ತಿರುವನಂತಪುರಂ:ರಾಜಕೀಯ ಬಿಗುವಿನ ನಡುವೆಯೇ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ನಡೆದ ಬಾಂಬ್ ಸ್ಫೋಟದ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ.
ಇದನ್ನೂ ಓದಿ:ನಾಮಪತ್ರ ಸಲ್ಲಿಸಲು ಪ್ರಧಾನಿ ಮೋದಿ ಸಜ್ಜು: ಕ್ಷೇತ್ರದಲ್ಲಿ ರೋಡ್ ಶೋ
ಆದರೆ ಸ್ಫೋಟದಲ್ಲಿ ಯಾರಿಗೂ ಗಾಯವಾಗದ ಕಾರಣ ಪೊಲೀಸರು ನಿಟ್ಟುಸಿರು ಬಿಟ್ಟಿದ್ದಾರೆ. ಚಕ್ಕರಕ್ಕಲ್ ಬಳಿಯ ಬಾವೊಡೆ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದ್ದು, ಆ ಸಮಯದಲ್ಲಿ ಪೊಲೀಸ್ ಸಿಬ್ಬಂದಿಯನ್ನು ಸಮೀಪದಲ್ಲಿ ನಿಯೋಜಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಕ್ಷಣ ಸ್ಥಳಕ್ಕಾಗಮಿಸಿದ ಬಾಂಬ್ ಸ್ಕ್ವಾಡ್ ಶೋಧ ಕಾರ್ಯ ಕೈಗೊಂಡಿದ್ದು, ಬಾಂಬ್ ಎಸೆದವರು ಯಾರು ಎಂಬುದು ಇನ್ನೂ ದೃಢಪಟ್ಟಿಲ್ಲ ಎಂದು ಅವರು ತಿಳಿಸಿದ್ದಾರೆ.
ಏತನ್ಮಧ್ಯೆ, ಹೆಸರು ಹೇಳಲು ನಿರಾಕರಿಸಿದ ಪೊಲೀಸ್ ಅಧಿಕಾರಿಗಳು, ಸ್ಫೋಟಕ ವಸ್ತುವು ಐಸ್ ಕ್ರೀಮ್ ಬಾಲ್ ಕಂಟೈನರ್ ರೂಪದಲ್ಲಿದೆ ಎಂದು ಹೇಳಿದರು.
ಭಾನುವಾರ ದೇವಸ್ಥಾನದ ಉತ್ಸವದ ವೇಳೆ ಸಿಪಿಎಂ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದೆ ಎಂದು ಹೇಳಲಾಗಿದ್ದು, ಸೋಮವಾರ ಬೆಳಗ್ಗೆ ನಡೆದ ಬಾಂಬ್ ಸ್ಫೋಟವು ಕೋಲಾಹಲಕ್ಕೆ ಕಾರಣವಾಯಿತು. ಘಟನೆಯ ಬಗ್ಗೆ ಚಕ್ಕರಕ್ಕಲ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಚಲಿಸುತ್ತಿದ್ದ ಬಸ್‌ನಲ್ಲಿ ಜೋಡಿಯೊಂದರ ಕಾಮಕೇಳಿ.. ಚುಂಬನ, ಬಿಗಿದಪ್ಪುಗೆ ಕಂಡು ದಂಗಾದ ಪ್ರಯಾಣಿಕರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 7 =
Remember me
