ನವದೆಹಲಿ:ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರತಿಭಟನೆ ನಡೆಸಿದರು. ಕೇಂದ್ರದಿಂದ ಬಂದಿರುವ ಹಣದ ವಿಚಾರದಲ್ಲಿ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಅವರ ಜೊತೆ ಪಕ್ಷದ (ಸಿಪಿಎಂ) ಮುಖಂಡರು ಭಾಗವಹಿಸಿದ್ದರು.
ಇದನ್ನೂ ಓದಿ:ಆ ವಿಷಯದಲ್ಲಿ ಚರಣ್ ಬಗ್ಗೆ ಅಸೂಯೆ..ಹೀಗೇಕೆ ಅಂದರು ಉಪಾಸನಾ?
ಅವರೆಲ್ಲರೂ ಕೇರಳ ಹೌಸ್‌ನಿಂದ ಜಂತರ್‌ಮಂತರ್‌ಗೆ ರ‍್ಯಾಲಿಯಲ್ಲಿ ಆಗಮಿಸಿದರು. ದೆಹಲಿ ಸಿಎಂ ಅರವಿಂದ್ ಕೇಜ್ರೀವಾಲ್​, ಪಂಜಾಬ್ ಸಿಎಂ ಭಗವಂತ್ ಮಾನ್ ಕೂಡ ಪ್ರತಿಭಟನಾ ವೇದಿಕೆಗೆ ಆಗಮಿಸಿ ತಮ್ಮ ಒಗ್ಗಟ್ಟು ವ್ಯಕ್ತಪಡಿಸಿದರು.
ಮತ್ತೊಂದೆಡೆ ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಪಿ ಇದರಲ್ಲಿ ಭಾಗವಹಿಸಲು ನಿರಾಕರಿಸಿದೆ. ಕರ್ನಾಟಕದ ಕಾಂಗ್ರೆಸ್​ ಮುಖಂಡರು ಹಾಗೂ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದರು. ಕರ್ನಾಟಕ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆದಿದ್ದು, ಕೇರಳ ಸಿಎಂ ಕೂಡ ಅದೇ ಹಾದಿ ಹಿಡಿದಿರುವುದು ಗಮನಾರ್ಹ ಬೆಳವಣಿಗೆಯಾಗಿದೆ.
ಬುಧವಾರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ಟೀಕೆ ಮಾಡಿದ್ದರು. ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಪಾವತಿಸುತ್ತಿರುವ ದೇಶದ ಎರಡನೇ ರಾಜ್ಯವಾಗಿರುವ ಕರ್ನಾಟಕ ಸುಮಾರು 1.88 ಲಕ್ಷ ಕೋಟಿ ರೂಪಾಯಿ ನಷ್ಟದ ಭೀತಿಯಲ್ಲಿದೆ ಎಂದು ತಿಳಿಸಿದ್ದರು.
15ನೇ ಹಣಕಾಸು ಆಯೋಗದ ಶಿಫಾರಸುಗಳನ್ನು ಅನುಷ್ಠಾನಗೊಳಿಸದಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. 1972ರಲ್ಲಿ ಕೇಂದ್ರ ಸರ್ಕಾರ ನೀಡಿದ ಜನಸಂಖ್ಯಾ ನಿಯಂತ್ರಣದ ಕರೆಗೆ ಓಗೊಟ್ಟು ದಕ್ಷಿಣ ಭಾರತದ ರಾಜ್ಯಗಳು ಜನಸಂಖ್ಯೆಯನ್ನು ನಿಯಂತ್ರಿಸಿವೆ. ಇಂದು ಅದೇ ನಮಗೆ ಶಾಪವಾಗಿ ಪರಿಣಮಿಸಿದೆ. ಆದರೆ, ಪ್ರಧಾನಿ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಟೀಕೆಗಳನ್ನು ತಳ್ಳಿಹಾಕಿದ್ದಾರೆ. ಈ ಆರೋಪಗಳು ದೇಶ ವಿಭಜನೆಯ ಬೀಜ ಬಿತ್ತುತ್ತಿವೆ ಎಂದು ಪ್ರತಿಕ್ರಿಯಿಸಿದ್ದಾರೆ.
ಕರ್ನಾಟಕ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿ ಎನ್​.ವಿ. ಅಂಜಾರಿಯಾ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:fourteen − twelve =
Remember me
