ಅಯೋಧ್ಯೆ:ರಾಮಮಂದಿರದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ಹಾಜರಾಗುವುದಿಲ್ಲ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಡ್ವಾಣಿ ಅಯೋಧ್ಯೆಗೆ ಹೋಗುವುದಿಲ್ಲ ಎಂದು ವರದಿಗಳು ತಿಳಿಸಿವೆ.
ರಾಮಮಂದಿರ ಆಂದೋಲನದ ಪ್ರಮುಖ ಮುಖವಾಗಿದ್ದ ಲಾಲ್ ಕೃಷ್ಣ ಅಡ್ವಾಣಿ ಅವರೊಂದಿಗೆ ರಾಮಮಂದಿರ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬಿಜೆಪಿಯ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಅವರನ್ನು ರಾಮಮಂದಿರ ಟ್ರಸ್ಟ್ ಆಹ್ವಾನಿಸಿದೆ. ಆದರೆ, ವಯಸ್ಸು ಮತ್ತು ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು, ಈ ಇಬ್ಬರು ನಾಯಕರು ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ.
ಮೂಲಗಳ ಪ್ರಕಾರ, ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅಯೋಧ್ಯೆಯಲ್ಲಿ ನಡೆಯುತ್ತಿರುವ ಪ್ರಾಣಪತಿಷ್ಠೆ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿಲ್ಲ. ರಾಮಮಂದಿರ ಆಂದೋಲನದ ಪ್ರಮುಖ ಮುಖವಾಗಿದ್ದ ಅಡ್ವಾಣಿ ಅವರನ್ನು ಉದ್ಘಾಟನೆಗೆ ಆಹ್ವಾನಿಸಲಾಯಿತು. ಆದರೆ ಅವರು ಕೊನೆಯ ಕ್ಷಣದಲ್ಲಿ ತಮ್ಮ ಯೋಜನೆಯನ್ನು ಬದಲಾಯಿಸಿದರು. ಅವರು ಈಗ ಅಯೋಧ್ಯೆಗೆ ಹೋಗುತ್ತಿಲ್ಲ.
ಅಡ್ವಾಣಿ 90 ರ ದಶಕದಲ್ಲಿ ರಾಮಮಂದಿರ ಚಳುವಳಿಯ ನಾಯಕರಾಗಿದ್ದರು. ಅವರ ನೇತೃತ್ವದಲ್ಲಿ, 1990 ರಲ್ಲಿ ಬಿಜೆಪಿ ಗುಜರಾತ್‌ನ ಸೋಮನಾಥದಿಂದ ರಾಮ ರಥ ಯಾತ್ರೆಯನ್ನು ಪ್ರಾರಂಭಿಸಿತು. ‘ಮಂದಿರ ವಹೀ ಬನಾಯೇಂಗೆ’ ಎಂಬ ಘೋಷಣೆಯೊಂದಿಗೆ ಅಡ್ವಾಣಿ ರಾಮಮಂದಿರ ಚಳವಳಿಯನ್ನು ಜನಸಾಮಾನ್ಯರಲ್ಲಿ ಪ್ರಸಿದ್ಧಿಗೊಳಿಸಿದ್ದರು.
ಅಮಿತಾಭ್, ಚಿರಂಜೀವಿ… ರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಯಾರೆಲ್ಲಾ ಸೆಲೆಬ್ರಿಟಿಗಳು ಬಂದ್ರು..?


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 7 =
Remember me
