ನವದೆಹಲಿ/ಬೆಂಗಳೂರು: ಚಾತಕ ಪಕ್ಷಿಗಳಂತೆ ಕಾಯುತ್ತಿದ್ದ ಮದ್ಯಪ್ರಿಯರಿಗೆ ಶುಕ್ರವಾರ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ.
ಕರೊನಾಕ್ಕೆ ಸಂಬಂಧಿಸಿದಂತೆ ಹಸಿರು ವಲಯದಲ್ಲಿರುವ ಜಿಲ್ಲೆಗಳಲ್ಲಿ ಮದ್ಯ ಮಾರಾಟ ಮಾಡಲು ಕೇಂದ್ರ ಗೃಹ ಸಚಿವಾಲಯ ಹೊರಡಿಸಿರುವ ಆದೇಶದಲ್ಲಿ ಅನುಮತಿ ನೀಡಲಾಗಿದೆ.
ಆದರೆ ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ. ಒಬ್ಬೊಬ್ಬರಿಗೂ ಕನಿಷ್ಠ 6 ಅಡಿ ಅಂತರ ಇರಬೇಕು. ಒಂದು ಅಂಗಡಿಯಲ್ಲಿ ಏಕಕಾಲಕ್ಕೆ ಐದಕ್ಕಿಂತ ಹೆಚ್ಚು ಗ್ರಾಹಕರು ಇರುವಂತಿಲ್ಲ.ಲಾಕ್‌ಡೌನ್ ಅನ್ನು ಮೇ 4ರಿಂದ ಇನ್ನೂ ಎರಡು ವಾರಗಳ ಕಾಲ ವಿಸ್ತರಿಸುವುದಕ್ಕೆ ಸಂಬಂಧಿಸಿದಂತೆ ಹೊರಡಿಸಿದ ಆದೇಶದಲ್ಲಿ ಈ ಅಂಶಗಳನ್ನು ಕೇಂದ್ರ ಸ್ಪಷ್ಟಪಡಿಸಿದೆ.
ಮೇ 3ರಂದು ಎರಡನೇ ಹಂತದ ಲಾಕ್‌ಡೌನ್ ಮುಕ್ತಾಯವಾದ ಬಳಿಕ ಮದ್ಯದಂಗಡಿಗಳು ಹಸಿರುವಲಯದಲ್ಲಿ ಆರಂಭವಾಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಎಲ್ಲೆಲ್ಲಿ?:ರಾಮನಗರ, ಹಾಸನ, ಚಿಕ್ಕಮಗಳೂರು, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ರಾಯಚೂರು, ಶಿವಮೊಗ್ಗ, ಯಾದಗಿರಿ ಮತ್ತಿತರ ಹಸಿರು ವಲಯದ ಜಿಲ್ಲೆಗಳಲ್ಲಿ ಎಂಎಸ್‌ಐಎಲ್ ಹಾಗೂ ಸಿಎಲ್-2 ಮದ್ಯದಂಗಡಿಗಳ ಮೂಲಕ ಮದ್ಯ ಮಾರಾಟ ಮಾಡಲು ಹಸಿರು ನಿಶಾನೆ ಸಿಕ್ಕಿದೆ.
ಆದರೆ, ಕೆಂಪು ವಲಯದಲ್ಲಿ ಮದ್ಯ ಮಾರಾಟ ಮಾಡಲು ಅನುಮತಿ ಸಿಕ್ಕಿಲ್ಲ. ಮುಂದಿನ ದಿನಗಳಲ್ಲಿ ಅಲ್ಲಿಯೂ ಮದ್ಯದಂಗಡಿ ತೆರೆಯುವ ಸಾಧ್ಯತೆಗಳಿವೆ. ಆದರೆ ಈ ಕುರಿತು ಇನ್ನೂ ರಾಜ್ಯ ಸರ್ಕಾರದಿಂದ ಯಾವುದೇ ಅಧಿಕೃತ ಆದೇಶ ಹೊರಬಿದ್ದಿಲ್ಲ.
ಕರೊನಾ ಸೋಂಕು ನಿಯಂತ್ರಿಸುವ ಉದ್ದೇಶದಿಂದ ರಾಜ್ಯದಲ್ಲಿ ಎಲ್ಲ ಮಾದರಿಯ ಮದ್ಯದಂಗಡಿಗಳನ್ನು ಬಂದ್ ಮಾಡಲಾಗಿತ್ತು. ರಾಜ್ಯದಲ್ಲಿ ಮದ್ಯ ಸಿಗದೆ ಬೇಸತ್ತು ಹಲವಾರು ಮದ್ಯವ್ಯಸನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು.
ದೇಶದಲ್ಲಿ ಹೀಗಿರಲಿದೆ 3ನೇ ಹಂತದ ಲಾಕ್​ಡೌನ್​; ಸಡಿಲಿಕೆಯ ನಡುವೆಯೂ ಈ ಎಲ್ಲ ಕಠಿಣ ನಿರ್ಬಂಧಗಳ ಮುಂದುವರಿಕೆ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:9 + 9 =
Remember me
