿಳುನಾಡಿಗೆ 276 ಕೋಟಿ ರೂ., ಸಿಕ್ಕಿಂಗೆ 267 ಕೋಟಿ ರೂ., ನಾಗಾಲ್ಯಾಂಡ್‌ಗೆ 68 ಕೋಟಿ ರೂ. ಪರಿಹಾರ ಮತ್ತು ಭೂ ಕುಸಿತ ನಿರ್ವಹಣೆಗಾಗಿ ನೀಡಲಾಗಿದೆ ಎಂದು ಸಚಿವ ರಾಯ್ ತಿಳಿಸಿದರು.
2024-25ರ ಅವಧಿಯಲ್ಲಿ ಮಿಜೋರಾಂ ಮತ್ತು ಮಣಿಪುರದಲ್ಲಿ ರೆಮಲ್ ಚಂಡಮಾರುತದ ಪರಿಣಾಮ ಮತ್ತು ಕೇರಳ ಭೂಕುಸಿತ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ವರದಿ ನೀಡಲು ಕೇಂದ್ರ ತಂಡ ರಚಿಸಲಾಗಿದೆ ಎಂದು ಸಚಿವರು ಹೇಳಿದರು.  ಮಿಜೋರಾಂ ಮತ್ತು ಮಣಿಪುರ ರಾಜ್ಯಗಳು ಎನ್‌ಡಿಆರ್‌ಎಫ್‌ನಿಂದ ಹೆಚ್ಚುವರಿ ಆರ್ಥಿಕ ಸಹಾಯಕ್ಕಾಗಿ ಕ್ರಮವಾಗಿ 216.73 ಕೋಟಿ ಮತ್ತು 711.43 ಕೋಟಿಗೆ ಮೆಮೊರಾಂಡಮ್‌ಗಳನ್ನು ಸಲ್ಲಿಸಿವೆ.
ಶೀಘ್ರದಲ್ಲೇ ವೈದ್ಯಕೀಯ ಕಾಲೇಜುಗಳಿಗೆ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ದಾದಿಯರ ನೇಮಕ: ಡಾ.ಶರಣಪ್ರಕಾಶ್‌ ಪಾಟೀಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − three =
Remember me
