ಕೋಯಿಕ್ಕೋಡ್ (ಕೇರಳ):ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಹಿನ್ನೆಲೆಯಲ್ಲಿ ಕೋಳಿಕ್ಕೋಡ್ ವಿಮಾನ ದುರಂತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ರೋಗಿಗಳ ಭೇಟಿಗೆ ಯಾರಿಗೂ ಅನುಮತಿ ನೀಡಲಾಗುವುದಿಲ್ಲ ಎಂದು ರಾಜ್ಯ ಆರೋಗ್ಯ ಕಾರ್ಯದರ್ಶಿ ಶನಿವಾರ ಆದೇಶ ಹೊರಡಿಸಿದ್ದಾರೆ.ಅಪಘಾತದಲ್ಲಿ ಗಾಯಗೊಂಡ ರೋಗಿಗಳಿಗೆ ಇದುವರೆಗೂ ಕರೊನಾವೈರಸ್ ಪರೀಕ್ಷೆ ನಡೆಸಿಲ್ಲ. ಆದರೆ ಅವರ ಪೈಕಿ ಕೆಲವರಲ್ಲಿ ಸೋಂಕು ತಗುಲಿರುವ ಸಾಧ್ಯತೆಯಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಭಾರತದ ನೂತನ ಸಿಎಜಿ ಆಗಿ ಜಿ.ಸಿ. ಮುರ್ಮು ಪ್ರಮಾಣ ವಚನ ಸ್ವೀಕಾರ
ರಾಜ್ಯದಲ್ಲಿ ಮತ್ತಷ್ಟು ಕರೊನಾವೈರಸ್ ಹರಡುವಿಕೆಯನ್ನು ತಡೆಗಲು, ರಾಜ್ಯ ಸರ್ಕಾರ ನಿರ್ದೇಶನಗಳನ್ನು ನೀಡಿದೆ.ಮಲಪ್ಪುರಂ ಮತ್ತು ಕೋಳಿಕ್ಕೋಡ್ ಜಿಲ್ಲಾ ಆಸ್ಪತ್ರೆಗಳಲ್ಲಿ 149 ಪ್ರಯಾಣಿಕರನ್ನು ದಾಖಲಿಸಲಾಗಿದ್ದು, ಈ ಪೈಕಿ 22 ಜನರ ಗಂಭೀರವಾಗಿದೆ. 22 ಜನರನ್ನು ಪ್ರಥಮ ಚಿಕಿತ್ಸಾ ನಂತರ ಬಿಡುಗಡೆ ಮಾಡಲಾಗಿದೆ ಎಂದು ಮಲಪ್ಪುರಂ ಜಿಲ್ಲಾಧಿಕಾರಿ ಖಚಿತಪಡಿಸಿದ್ದಾರೆ.ವಿಮಾನ ವಂದೇ ಭಾರತ್ ಮಿಷನ್ ಅಡಿ ದುಬೈದಿಂದ ಕೋಳಿಕ್ಕೋಡ್​​ಗೆ ಆಗಮಿಸುತ್ತಿತ್ತು. ಅಪಘಾತದಲ್ಲಿ ಈವರೆಗೆ ವಿಮಾನದ ಇಬ್ಬರು ಪೈಲಟ್‌ಗಳು ಸೇರಿ ಕನಿಷ್ಠ 19 ಜನರು ಮೃತಪಟ್ಟಿದ್ದಾರೆ. ಉಳಿದ ನಾಲ್ಕುರು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ.
ಇದನ್ನೂ ಓದಿ:ಕರಿಪ್ಪೂರ್ ವಿಮಾನ ನಿಲ್ದಾಣದ ರನ್​ ವೇ 10 ಸುರಕ್ಷಿತವಾಗಿಲ್ಲ: 2011ರಲ್ಲೇ ತಜ್ಞರ ತಂಡದ ಎಚ್ಚರಿಕೆ
ಏತನ್ಮಧ್ಯೆ, ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ದಾಖಲಿಸಲಾದ ಕೋಳಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭೇಟಿ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 12 =
Remember me
