ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುತ್ತಿರುವ, ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣಕ್ಕಾಗಿ ನಡೆಲಾಗುತ್ತಿರುವ ಭೂಮಿ ಪೂಜೆ ಕಾರ್ಯಕ್ರಮ ಸುಪ್ರೀಂ ಕೋರ್ಟ್​ ತೀರ್ಪಿಗೆ ವಿರುದ್ಧವಾಗಿದೆ ಹಾಗೂ ಸಂವಿಧಾನದ ಆಶಯಗಳನ್ನು ಉಲ್ಲಂಘಿಸುತ್ತದೆ ಎಂದು ಎಡಪಕ್ಷಗಳು ಹೇಳಿವೆ.
ವಿವಾದವನ್ನು ಬಗೆಹರಿಸಿರುವ ಸುಪ್ರೀಂ ಕೋರ್ಟ್​ ತೀರ್ಪಿನಲ್ಲಿ ಕಟ್ಟಡವನ್ನು ಧ್ವಂಸಗೊಳಿಸಿದ್ದನ್ನು ಖಂಡಿಸಲಾಗಿದೆ. ಆದರೆ, ಕೇಂದ್ರ ಹಾಗೂ ಉತ್ತರಪ್ರದೇಶ ಸರ್ಕಾರಗಳು ಇದರಲ್ಲಿ ಪಾಲ್ಗೊಂಡಿರುವುದನ್ನು ನೋಡಿದರೆ, ಕಟ್ಟಡ ಧ್ವಂಸವನ್ನು ಶಾಸನಬದ್ಧಗೊಳಿಸಿದಂತಾಗಲಿದೆ ಎಂದು ಆಕ್ಷೇಪಿಸಿವೆ.
ಇದನ್ನೂ ಓದಿ;ಬೆಂಕಿ ಹಚ್ಚಬೇಡಿ…, 1,304 ಕೋಟಿ ರೂ. ಕೊಡ್ತೇವೆ….!
ಮಂದಿರ ನಿರ್ಮಾಣ ಕಾರ್ಯ ಟ್ರಸ್ಟ್​ ಮೂಲಕ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಹೇಳಿದೆ. ಆದರೆ, ಭೂಮಿಪೂಜೆ ಕಾರ್ಯಕ್ರಮವನ್ನು ಉತ್ತರಪ್ರದೇಶ ಸರ್ಕಾರ ಕೇಂದ್ರದ ಜತೆಗೆ ತನ್ನ ತೆಕ್ಕೆಗೆ ತೆಗೆದುಕೊಂಡಿದೆ.
ಸಂವಿಧಾನವು ಜಾತ್ಯತೀತತೆಯನ್ನು ಪ್ರತಿಪಾದಿಸಿದ್ದು, ಸರ್ಕಾರಗಳು ಒಂದು ಧರ್ಮದ ಜತೆಗೆ ಗುರುತಿಸಿಕೊಳ್ಳುವುದು ಸಂವಿಧಾನಬಾಹಿರವಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿವೆ. ಧರ್ಮವನ್ನು ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳಲು ಜನರು ಅವಕಾಶ ನೀಡಬಾರದೆಂದು ಮನವಿ ಮಾಡಿವೆ.
26 ವರ್ಷಗಳ ಬಳಿಕ ಪಾತಾಳಕ್ಕಿಳಿದಿದೆ ಚಿನ್ನ; ಹಳದಿ ಲೋಹ ಆಕರ್ಷಣೆ ಕಳೆದುಕೊಂಡರೆ ಲಾಭ ಯಾರಿಗೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
