ಕೊಚ್ಚಿ: ಕೊಚ್ಚಿಯಿಂದ ದುಬೈಗೆ ತೆರಳುವ ವಿಮಾನ ಪ್ರಯಾಣಿಕರಲ್ಲಿ ಓರ್ಕವನಿಗೆ ಕರೊನಾ ವೈರಸ್​ ಸೋಂಕು ಪತ್ತೆಯಾಗಿದೆ ಎಂದು ವರದಿಯಾಗಿದೆ.
ಪ್ರಯಾಣಿಕನಲ್ಲಿ ವೈರಸ್​ ಸೋಂಕು ಪತ್ತೆಯಾಗುತ್ತಲೇ ದುಬೈಗೆ ತೆರಳುತ್ತಿದ್ದ 289 ಮಂದಿಯನ್ನು ವಿಮಾನ ಟೇಕ್​ ಆಫ್​ ಆಗುವ ಮೊದಲೇ ಸ್ಥಳಾಂತರಿಸಲಾಗಿದೆ. ಎಲ್ಲ 289 ಮಂದಿಯನ್ನು ಪ್ರತ್ಯೇಕ ಕೊಠಡಿಯಲ್ಲಿ ಇಟ್ಟು ನಿಗಾ ವಹಿಸಲಾಗಿದೆ ಎಂದು ಕೇರಳ ಸರ್ಕಾರ ತಿಳಿಸಿದೆ.
ಇಂಗ್ಲೆಂಡ್​ನ ಓರ್ವ ಪ್ರಜೆಯಲ್ಲಿ ಕರೊನಾ ವೈರಸ್​ ಸೋಂಕು ಪತ್ತೆಯಾಗಿದ್ದು ದುಬೈಗೆ ತೆರಳುತ್ತಿದ್ದ ಪ್ರಯಾಣಿಕರೊಂದಿಗೆ ಸೇರಿಕೊಂಡ ಹಿನ್ನೆಲೆಯಲ್ಲಿ ಎಲ್ಲರನ್ನು ಪರೀಕ್ಷೆ ಒಳಪಡಿಸಲು ಕೇರಳ ಸರ್ಕಾರ ಮುಂದಾಗಿದೆ.
ಈತ ಮುನಾರ್​ನಲ್ಲಿ ರಜೆ ದಿನ ಕಳೆಯಲು ಆಗಮಿಸಿದ್ದ. 19 ದಿನಗಳಿಂದ ಮುನಾರ್​ನಲ್ಲಿ ಇದ್ದ. ಈತನಿಗೆ ವೈರಸ್​ ಸೋಂಕು ಹರಡಿತ್ತು. ಈತ ಮುನಾರ್​ನಲ್ಲಿ ಆರೋಗ್ಯ ಅಧಿಕಾರಿಗಳಿಗೆ ಮಾಹಿತಿ ನೀಡದೆ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಪ್ರಯಾಣಿಕರೊಂದಿಗೆ ಸೇರಿಕೊಂಡಿದ್ದ ಎಂದು ತಿಳಿದು ಬಂದಿದೆ.
ಕೇರಳದ ಪ್ರಸಿದ್ಧ ಯಾತ್ರ ಕ್ಷೇತ್ರಗಳಾದ ಗುರುವಾಯೂರು ಹಾಗೂ ಶಬರಿಮಲೆಗೆ ಆಗಮಿಸುವ ಭಕ್ತರ ಸಂಖ್ಯೆ ಕಡಿಮೆಯಾಗಿದೆ. ಹೀಗಾಗಿ ಎರಡು ಕ್ಷೇತ್ರಗಳಲ್ಲಿ ಧಾರ್ಮಿಕ ಚಟುವಟಿಕೆಗಳು ಕಡಿಮೆಯಾಗಿವೆ.
ಕೇರಳ ಸರ್ಕಾರ ಚಿತ್ರಮಂದಿರ, ಮಾಲ್​ಗಳನ್ನು ಬಂದ್​ ಮಾಡುವಂತೆ ಆದೇಶ ಹೊರಡಿಸಿದೆ. ಚಲನ ಚಿತ್ರಗಳ ಶೂಟಿಂಗ್​ ಕೂಡ ರದ್ದಾಗಿದೆ. ಪ್ರವಾಸಿ ತಾಣಗಳಲ್ಲಿರುವ ರೆಸಾರ್ಟ್​, ಹೋಟೆಲ್​ಗಳನ್ನು ಮುಚ್ಚಲಾಗಿದೆ.ಕೇಂದ್ರ ಆರೋಗ್ಯ ರಾಜ್ಯ ಸಚಿವ ಅಶ್ವಿನಿ ಚೌಬೆ ಮಾತನಾಡಿ, ಕರೊನಾ ವೈರಸ್​ ಸೋಂಕು ತಗುಲಿರುವವರಿಗೆ ಪ್ರತ್ಯೇಕ  ಆಸ್ಪತ್ರೆ ತೆರೆಯಲು ಸರ್ಕಾರ ಸಜ್ಜಾಗಿದೆ ಎಂದು ಅವರು ಹೇಳಿದರು. (ಏಜೆನ್ಸೀಸ್​)
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಧ್ಯ ವಯಸ್ಕ ಪ್ರೇಮಿಗಳು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:8 + thirteen =
Remember me
