ನವದೆಹಲಿ:ಲೋಕಸಭೆ ಚುನಾವಣೆಯ ಆರನೇ ಹಂತದ ಮತದಾನ ನಡೆಯುತ್ತಿರುವ ಆರು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ 58 ಕ್ಷೇತ್ರಗಳಲ್ಲಿ ಶನಿವಾರ ಮಧ್ಯಾಹ್ನ 3 ಗಂಟೆಯವರೆಗೆ ಶೇ.49.2ರಷ್ಟು ಮತದಾನವಾಗಿದೆ.
ಇದನ್ನೂ ಓದಿ:‘ಮೊದಲು ನಿಮ್ಮ ದೇಶವನ್ನು ಸ್ವಚ್ಛಗೊಳಿಸಿ’: ಪಾಕ್​ ಮಂತ್ರಿಗೆ ಕೇಜ್ರಿವಾಲ್ ಹೀಗೆನ್ನಲು ಕಾರಣವಿದೆ ನೋಡಿ..
ಚುನಾವಣಾ ಆಯೋಗದ (ಇಸಿ) ಪ್ರಕಾರ ಪಶ್ಚಿಮ ಬಂಗಾಳದಲ್ಲಿ ಗರಿಷ್ಠ 70.19 ಶೇಕಡಾ ಮತದಾನವಾಗಿದೆ. ಇಲ್ಲಿನ ಎಂಟು ಕ್ಷೇತ್ರಗಳಲ್ಲಿ ಅಲ್ಲಲ್ಲಿ ಹಿಂಸಾಚಾರ ನಡೆದಿದೆ.
ಚುನಾವಣಾ ಆಯೋಗಕ್ಕೆ ವಿವಿಧ ರಾಜಕೀಯ ಪಕ್ಷಗಳಿಂದ ಬೆಳಗ್ಗೆ 11 ಗಂಟೆಯವರೆಗೆ ಇವಿಎಂ ಅಸಮರ್ಪಕ ಕಾರ್ಯನಿರ್ವಹಣೆ, ಏಜೆಂಟರನ್ನು ಬೂತ್‌ಗಳಿಗೆ ಪ್ರವೇಶಿಸದಂತೆ ತಡೆದಿರುವುದು ಸೇರಿದಂತೆ 954 ದೂರುಗಳು ಬಂದಿವೆ. ಇಲ್ಲಿಯವರೆಗೆ ಶಾಂತಿಯುತವಾಗಿ ಮತದಾನ ನಡೆದಿದೆ ಎಂದು ಚುನಾವಣಾ ಸಮಿತಿ ಹೇಳಿದೆ.
ಜಾರ್ಖಂಡ್‌ – ಶೇ. 54.34, ಒಡಿಶಾ – ಶೇ. 48.44, ಉತ್ತರ ಪ್ರದೇಶ – ಶೇ. 43.95, ಬಿಹಾರ – ಶೇ. 45.21, ಜಮ್ಮು ಮತ್ತು ಕಾಶ್ಮೀರ – ಶೇ. 44.41, ಹರಿಯಾಣ – ಶೇ. 46.26 ಮತ್ತು ದೆಹಲಿ -ಶೇ. 44.58 ಮತದಾನವಾಗಿದೆ ಎಂದು ಇಸಿ ಮಾಹಿತಿ ನೀಡಿದೆ.
ರಾಷ್ಟ್ರ ರಾಜಧಾನಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವರಾದ ಎಸ್.ಜೈಶಂಕರ್, ಹರ್ದೀಪ್ ಸಿಂಗ್ ಪುರಿ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೆಹಲಿ ಸಚಿವ ಅತಿಶಿ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಮತ್ತು ನಿರ್ಗಮಿತ ಪೂರ್ವ ದೆಹಲಿ ಸಂಸದ ಗೌತಮ್ ಗಂಭೀರ್ ಮತ ಚಲಾಯಿಸಿದವರಲ್ಲಿ ಸೇರಿದ್ದಾರೆ.
ದೆಹಲಿ ಅಲ್ಲದೆ, ಉತ್ತರ ಪ್ರದೇಶದ 14 ಕ್ಷೇತ್ರಗಳು, ಹರಿಯಾಣದ ಎಲ್ಲಾ 10 ಸ್ಥಾನಗಳು, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ ಎಂಟು ಸ್ಥಾನಗಳು, ಒಡಿಶಾದ 6 ಸ್ಥಾನಗಳು, ಜಾರ್ಖಂಡ್‌ನ 4 ಸ್ಥಾನಗಳು ಮತ್ತು ಜಮ್ಮು ಮತ್ತು ಕಾಶ್ಮೀರದ ಒಂದು ಸ್ಥಾನಕ್ಕೆ ಮತದಾನ ನಡೆಯುತ್ತಿದೆ. ಅದೇ ರೀತಿ ಒಡಿಶಾದ 42 ವಿಧಾನಸಭಾ ಕ್ಷೇತ್ರಗಳು ಮತ್ತು ಹರಿಯಾಣದ ಕರ್ನಾಲ್ ವಿಧಾನಸಭಾ ಕ್ಷೇತ್ರಗಳಿಗೆ ಏಕಕಾಲದಲ್ಲಿ ಮತದಾನ ನಡೆಯುತ್ತಿದೆ.
ಬೆಳಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿದ್ದು, ಜನರು ಸರತಿ ಸಾಲಿನಲ್ಲಿ ನಿಂತಿರುವುದು ಕಂಡು ಬಂತು.
ಆಫ್ರಿಕನ್ ಹಂದಿ ಜ್ವರ: ಮಿಜೋರಾಂನಲ್ಲಿ 965 ಹಂದಿ ಹತ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + eighteen =
Remember me
