ನವದೆಹಲಿ:ಮದ್ಯ ಅರ್ಧ ಬೆಲೆಗೆ ಸಿಗುತ್ತಿದೆ ಎಂಬ ಕಾರಣಕ್ಕೆ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಕಳ್ಳಸಾಗಾಟ ಆರಂಭವಾಗಿದ್ದಷ್ಟೇ ಅಲ್ಲದೆ, ಇನ್ನೊಂದು ರಾಜ್ಯದ ಆರ್ಥಿಕತೆಯ ಮೇಲೂ ಪರಿಣಾಮ ಬೀರಿದ ಪ್ರಸಂಗ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಅಬಕಾರಿ ಅಧಿಕಾರಿಗಳು 70ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ್ದಾರೆ.
ಅರ್ಧದಷ್ಟು ಕಡಿಮೆ ಬೆಲೆಗೆ ಮದ್ಯ ಸಿಗುತ್ತಿದೆ ಎಂಬ ಕಾರಣಕ್ಕೆ ರಾಷ್ಟ್ರ ರಾಜಧಾನಿ ದೆಹಲಿಯಿಂದ ಉತ್ತರಪ್ರದೇಶಕ್ಕೆ ಮದ್ಯ ಕಳ್ಳಸಾಗಾಟ ಆರಂಭವಾಗಿದ್ದು, ಸಂಬಂಧಿತ ಅಧಿಕಾರಿಗಳು ಎಚ್ಚೆತ್ತುಕೊಳ್ಳುವಂತೆ ಮಾಡಿದೆ. 2021ರ ನವೆಂಬರ್​ನಿಂದ ಜಾರಿಗೆ ದೆಹಲಿಯಲ್ಲಿ ಜಾರಿಗೆ ಬಂದಿರುವ ನೂತನ ಮದ್ಯನೀತಿಯಿಂದಾಗಿ ಅಲ್ಲಿ ಉತ್ತರಪ್ರದೇಶಕ್ಕಿಂತಲೂ ಅರ್ಧದಷ್ಟು ಕಡಿಮೆ ಬೆಲೆಗೆ ಮದ್ಯ ಸಿಗಲಾರಂಭಿಸಿದೆ. ಇದೇ ಕಾರಣಕ್ಕೆ ಉತ್ತರಪ್ರದೇಶಕ್ಕೆ ಮದ್ಯ ಕಳ್ಳಸಾಗಣೆ ಆರಂಭವಾಗಿದ್ದು, ಯುಪಿಯ ಅಂಗಡಿಗಳಲ್ಲಿನ ಮದ್ಯ ಮಾರಾಟದಲ್ಲಿ ಶೇ. 40 ಇಳಿಕೆ ಆಗಿತ್ತು. ಅಷ್ಟೇ ಅಲ್ಲದೆ ರಾಜ್ಯದ ಆರ್ಥಿಕತೆ ಮೇಲೂ ಪರಿಣಾಮ ಬೀರಿತ್ತು.
ಹೀಗಾಗಿ ಗಡಿಪ್ರದೇಶದಲ್ಲಿ ಕಾರ್ಯಾಚರಣೆ ಆರಂಭಿಸಿರುವ ಅಬಕಾರಿ ಅಧಿಕಾರಿಗಳು ಈ ವರ್ಷದ ಏ. 1ರಿಂದ ಜೂ. 7ರವರೆಗೆ 70ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ್ದಾರೆ. ಜತೆಗೆ 10,056 ಲೀಟರ್​ ಆಲ್ಕೋಹಾಲ್ ಮತ್ತು 23 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ವಾಹನಗಳ ಪೈಕಿ ಬಹುತೇಕವು ದ್ವಿಚಕ್ರವಾಹನಗಳಾಗಿದ್ದು, ಉಳಿದವು ಖಾಸಗಿ ಕಾರುಗಳು. ಇನ್ನು 2021-22ರಲ್ಲಿ 173 ಮಂದಿಯನ್ನು ಬಂಧಿಸಲಾಗಿದ್ದು, 27 ಸಾವಿರ ಲೀಟರ್ ಮದ್ಯ ಹಾಗೂ 28 ವಾಹನಗಳನ್ನು ವಶಕ್ಕೆ ಪಡೆಯಲಾಗಿತ್ತು. ಕಳ್ಳಸಾಗಣೆ ತಡೆ ಕಾರ್ಯಾಚರಣೆ ಆರಂಭಿಸಿದ ಬಳಿಕ ರಾಜ್ಯದ ಆದಾಯದಲ್ಲಿ ಶೇ. 5 ಏರಿಕೆ ಕೂಡ ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೋಮ್​ವರ್ಕ್ ಮಾಡದ 5 ವರ್ಷದ ಮಗಳಿಗೆ ಅಮ್ಮನಿಂದಲೇ ಇದೆಂಥ ಶಿಕ್ಷೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − three =
Remember me
