ವಿಜಯವಾಡ: ರಾಜ್ಯದಲ್ಲಿ ಆಡಳಿತರೂಢ ವೈಸಿಪಿಯನ್ನು ಕಿತ್ತೊಗೆಯುವ ಉದ್ದೇಶದಿಂದ ಟಿಡಿಪಿ ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ. ಈ ನಿಟ್ಟಿನಲ್ಲಿ ಮುಂಬರುವ ಚುನಾವಣೆಗೆ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ತನ್ನ ಕೊನೆಯ ಅಭ್ಯರ್ಥಿಗಳ ಪಟ್ಟಿಯನ್ನು ಶುಕ್ರವಾ ಬಿಡುಗಡೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ ಇತ್ತೀಚೆಗೆ ಟಿಡಿಪಿಗೆ ಸೇರ್ಪಡೆಯಾದ ವೈಎಸ್ಆರ್​ ಕಾಂಗ್ರೆಸ್​ ಪಕ್ಷದ ಮಾಜಿ ಸಂಸದರಿಗೆ ಟಿಕೆಟ್​ ನೀಡಿಲಾಗಿದೆ.
ಇದನ್ನೂ ಓದಿ:ಕಾಂಗ್ರೆಸ್‌ ಬಳಿಕ ಸಿಪಿಐಗೆ 11 ಕೋಟಿ ರೂ. ತೆರಿಗೆ ಪಾವಿಸುವಂತೆ ನೋಟಿಸ್ ನೀಡಿದ ಐಟಿ!
ಇತ್ತೀಚೆಗಷ್ಟೇ ಆಡಳಿತಾರೂಢ ವೈಎಸ್‌ಆರ್‌ಸಿಪಿಯಿಂದ ಹೊರಬಂದ ಎಂ ಶ್ರೀನಿವಾಸುಲು ರೆಡ್ಡಿಯನ್ನು ಒಂಗೋಲ್‌ನಿಂದ ಟಿಡಿಪಿ ಕಣಕ್ಕಿಳಿಸಿದೆ. ಅವರು 2019 ರಲ್ಲಿ ವೈಎಸ್‌ಆರ್‌ ಪಕ್ಷದ ಅಭ್ಯರ್ಥಿಯಾಗಿ ಅದೇ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.
ವಿಜಯನಗರದಿಂದ ಕೆ ಅಪ್ಪಲನಾಯ್ಡು, ಅನಂತಪುರದಿಂದ ಎ ಲಕ್ಷ್ಮೀನಾರಾಯಣ ಮತ್ತು ಕಡಪದಿಂದ ಸಿ ಭೂಪೇಶ್ ರೆಡ್ಡಿ ಅವರಿಗೆ ಟಿಕೆಟ್​ ನೀಡಲಾಗಿದೆ.ನಾಲ್ಕು ಹೆಸರುಗಳ ಘೋಷಣೆಯೊಂದಿಗೆ, ಟಿಡಿಪಿ 17 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ, ಅದನ್ನು ರಾಜ್ಯದಲ್ಲಿ ಎನ್ಡಿಎ ಭಾಗವಾಗಿ ಹಂಚಿಕೆ ಮಾಡಲಾಗಿದೆ.
ಯಾವ ಪಕ್ಷಕ್ಕೆ ಎಷ್ಟು ಸ್ಥಾನ?: ಲೋಕಸಭಾ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷ 17 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ, ಬಿಜೆಪಿ 6ರಲ್ಲಿ ಹಾಗೂ ಪವನ್​ ಕಲ್ಯಾಣ್​ರ ಜನಸೇನಾ ಪಕ್ಷ 2 ರಲ್ಲಿ ಸ್ಪರ್ಧಿಸಲಿದೆ. 175 ವಿಧಾನಸಭಾ ಕ್ಷೇತ್ರಗಳ ಪೈಕಿ 144ರಲ್ಲಿ ಟಿಡಿಪಿ ಸ್ಪರ್ಧಿಸಲಿದೆ.
ಜನಸೇನಾ 21 ಮತ್ತು ಬಿಜೆಪಿ 10ರಲ್ಲಿ ಸ್ಪರ್ಧಿಸಲಿದೆ. ಆದರೆ ಪಕ್ಷಗಳಿಗೆ ಮೀಸಲಾದ ಸ್ಥಾನಗಳ ಹೊರತಾಗಿ ಯಾವ್ಯಾವ ಕ್ಷೇತ್ರಗಳಲ್ಲಿ ಯಾರನ್ನು ಕಣಕ್ಕಿಳಿಸಬೇಕು, ಟಿಕೆಟ್ ನೀಡಿದರೆ ಯಾರು ಗೆಲ್ಲುತ್ತಾರೆ ಎಂಬ ಬಗ್ಗೆ ಈ ಮೂರೂ ಪಕ್ಷಗಳ ಪ್ರಮುಖ ನಾಯಕರು ಮತ್ತೊಮ್ಮೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಆ ಬಳಿಕ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.
ನನ್ನದು ಪಕ್ಕಾ ಲವ್‌ ಮ್ಯಾರೇಜ್‌, ಆದರೆ ಒಂದು ಕಂಡೀಷನ್….: ನಟ ವಿಜಯ್​ ಮನದಾಳದ ಮಾತು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 9 =
Remember me
